ಜಮ್ಮು ಕಾಶ್ಮೀರದಲ್ಲಿ ಹಿಮಪಾತ 
ದೇಶ

ಜಮ್ಮು-ಕಾಶ್ಮೀರದಲ್ಲಿ ಈ ಋತುವಿನ ಮೊದಲ ಹಿಮಪಾತ: ಅನಂತನಾಗ್‌ ನಲ್ಲಿ 2000 ವಾಹನಗಳು ಸಿಲುಕಿ ಪರದಾಟ!

ಕಾಜಿಗುಂಡ್ ಮತ್ತು ಸುರಂಗದ ನಡುವಿನ ರಸ್ತೆಯ ಸದ್ಯದ ಪರಿಸ್ಥಿತಿಯ ಕುರಿತು ಅನಂತನಾಗ್ ಜಿಲ್ಲೆಯ ಡಿಸಿ ಅವರೊಂದಿಗೆ ಮಾತನಾಡಿದ್ದೇನೆ

ಶ್ರೀನಗರ: ಈ ವರ್ಷದ ಮೊದಲ ಹಿಮಪಾತದಿಂದಾಗಿ ಜಮ್ಮು ಮತ್ತು ಕಾಶ್ಮೀರದ (ಜೆ-ಕೆ) ಅನಂತನಾಗ್‌ನ ಖಾಜಿಗುಂಡ್ ಪಟ್ಟಣದಲ್ಲಿ ಸುಮಾರು 2,000 ವಾಹನಗಳು ಸಿಲುಕಿಕೊಂಡಿವೆ ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಸದ್ಯದ ಪರಿಸ್ಥಿತಿಯ ಬಗ್ಗೆ ಅನಂತನಾಗ್‌ನ ಡೆಪ್ಯೂಟಿ ಕಮಿಷನರ್ ಅವರೊಂದಿಗೆ ಮಾತನಾಡಿದ್ದೇನೆ ಎಂದು ಸಿಎಂ ಅಬ್ದುಲ್ಲಾ ತಿಳಿಸಿದ್ದಾರೆ. ಭಾರೀ ವಾಹನಗಳು ಚಲಿಸಲು ಅನುಮತಿ ನೀಡಲಾಗಿದೆ. ಉಳಿದ ವಾಹನಗಳನ್ನು ತೆರವುಗೊಳಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ಕಾಜಿಗುಂಡ್ ಮತ್ತು ಸುರಂಗದ ನಡುವಿನ ರಸ್ತೆಯ ಸದ್ಯದ ಪರಿಸ್ಥಿತಿಯ ಕುರಿತು ಅನಂತನಾಗ್ ಜಿಲ್ಲೆಯ ಡಿಸಿ ಅವರೊಂದಿಗೆ ಮಾತನಾಡಿದ್ದೇನೆ. ಹಿಮಾವೃತ ಪರಿಸ್ಥಿತಿಗಳು ಟ್ರಾಫಿಕ್ ಬ್ಯಾಕ್‌ಅಪ್‌ಗೆ ಕಾರಣವಾಗಿವೆ. ಎರಡೂ ದಿಕ್ಕುಗಳಲ್ಲಿ ವಾಹನಗಳು ಸಿಕ್ಕಿಬಿದ್ದಿದ್ದು ನಿಧಾನವಾಗಿ ಚಲಿಸುತ್ತಿವೆ ಮತ್ತು ಅಗತ್ಯವಿರುವಲ್ಲಿ ಸಹಾಯ ಮಾಡಲಾಗುತ್ತಿದೆ ಎಂದಿದ್ದಾರೆ.

ಡಿಸಿ ತಮ್ಮ ತಂಡದೊಂದಿಗೆ ಸ್ಥಳದಲ್ಲಿದ್ದ ಮೊಕ್ಕಾಂ ಹೂಡಿದ್ದಾರೆ. ಕುಟುಂಬಗಳು ಹಾಗೂ ಮಕ್ಕಳಿರುವ ವಾಹನಗಳು ಚಲಿಸಲು ಆದ್ಯತೆ ನೀಡಬೇಕು ಎಂದು ನಾನು ಅವರಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ. ಅಗತ್ಯವಿದ್ದರೆ ರಾತ್ರಿಯ ತಂಗಲು ವ್ಯವಸ್ಥೆ ಮಾಡಲಾಗುವುದು. ಯಾವುದೇ ವೈದ್ಯಕೀಯ ತುರ್ತು ಸಂದರ್ಭದಲ್ಲಿ ಡಿಸಿ ಆಂಬ್ಯುಲೆನ್ಸ್‌ನೊಂದಿಗೆ ಇರುತ್ತಾರೆ" ಎಂದು ಒಮರ್ ಅಬ್ದುಲ್ಲಾ ತಿಳಿಸಿದ್ದಾರೆ.

ಬನಿಹಾಲ್‌ನಿಂದ ಶ್ರೀನಗರದವರೆಗೆ ನಿರಂತರವಾಗಿ ಹಿಮ ಬೀಳುತ್ತಿದೆ. ಪರಿಸ್ಥಿತಿಗಳು ಸಾಕಷ್ಟು ಅಪಾಯದಿಂದ ಕೂಡಿದೆ. ಸುರಂಗ ಮತ್ತು ಖಾಜಿಗುಂಡ್ ನಡುವೆ ಸುಮಾರು 2000 ವಾಹನಗಳು ಸಿಲುಕಿಕೊಂಡಿವೆ ಎಂದು ನನಗೆ ಮಾಹಿತಿ ಬಂದಿದ್ದು, ನನ್ನ ಕಚೇರಿಯು ನಿರಂತರ ಸಂಪರ್ಕದಲ್ಲಿದೆ. ದಕ್ಷಿಣ ಕಾಶ್ಮೀರದಲ್ಲಿ ಜಿಲ್ಲಾಡಳಿತ ಹಿಮ ತೆರವು ಮಾಡಿದೆ, ಆದರೆ ರಸ್ತೆ ತುಂಬಾ ಮಂಜುಗಡ್ಡೆಯಾಗಿದೆ ಎಂದು ಒಮರ್ ಅಬ್ದುಲ್ಲಾ ತಿಳಿಸಿದ್ದಾರೆ. ಕೇಂದ್ರಾಡಳಿತ ಪ್ರದೇಶದ ಬಾರಾಮುಲ್ಲಾ ಜಿಲ್ಲೆಯಲ್ಲೂ ಶುಕ್ರವಾರ ಹೊಸ ಹಿಮಪಾತವಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಡಿಸೆಂಬರ್ 30 ರವರೆಗೆ ಲಘು ಮಳೆ ಮತ್ತು ಹಿಮಪಾತವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT