ಕೊಳವೆಬಾವಿಗೆ ಬಿದ್ದಿದ್ದ ಬಾಲಕನ ರಕ್ಷಣಾ ಕಾರ್ಯಾಚರಣೆ 
ದೇಶ

ಮಧ್ಯ ಪ್ರದೇಶ: 140 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ 140 ಅಡಿ ಕೊಳವೆಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕನನ್ನು ರಕ್ಷಿಸಲು 16 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದರೂ ಪ್ರಯೋಜನವಾಗಿಲ್ಲ. ಪ್ರಯತ್ನದ ಹೊರತಾಗಿಯೂ ಬಾಲಕ ಕೊನೆಯುಸಿರೆಳೆದಿದ್ದಾನೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಭೋಪಾಲ್: ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ 140 ಅಡಿ ಕೊಳವೆಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕನನ್ನು ರಕ್ಷಿಸಲು 16 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದರೂ ಪ್ರಯೋಜನವಾಗಿಲ್ಲ. ಪ್ರಯತ್ನದ ಹೊರತಾಗಿಯೂ ಬಾಲಕ ಕೊನೆಯುಸಿರೆಳೆದಿದ್ದಾನೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಗುನಾ ಜಿಲ್ಲಾ ಕೇಂದ್ರದಿಂದ 50 ಕಿಮೀ ದೂರದಲ್ಲಿರುವ ರಾಘೋಗಢ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪಿಪ್ಲಿಯಾ ಗ್ರಾಮದಲ್ಲಿ ಶನಿವಾರ ಸಂಜೆ 5 ಗಂಟೆ ಸುಮಾರಿಗೆ ಬಾಲಕ ಸುಮಿತ್ ಮೀನಾ ಎಂಬಾತ ಕೊಳವೆಬಾವಿಗೆ ಬಿದ್ದಿದ್ದ.

ಭಾನುವಾರ ಬೆಳಗ್ಗೆ 9.30ರ ಸುಮಾರಿಗೆ ಆತನನ್ನು ಹೊರಗೆ ಕರೆತಂದಾಗ ಆತ ಯಾವುದಕ್ಕೂ ಪ್ರತಿಕ್ರಿಯೆ ನೀಡುತ್ತಿರಲಿಲ್ಲ. ಕೂಡಲೇ ಆತನನ್ನು ಲೈಫ್ ಸಪೋರ್ಟ್ ಸಿಸ್ಟಂ ಮೂಲಕ ರಾಘೋಘಢದಲ್ಲಿರುವ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಗುನಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಸಿನ್ಹಾ ಪಿಟಿಐಗೆ ತಿಳಿಸಿದ್ದಾರೆ.

'ಕ್ಷಮಿಸಿ, ಆತ ಇನ್ನಿಲ್ಲ' ಎಂದು ಗುನಾ ಜಿಲ್ಲಾ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಡಾ. ರಾಜ್‌ಕುಮಾರ್ ರಿಷೀಶ್ವರ್ ಆಸ್ಪತ್ರೆಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಚಳಿಯ ವಾತಾವರಣದಲ್ಲಿ ಇಡೀ ರಾತ್ರಿ ಮಗು ಕಿರಿದಾದ ಬೋರ್‌ವೆಲ್‌ನಲ್ಲಿತ್ತು. ಹೀಗಾಗಿ, ಆತನ ಕೈ ಮತ್ತು ಕಾಲುಗಳು ತೇವಗೊಂಡು, ಊದಿಕೊಂಡಿದ್ದವು. ಆತನ ಬಟ್ಟೆಗಳು ಒದ್ದೆಯಾಗಿದ್ದು, ಬಾಯಿಯಲ್ಲಿ ಕೆಸರು ಕಂಡುಬಂದಿದೆ ಎಂದು ಅವರು ಹೇಳಿದರು.

ರಕ್ಷಣಾ ತಂಡ ರಾತ್ರಿಯಿಡೀ ಕೆಲಸ ಮಾಡಿದರು. ಪಿಟ್ ಮತ್ತು ಬೋರ್‌ವೆಲ್ ನಡುವಿನ ಮಾರ್ಗದ ಮೂಲಕ ಬಾಲಕನನ್ನು ತಲುಪಲು ಸಮಾನಾಂತರ ಹೊಂಡವನ್ನು ತೋಡಿದ್ದಾರೆ ಎಂದು ರಾಘೋಗಢ ಕಾಂಗ್ರೆಸ್ ಶಾಸಕ ಜೈವರ್ಧನ್ ಸಿಂಗ್ ಸ್ಥಳದಿಂದ ಫೋನ್ ಮೂಲಕ ಪಿಟಿಐಗೆ ತಿಳಿಸಿದರು.

ಸುಮಾರು 140 ಅಡಿ ಆಳದ ಬೋರ್‌ವೆಲ್‌ನಲ್ಲಿ ಬಾಲಕ 39 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದನು. ಬೋರ್‌ವೆಲ್‌ನಲ್ಲಿ ನೀರು ಸಿಕ್ಕಿಲ್ಲದ ಕಾರಣ ಕೇಸಿಂಗ್ ಹಾಕಿರಲಿಲ್ಲ. ಶನಿವಾರ ಸಂಜೆ ಭೋಪಾಲ್‌ನಿಂದ ಎನ್‌ಡಿಆರ್‌ಎಫ್ ತಂಡ ಅಲ್ಲಿಗೆ ಆಗಮಿಸಿ ಕಾರ್ಯಾಚರಣೆಯಲ್ಲಿ ನೆರವಾಯಿತು ಎಂದು ಗುನಾ ಜಿಲ್ಲೆಯ ಜಿಲ್ಲಾಧಿಕಾರಿ ಸತೇಂದ್ರ ಸಿಂಗ್ ಶನಿವಾರ ತಿಳಿಸಿದ್ದಾರೆ.

ಶನಿವಾರ ಸಂಜೆ ಎಷ್ಟು ಹೊತ್ತಾದರೂ ಬಾಲಕ ಕಾಣದಿದ್ದಾಗ ಆತನ ಕುಟುಂಬಸ್ಥರು ಗಾಬರಿಗೊಂಡಿದ್ದಾರೆ. ಹುಡುಕಾಟ ನಡೆಸಿದಾಗ ಆತ ಬೋರ್‌ವೆಲ್‌ಗೆ ಬಿದ್ದಿರುವುದು ಗೊತ್ತಾಗಿದೆ ಎಂದು ಸ್ಥಳೀಯರೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT