ಸಾಂದರ್ಭಿಕ ಚಿತ್ರ 
ದೇಶ

ಜಮ್ಮು-ಕಾಶ್ಮೀರ: 2024ರಲ್ಲಿ ಹತ್ಯೆಯಾದ ಶೇ.60 ರಷ್ಟು ಉಗ್ರರು ಪಾಕಿಸ್ತಾನಿಗಳು- ಭಾರತೀಯ ಸೇನೆ!

ರಜೌರಿ, ಪೂಂಚ್, ದೋಡಾ, ಕಿಶ್ತ್ವಾರ್, ಕಥುವಾ ಮತ್ತು ರಿಯಾಸಿ ಜಿಲ್ಲೆಗಳು ಸೇರಿದಂತೆ ಜಮ್ಮು ಪ್ರದೇಶದ ಈ ಪ್ರದೇಶದಲ್ಲಿ ಹೆಚ್ಚುವರಿ ನಿಯೋಜನೆ ಪಡೆಗಳನ್ನು ನಿಯೋಜಿಸುವ ಮೂಲಕ ಉಗ್ರರ ಚಟುವಟಿಕೆಗಳನ್ನು ನಿಯಂತ್ರಿಸಲಾಗಿದೆ.

ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ 2024ರಲ್ಲಿ ಹತ್ಯೆಯಾದ ಶೇ.60 ರಷ್ಟು ಉಗ್ರರು ಪಾಕಿಸ್ತಾನಿಗಳಾಗಿದ್ದಾರೆ ಎಂದು ಭಾರತೀಯ ಸೇನಾ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಗಡಿ ನಿಯಂತ್ರಣ ರೇಖೆಯಲ್ಲಿ ಉಗ್ರರ ಒಳನುಸುಳುವಿಕೆ ಯತ್ನಗಳ ಸಮಯದಲ್ಲಿ ನಡೆದ ಗುಂಡಿನ ಚಕಮಕಿ ಸೇರಿದಂತೆ ವಿವಿಧ ಎನ್ ಕೌಂಟರ್ ಮತ್ತು ಕಾರ್ಯಾಚರಣೆಗಳಲ್ಲಿ ಜಮ್ಮು ಮತ್ತು ಕಾಶ್ಮೀರ ವಲಯ ಸೇರಿದಂತೆ ವಿವಿಧ ಕಡೆಗಳಲ್ಲಿ ಸುಮಾರು 75 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಎಎನ್ ಐ ಸುದ್ದಿಸಂಸ್ಥೆಗೆ ಅವರು ಮಾಹಿತಿ ನೀಡಿದ್ದಾರೆ.

ಭಾರತದ ಮೇಲೆ ಪ್ರಮುಖ ಗಮನ ಕೇಂದ್ರೀಕರಿಸಿರುವ ಪಾಕಿಸ್ತಾನ ವಿಶ್ವದ ಬಹುತೇಕ ಎಲ್ಲಾ ಭಾಗಗಳಿಗೆ ಉಗ್ರರನ್ನು ರಫ್ತು ಮಾಡುವ ದೊಡ್ಡ ಕೇಂದ್ರಗಳಲ್ಲಿ ಒಂದಾಗಿದ್ದು, ಕಳೆದ ವರ್ಷದಿಂದ ಜಮ್ಮು ಪ್ರದೇಶದಲ್ಲಿ ಭಯೋತ್ಪಾದನೆಯನ್ನು ಹೆಚ್ಚಿಸಲು ಪ್ರಯತ್ನಿಸಿದೆ.

ಆದರೆ, ರಜೌರಿ, ಪೂಂಚ್, ದೋಡಾ, ಕಿಶ್ತ್ವಾರ್, ಕಥುವಾ ಮತ್ತು ರಿಯಾಸಿ ಜಿಲ್ಲೆಗಳು ಸೇರಿದಂತೆ ಜಮ್ಮು ಪ್ರದೇಶದ ಈ ಪ್ರದೇಶದಲ್ಲಿ ಹೆಚ್ಚುವರಿ ನಿಯೋಜನೆ ಪಡೆಗಳನ್ನು ನಿಯೋಜಿಸುವ ಮೂಲಕ ಉಗ್ರರ ಚಟುವಟಿಕೆಗಳನ್ನು ನಿಯಂತ್ರಿಸಲಾಗಿದೆ. ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕ ಗುಂಪುಗಳಲ್ಲಿ ಸ್ಥಳೀಯರ ನೇಮಕಾತಿ ಕೂಡ ತುಂಬಾ ಕಡಿಮೆಯಾಗಿದೆ. ಈ ವರ್ಷ ಕೇವಲ ನಾಲ್ಕು ಸ್ಥಳೀಯರು ಮಾತ್ರ ಈ ಗುಂಪುಗಳಿಗೆ ಸೇರಿದ್ದಾರೆ ಎಂದು ಅವರು ಹೇಳಿದ್ದಾರೆ.

ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮತ್ತು ಉತ್ತರ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಎಂವಿ ಸುಚೇಂದ್ರ ಕುಮಾರ್ ಅವರು ವೈಟ್ ನೈಟ್ ಕಾರ್ಪ್ಸ್ ನೋಡಿಕೊಳ್ಳುತ್ತಿರುವ ಪ್ರದೇಶದಿಂದ ಭಯೋತ್ಪಾದಕರನ್ನು ನಿರ್ಮೂಲನೆ ಮಾಡುವತ್ತ ಗಮನ ಹರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಹಸಸಿಂಹ, ಏಜೆಂಟ್ ಅಮರ್ ಚಿತ್ರ ಖ್ಯಾತಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ನಿಧನ

ಹೊಸ PMO ಕಚೇರಿ 'ಸೇವಾ ತೀರ್ಥ' ಕಟ್ಟಡಕ್ಕೆ ಪ್ರಧಾನಿ ಮೋದಿ ಸ್ಥಳಾಂತರ: ಮೊದಲ ದಿನವೇ ಹಲವು ಪ್ರಮುಖ ನಿರ್ಧಾರ!

ಸೆಂಟ್ರಲ್ ಏಜೆನ್ಸಿಗಳ ಒತ್ತಡದಿಂದ NCP ತೊರೆದಿದ್ದ ಅಜಿತ್ ಪವಾರ್, ಮತ್ತೆ ಎರಡು ಬಣಗಳ ವಿಲೀನ ಬಯಸಿದ್ದರು- NCP SP ನಾಯಕ

ಪ್ರೇಮಿಗಳ ದಿನಾಚರಣೆಗೆ ಕ್ಷಣಗಣನೆ: ಹಾರ್ದಿಕ್ ಪಾಂಡ್ಯಗೆ ಮಹಿಕಾ ಕೊಟ್ಟ 'ಸ್ಪೆಷಲ್ ಗಿಫ್ಟ್' ಏನು ಗೊತ್ತಾ? Video

ವಿಜಯ್ ಗೆ ಜನರಿಗೆ ಸಹಾಯ ಮಾಡುವ ಉದ್ದೇಶ ಇಲ್ಲ: ಸಿಂಪಲ್ ಆಗಿ ಸಿಎಂ ಆಗುವ ಬಯಕೆ- ಡಿಎಂಕೆ ತಿರುಗೇಟು

SCROLL FOR NEXT