ಅಖಿಲೇಶ್ ಯಾದವ್ 
ದೇಶ

EVM ನಂಬಿಕೆಗೆ ಅರ್ಹವಾಗಿಲ್ಲ: ಬ್ಯಾಲೆಟ್ ಪೇಪರ್ ಮತದಾನದ ಪರ ಧ್ವನಿ ಎತ್ತಿದ ಅಖಿಲೇಶ್!

ಜರ್ಮನಿಯಂತಹ ದೇಶ ಕೂಡ ಬ್ಯಾಲೆಟ್ ಪೇಪರ್ ಬಳಸಿ ಚುನಾವಣೆ ನಡೆಸುತ್ತದೆ. ಆದರೆ ಭಾರತದಲ್ಲಿ, ಪಟ್ಟಭದ್ರ ಹಿತಾಸಕ್ತಿಗಳನ್ನು ಪೂರೈಸಲು ಇವಿಎಂಗಳ ಮೂಲಕ ಚುನಾವಣೆಗಳನ್ನು ನಡೆಸಲಾಗುತ್ತಿದೆ.

ಲಖನೌ: ವಿದ್ಯುನ್ಮಾನ ಮತಯಂತ್ರಗಳು (EVM)ನಂಬಿಕೆ ಅರ್ಹವಾಗಿಲ್ಲ ಎಂದು ಹೇಳಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಮತಪತ್ರಗಳ ಮೂಲಕ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಜರ್ಮನಿಯಲ್ಲಿರುವ ಭಾರತೀಯ ಮೂಲದ ಸಂಸತ್ ಸದಸ್ಯ ರಾಹುಲ್ ಕುಮಾರ್ ಕಾಂಬೋಜ್ ಅವರೊಂದಿಗೆ ಎಸ್‌ಪಿ ಕೇಂದ್ರ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಅಖಿಲೇಶ್ ಯಾದವ್, ಜರ್ಮನಿಯಂತಹ ದೇಶ ಕೂಡ ಬ್ಯಾಲೆಟ್ ಪೇಪರ್ ಬಳಸಿ ಚುನಾವಣೆ ನಡೆಸುತ್ತದೆ. ಆದರೆ ಭಾರತದಲ್ಲಿ, ಪಟ್ಟಭದ್ರ ಹಿತಾಸಕ್ತಿಗಳನ್ನು ಪೂರೈಸಲು ಇವಿಎಂಗಳ ಮೂಲಕ ಚುನಾವಣೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

ಇವಿಎಂಗಳನ್ನು ಯಾರೂ ನಂಬುವುದಿಲ್ಲ, ಚುನಾವಣೆಯಲ್ಲಿ ಗೆದ್ದವರ ಮುಖವೂ ಸಹ ವ್ಯವಸ್ಥೆಯ ಮೇಲೆ ನಂಬಿಕೆಯಿಲ್ಲದ ಕಾರಣ ನಿರಾಶೆಗೊಂಡಂತಿರುತ್ತದೆ ಎಂದು ಹೇಳುವ ಮೂಲಕ ಆತ್ಮವಿಶ್ವಾಸ ತುಂಬುವ ಚುನಾವಣೆಯ ಅಗತ್ಯವನ್ನು ಒತ್ತಿ ಹೇಳಿದರು.

ಜರ್ಮನಿಯ ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯ ಪ್ರಯೋಜನ ಕುರಿತು ಮಾತನಾಡಿದ ಕಾಂಬೋಜ್, ಜರ್ಮನಿಯಲ್ಲಿ ಈಗಲೂ ಬ್ಯಾಲೆಟ್ ಪೇಪರ್ ಬಳಸಿ ಚುನಾವಣೆ ನಡೆಸಲಾಗುತ್ತದೆ. ಯಾವುದೇ ವ್ಯತ್ಯಾಸಗಳನ್ನು ಮರುಎಣಿಕೆಯ ಮೂಲಕ ಪರಿಹರಿಸಬಹುದಾಗಿದ್ದು, ಇದೊಂದು ಪ್ರಮುಖ ವ್ಯವಸ್ಥೆಯಾಗಿದೆ ಎಂದರು.

ಲಖನೌ ಭೇಟಿ ಮತ್ತು ಯಾದವ್ ಅವರೊಂದಿಗಿನ ದೀರ್ಘಕಾಲದ ಸಂಬಂಧ ಕುರಿತು ಮಾತನಾಡಿದ ಕಾಂಬೋಜ್, ಭಾರತೀಯ ಮೂಲದ ವ್ಯಕ್ತಿಗಳು ಮತ್ತು ಜರ್ಮನಿಯ ನಡುವೆ ಸಹಯೋಗವನ್ನು ಬೆಳೆಸುವಲ್ಲಿ ನನ್ನ ಪ್ರಯತ್ನಗಳು ಕೇಂದ್ರೀಕೃತವಾಗಿವೆ. ಇದರಿಂದಾಗಿ ಎರಡೂ ದೇಶಗಳ ಗುಣಗಳು ಒಟ್ಟಿಗೆ ಬರುತ್ತವೆ. ಸಾಂಸ್ಕೃತಿಕ ವಿನಿಮಯವನ್ನು ಸುಗಮಗೊಳಿಸುವ ಗುರಿ ಹೊಂದಿದ್ದೇವೆ. ಮತ್ತು ಜರ್ಮನಿಯಲ್ಲಿ ಮುಂಬರುವ ಸಾಂಸ್ಕೃತಿಕ ಉತ್ಸವಗಳಲ್ಲಿ ಭಾಗವಹಿಸಲು ಎಲ್ಲರನ್ನು ಆಹ್ವಾನಿಸುತ್ತೇನೆ, ವೀಸಾ ಸಮಸ್ಯೆಗಳು ಇನ್ನು ಮುಂದೆ ಅಡ್ಡಿಯಾಗುವುದಿಲ್ಲ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT