ದಿಲೀಪ್ ಶಂಕರ್ 
ದೇಶ

Thiruvananthapuram: ಹೋಟೆಲ್ ಕೋಣೆಯಲ್ಲಿ ಮಲಯಾಳಂ ನಟ ದಿಲೀಪ್ ಶಂಕರ್ ಶವವಾಗಿ ಪತ್ತೆ!

ದಿಲೀಪ್ ನಾಲ್ಕು ದಿನಗಳ ಹಿಂದೆ ಹೋಟೆಲ್‌ಗೆ ಚೆಕ್ ಇನ್ ಆಗಿದ್ದರು. ಹೋಟೆಲ್ ಸಿಬ್ಬಂದಿ ಪ್ರಕಾರ, ಕಳೆದ ಎರಡು ದಿನಗಳಿಂದ ಅವರು ತಮ್ಮ ಕೊಠಡಿಯಿಂದ ಹೊರಗೆ ಕಾಲಿಟ್ಟಿರಲಿಲ್ಲ.

ತಿರುವನಂತಪುರ: ಚಲನಚಿತ್ರ ಮತ್ತು ಕಿರುತೆರೆ ನಟ ದಿಲೀಪ್ ಶಂಕರ್ ಭಾನುವಾರ ತಿರುವನಂತಪುರದ ವ್ಯಾನ್‌ರಾಸ್ ಜಂಕ್ಷನ್ ಬಳಿಯ ಹೋಟೆಲ್ ಕೋಣೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಘಟನೆ ನಂತರ ಕಂಟೋನ್ಮೆಂಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದಿಲೀಪ್ ನಾಲ್ಕು ದಿನಗಳ ಹಿಂದೆ ಹೋಟೆಲ್‌ಗೆ ಚೆಕ್ ಇನ್ ಆಗಿದ್ದರು. ಹೋಟೆಲ್ ಸಿಬ್ಬಂದಿ ಪ್ರಕಾರ, ಕಳೆದ ಎರಡು ದಿನಗಳಿಂದ ಅವರು ತಮ್ಮ ಕೊಠಡಿಯಿಂದ ಹೊರಗೆ ಕಾಲಿಟ್ಟಿರಲಿಲ್ಲ. ಭಾನುವಾರ, ಅವರ ಕೊಠಡಿಯಿಂದ ದುರ್ವಾಸನೆ ಹೊರಹೊಮ್ಮುವುದನ್ನು ಗಮನಿಸಿದ ನಂತರ ಬಾಗಿಲು ತೆರೆದು ನೋಡಿದಾಗ ನಟ ಸತ್ತಿರುವುದು ಪತ್ತೆಯಾಗಿದೆ.

ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ್ದಾರೆ. ಕೊಠಡಿಯನ್ನು ಪರೀಕ್ಷಿಸಲು ವಿಧಿವಿಜ್ಞಾನ ತಂಡವನ್ನು ನಿಯೋಜಿಸಲಾಗಿದೆ ಎಂದು ಕಂಟೋನ್ಮೆಂಟ್ ಎಸಿಪಿ ತಿಳಿಸಿದ್ದಾರೆ.

ಸದ್ಯಕ್ಕೆ ಯಾವುದೇ ರೀತಿಯ ಅನುಮಾನಗಳು ಇಲ್ಲ. ಮರಣೋತ್ತರ ಪರೀಕ್ಷೆಯ ನಂತರವೇ ಸಾವಿಗೆ ನಿಖರವಾದ ಕಾರಣ ಪತ್ತೆಯಾಗಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ದಿಲೀಪ್ ಅವರ ಸಹ ನಟರು ಅವರಿಗೆ ಫೋನ್ ಕರೆ ಮಾಡಿ ಸಂಪರ್ಕಿಸಲು ಪ್ರಯತ್ನಿಸಿದ್ದಾರೆ. ಆದರೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಕಳವಳಗೊಂಡ ಅವರು ಅವರನ್ನು ಪರೀಕ್ಷಿಸಲು ಹೋಟೆಲ್‌ಗೆ ಭೇಟಿ ನೀಡಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT