ಎಎಪಿ ವರಿಷ್ಠ ಅರವಿಂದ ಕೇಜ್ರಿವಾಲ್ 
ದೇಶ

ದೆಹಲಿಯಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಅರ್ಚಕರು, ಗ್ರಂಥಿಗಳಿಗೆ ತಿಂಗಳಿಗೆ ₹ 18,000: ಅರವಿಂದ ಕೇಜ್ರಿವಾಲ್

ಮುಂದಿನ ವರ್ಷ ಫೆಬ್ರುವರಿಯಲ್ಲಿ ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಸತತ ನಾಲ್ಕನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಳ್ಳಲು ಎಎಪಿ ಪ್ರಯತ್ನ ನಡೆಸುತ್ತಿದೆ. ಹಲವು ವಿಶೇಷ ಯೋಜನೆಗಳನ್ನು ಘೋಷಿಸುತ್ತಿದೆ.

ನವದೆಹಲಿ: ದೆಹಲಿಯಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ತಮ್ಮ ಪಕ್ಷವು 'ಪೂಜಾರಿ- ಗ್ರಂಥಿ ಸಮ್ಮಾನ್ ಯೋಜನೆ'ಯನ್ನು ಪ್ರಾರಂಭಿಸಲಿದೆ. ದೇವಾಲಯದ ಅರ್ಚಕರು ಮತ್ತು ಗುರುದ್ವಾರಗಳ ಗ್ರಂಥಿಗಳಿಗೆ ಮಾಸಿಕ 18,000 ರೂ. ಭತ್ಯೆ ನೀಡಲಾಗುವುದು ಎಂದು ಆಮ್ ಆದ್ಮಿ ಪಾರ್ಟಿಯ (ಎಎಪಿ) ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಸೋಮವಾರ ಘೋಷಿಸಿದ್ದಾರೆ.

ಮುಂದಿನ ವರ್ಷ ಫೆಬ್ರುವರಿಯಲ್ಲಿ ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಚುನಾವಣೆಗೆ ಮುನ್ನ ಈ ಘೋಷಣೆ ಹೊರಬಿದ್ದಿದ್ದು, ಸತತ ನಾಲ್ಕನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಳ್ಳಲು ಎಎಪಿ ಪ್ರಯತ್ನ ನಡೆಸುತ್ತಿದೆ. ಹಲವು ವಿಶೇಷ ಯೋಜನೆಗಳನ್ನು ಘೋಷಿಸುತ್ತಿದೆ.

'ಪೂಜಾರಿಗಳು ಮತ್ತು ಗ್ರಂಥಿಗಳು ನಮ್ಮ ಸಮಾಜದ ಪ್ರಮುಖ ಭಾಗವಾಗಿದ್ದಾರೆ. ಆದರೆ, ಅವರನ್ನು ನಿರ್ಲಕ್ಷ್ಯಿಸಲಾಗಿದೆ. ದೇಶದಲ್ಲಿ ಮೊದಲ ಬಾರಿಗೆ, ನಾವು ಅವರನ್ನು ಬೆಂಬಲಿಸಲು ಈ ಯೋಜನೆಯನ್ನು ಪರಿಚಯಿಸುತ್ತಿದ್ದೇವೆ. ಈ ಯೋಜನೆ ಅಡಿಯಲ್ಲಿ ಅವರಿಗೆ ತಿಂಗಳಿಗೆ 18,000 ರೂ. ಭತ್ಯೆಯನ್ನು ನೀಡಲಾಗುತ್ತದೆ. ಈ ಯೋಜನೆಗೆ ನಾಳೆಯಿಂದಲೇ ನೋಂದಣಿ ಪ್ರಾರಂಭವಾಗುತ್ತದೆ' ಎಂದು ಕೇಜ್ರಿವಾಲ್ ಹೇಳಿದರು.

ಮಂಗಳವಾರ ಕನ್ನಾಟ್ ಪ್ಲೇಸ್‌ನಲ್ಲಿರುವ ಹನುಮಾನ್ ಮಂದಿರಕ್ಕೆ ಭೇಟಿ ನೀಡಿ, ಅಲ್ಲಿನ ಅರ್ಚಕರ ನೋಂದಣಿ ಪ್ರಕ್ರಿಯೆಯ ಮೇಲ್ವಿಚಾರಣೆ ನಡೆಸುವುದಾಗಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT