ಮನಮೋಹನ್ ಸಿಂಗ್ ಚಿತಾಭಸ್ಮ ವಿಸರ್ಜನೆ 
ದೇಶ

ಯಮುನಾ ನದಿಯಲ್ಲಿ ಡಾ. ಮನಮೋಹನ್ ಸಿಂಗ್ ಚಿತಾಭಸ್ಮ ವಿಸರ್ಜನೆ; ವಿವಾದ ಸ್ಪೋಟ!

ನಿಗಮಬೋಧ್ ಘಾಟ್ ನಿಂದ ನಿನ್ನೆ ಬೆಳಿಗ್ಗೆ ಚಿತಾಭಸ್ಮ ಸಂಗ್ರಹಿಸಿದ ನಂತರ ಗುರುದ್ವಾರ ಬಳಿಯ ಯಮುನಾ ನದಿಯ ದಡದಲ್ಲಿರುವ 'ಅಷ್ಟ ಘಾಟ್' ಗೆ ತೆಗೆದೊಯ್ದು, ಬಳಿಕ ನದಿಯಲ್ಲಿ ವಿಸರ್ಜನೆ ಮಾಡಿದ್ದಾರೆ.

ನವದೆಹಲಿ: ಇತ್ತೀಚಿಗೆ ನಿಧನರಾದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಚಿತಾಭಸ್ಮವನ್ನು ಮಜ್ನು ಕಾ ತಿಲಾ ಗುರುದ್ವಾರ ಬಳಿಯ ಯಮುನಾ ನದಿಯಲ್ಲಿ ಸಿಖ್ ಸಂಪ್ರದಾಯದಂತೆ ಅವರ ಕುಟುಂಬ ಸದಸ್ಯರು ಭಾನುವಾರ ವಿಸರ್ಜಿಸಿದ್ದಾರೆ.

ನಿಗಮಬೋಧ್ ಘಾಟ್ ನಿಂದ ನಿನ್ನೆ ಬೆಳಿಗ್ಗೆ ಚಿತಾಭಸ್ಮ ಸಂಗ್ರಹಿಸಿದ ನಂತರ ಗುರುದ್ವಾರ ಬಳಿಯ ಯಮುನಾ ನದಿಯ ದಡದಲ್ಲಿರುವ 'ಅಷ್ಟ ಘಾಟ್' ಗೆ ತೆಗೆದೊಯ್ದು, ಬಳಿಕ ನದಿಯಲ್ಲಿ ವಿಸರ್ಜನೆ ಮಾಡಿದ್ದಾರೆ. ಈ ವೇಳೆ ಸಿಂಗ್ ಅವರ ಪತ್ನಿ ಗುರುಶರಣ್ ಕೌರ್ ಮತ್ತು ಅವರ ಮೂವರು ಪುತ್ರಿಯರಾದ ಉಪಿಂದರ್ ಸಿಂಗ್, ದಮನ್ ಸಿಂಗ್ ಮತ್ತು ಅಮೃತ್ ಸಿಂಗ್ ಮತ್ತು ಇತರ ಹತ್ತಿರದ ಸಂಬಂಧಿಕರು ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಚಿತಾಭಸ್ಮ ವಿಸರ್ಜನೆ ಸ್ಥಳದಲ್ಲಿ ಡಾ. ಮನಮೋಹನ್ ಸಿಂಗ್ ಕುಟುಂಬದವರೊಂದಿಗೆ ಯಾವುದೇ ಹಿರಿಯ ಕಾಂಗ್ರೆಸ್ ನಾಯಕರು ಅಥವಾ ಗಾಂಧಿ ಕುಟುಂಬದವರು ಕಂಡುಬಂದಿಲ್ಲ. ಜನವರಿ 3 ರಂದು ದಿವಂಗತ ಪ್ರಧಾನಿಯವರ ಅಧಿಕೃತ ನಿವಾಸ 3, ಮೋತಿಲಾಲ್ ನೆಹರು ಮಾರ್ಗದಲ್ಲಿ 'ಅಖಂಡ ಪಥ' ನಡೆಯಲಿದ್ದು, ಗುರುದ್ವಾರದಲ್ಲಿ ಭಾನುವಾರ ಕೆಲವು ಪ್ರಾರ್ಥನೆಗಳು ನಡೆದವು.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ದಿವಂಗತ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಿರುವ ಕಾಂಗ್ರೆಸ್ ದೇಶಕ್ಕೆ ಮನಮೋಹನ್ ಸಿಂಗ್ ನೀಡಿರುವ ಸೇವೆ, ಅವರ ಸಮರ್ಪಣೆ ಮತ್ತು ಸರಳತೆಯನ್ನು ಯಾವಾಗಲೂ ಸ್ಮರಿಸುತ್ತೇವೆ ಎಂದು ಪೋಸ್ಟ್ ಮಾಡಲಾಗಿದೆ.

ಈ ಮಧ್ಯೆ ಬಿಜೆಪಿಯ ಹಿರಿಯ ನಾಯಕ ಮತ್ತು ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಚಿತಾಭಸ್ಮವನ್ನು ಸಂಗ್ರಹಿಸಲು ಸಿಂಗ್ ಅವರ ಕುಟುಂಬದೊಂದಿಗೆ ಸ್ಮಶಾನ ಭೂಮಿಗೆ ಹೋಗದಿದ್ದಕ್ಕಾಗಿ ಕಾಂಗ್ರೆಸ್ ಮತ್ತು ಅದರ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಾಂಗ್ರೆಸ್ ಅಥವಾ ಗಾಂಧಿ ಕುಟುಂಬದ ಒಬ್ಬ ಸದಸ್ಯರೂ ಕೂಡಾ ಡಾ ಮನಮೋಹನ್ ಸಿಂಗ್ ಅವರ ಚಿತಾಭಸ್ಮ ಸಂಗ್ರಹಿಸಲು ಬರದಿದ್ದನ್ನು ನೋಡಲು ತುಂಬಾ ದುಃಖವಾಗಿದೆ. ಮಾಧ್ಯಮಗಳ ಗಮನ ಸೆಳೆಯಲು ರಾಜಕೀಯ ಮಾಡಲು, ಕಾಂಗ್ರೆಸ್ ಇರುತ್ತದೆ. ಆದರೆ ಅವರನ್ನು ಘನತೆಯಿಂದ ಗೌರವಿಸುವ ವಿಷಯ ಬಂದಾಗ ಅವರು ಗೈರುಹಾಜರಾಗಿದ್ದರು. ನಿಜಕ್ಕೂ ನಾಚಿಕೆಗೇಡು” ಎಂದು ಸಾಮಾಜಿಕ ಜಾಲತಾಣದಲ್ಲಿ ಮಾಳವಿಯಾ ಫೋಸ್ಟ್ ಮಾಡಿದ್ದಾರೆ.

ಬಿಜೆಪಿಯ ಮತ್ತೋರ್ವ ಹಿರಿಯ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಕೂಡ ಕಾಂಗ್ರೆಸ್ ನಾಯಕರ ಗೈರುಹಾಜರಿಯನ್ನು ಖಂಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT