ಸಂಗ್ರಹ ಚಿತ್ರ 
ದೇಶ

ಕೇಂದ್ರ ಬಜೆಟ್ 2024-25: ರಕ್ಷಣಾ ವಲಯಕ್ಕೆ 11 ಲಕ್ಷ ಕೋಟಿ ರೂ. ಅನುದಾನ

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆಯಾಗಿದ್ದು, ಪ್ರತಿ ಬಜೆಟ್ ಮಂಡನೆ ವೇಳೆಯೂ ರಕ್ಷಣಾ ವಲಯಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ. ಅದರಂತೆ ಈ ಬಾರಿಯೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಕ್ಷಣಾ ವಲಯಕ್ಕೆ 11 ಲಕ್ಷ ಕೋಟಿ ರೂ ಮೀಸಲಿಟ್ಟಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆಯಾಗಿದ್ದು, ಪ್ರತಿ ಬಜೆಟ್ ಮಂಡನೆ ವೇಳೆಯೂ ರಕ್ಷಣಾ ವಲಯಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ. ಅದರಂತೆ ಈ ಬಾರಿಯೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಕ್ಷಣಾ ವಲಯಕ್ಕೆ 11 ಲಕ್ಷ ಕೋಟಿ ರೂ ಮೀಸಲಿಟ್ಟಿದ್ದಾರೆ.

ಇದು ಕಳೆದ ಬಾರಿಗಿಂತ ಶೇ.11ರಷ್ಟು ಹೆಚ್ಚಾಗಿದೆ. ಇದು ಜಿಡಿಪಿಯ ಶೇ.3.4ರಷ್ಟಿದೆ. ಕಳೆದ ಬಜೆಟ್​ನಲ್ಲಿ 5.93 ಲಕ್ಷ ಕೋಟಿ ರೂಪಾಯಿ ಮೀಸಲಿಸಲಾಗಿತ್ತು. ಇದು ಜಿಡಿಪಿಯ ಶೇ.1.9ರಷ್ಟಿತ್ತು.

ಸದ್ಯ ಜಗತ್ತಿನ ಎರಡು ಪ್ರದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಉಂಟಾಗಿದೆ. ಗಾಜಾ-ಉಕ್ರೇನ್ ಮತ್ತು ಇಸ್ರೇಲ್-ಹಮಾಸ್ ನಡುವೆ ಯುದ್ಧ ನಡೆಯುತ್ತಿದೆ. ಈ ಹಿನ್ನೆಲೆ ಬಜೆಟ್​ನಲ್ಲಿ ರಕ್ಷಣಾ ವಲಯಕ್ಕೆ ಹೆಚ್ಚಿನ ಅನುದಾನ ನೀಡುವ ಅಗತ್ಯವಿದೆ ಎಂದು ರಕ್ಷಣಾ ತಜ್ಞ ಏರ್​​​​ವೇಸ್​​ ಮಾರ್ಷಲ್‌ ಮನೋಹರ್‌ ಬಹದ್ದೂರ್‌ ಅಭಿಪ್ರಾಯಪಟ್ಟಿದ್ದರು.

2022ರಲ್ಲಿ ಶಸ್ತ್ರಾಸ್ತ್ರಗಳಿಗಾಗಿಯೇ 1.52 ಲಕ್ಷ ಕೋಟಿ ರೂ. ಹಣವನ್ನು ಮೀಸಲಿಟ್ಟಿತ್ತು. ಇದರಲ್ಲೀಗ ಶೇ.6.5ರಷ್ಟು ಹೆಚ್ಚಳಗೊಂಡಿದೆ. 2022-23ರಲ್ಲಿ ಶೇ. 12 ಮತ್ತು 2021-22ರಲ್ಲಿ ಶೇ.19ರಷ್ಟಿತ್ತು.

ಸದ್ಯ ಭಾರತ 85 ದೇಶಗಳಿಗೆ ತನ್ನ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ. 2016ಕ್ಕೆ ಹೋಲಿಸಿದರೆ ಭಾರತದ ರಕ್ಷಣಾ ರಫ್ತು 10 ಪಟ್ಟು ಹೆಚ್ಚಾಗಿದೆ. ನೌಕಾಪಡೆಗೆ 26 ರಫೇಲ್ ವಿಮಾನಗಳನ್ನು ಖರೀದಿಸಲು ಅನುಮೋದನೆ ನೀಡಲಾಗಿದೆ.

31 MQ-9B ರೀಪರ್ ಡ್ರೋನ್‌ಗಳನ್ನು ಖರೀದಿಸಲು ಅಮೆರಿಕದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಭಾರತ ಮತ್ತು ಅಮೆರಿಕ ಜಂಟಿಯಾಗಿ ಸ್ಟ್ರೈಕರ್ ಶಸ್ತ್ರಸಜ್ಜಿತ ಯುದ್ಧ ವಾಹನವನ್ನು ನಿರ್ಮಿಸಲು ಒಪ್ಪಿಕೊಂಡಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT