ನಿರ್ಮಲಾ ಸೀತಾರಾಮನ್ 
ದೇಶ

ಪ್ರಜಾಪ್ರಭುತ್ವ, ಜನಸಂಖ್ಯೆ, ವೈವಿಧ್ಯತೆ ಪ್ರತಿಯೊಬ್ಬ ಭಾರತೀಯನ ಆಕಾಂಕ್ಷೆಗಳನ್ನು ಈಡೇರಿಸಲು ಸಹಾಯ ಮಾಡುತ್ತದೆ: ಹಣಕಾಸು ಸಚಿವೆ

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು "ಸರ್ವಾಂಗೀಣ, ಎಲ್ಲ ಅಂತರ್ಗತ ಮತ್ತು ಸರ್ವವ್ಯಾಪಕ" ('ಸರ್ವಂಗಿನ್', 'ಸರ್ವಸ್ಪರ್ಶಿ' ಮತ್ತು 'ಸರ್ವಸಮಾವೇಶಿ' ಅಭಿವೃದ್ಧಿಯ ಮಾರ್ಗ) ಮತ್ತು "ಪ್ರಜಾಪ್ರಭುತ್ವ, ಜನಸಂಖ್ಯಾಶಾಸ್ತ್ರ ಮತ್ತು ವೈವಿಧ್ಯತೆ" ಎಂಬ ಮೂರು ವಿಷಯಗಳ ಮೇಲೆ ಪ್ರತಿಯೊಬ್ಬ ಭಾರತೀಯನ ಆಕಾಂಕ್ಷೆಗಳನ್ನು ಪೂರೈಸಲು ಸಹಾಯ ಮಾಡುತ್ತದೆ.

ನವದೆಹಲಿ: ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು "ಸರ್ವಾಂಗೀಣ, ಎಲ್ಲ ಅಂತರ್ಗತ ಮತ್ತು ಸರ್ವವ್ಯಾಪಕ" ('ಸರ್ವಂಗಿನ್', 'ಸರ್ವಸ್ಪರ್ಶಿ' ಮತ್ತು 'ಸರ್ವಸಮಾವೇಶಿ' ಅಭಿವೃದ್ಧಿಯ ಮಾರ್ಗ) ಮತ್ತು "ಪ್ರಜಾಪ್ರಭುತ್ವ, ಜನಸಂಖ್ಯಾಶಾಸ್ತ್ರ ಮತ್ತು ವೈವಿಧ್ಯತೆ" ಎಂಬ ಮೂರು ವಿಷಯಗಳ ಮೇಲೆ ಪ್ರತಿಯೊಬ್ಬ ಭಾರತೀಯನ ಆಕಾಂಕ್ಷೆಗಳನ್ನು ಪೂರೈಸಲು ಸಹಾಯ ಮಾಡುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. 

ಲೋಕಸಭೆ ಚುನಾವಣೆಗೆ ಮುನ್ನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಆರನೇ ಮಧ್ಯಂತರ ಬಜೆಟ್ ನ್ನು ಮಂಡಿಸುತ್ತಾ, ಕಳೆದ 10 ವರ್ಷಗಳಲ್ಲಿ ಭಾರತೀಯ ಆರ್ಥಿಕತೆಯು ಆಳವಾದ ಧನಾತ್ಮಕ ರೂಪಾಂತರವನ್ನು ಕಂಡಿದೆ ಎಂದು ಹೇಳಿದರು.

ಮುಂದಿನ ಐದು ವರ್ಷಗಳು ಅಭೂತಪೂರ್ವ ಅಭಿವೃದ್ಧಿಯ ವರ್ಷಗಳಾಗಿವೆ. ಪ್ರಜಾಪ್ರಭುತ್ವ, ಜನಸಂಖ್ಯಾಶಾಸ್ತ್ರ ಮತ್ತು ವೈವಿಧ್ಯತೆಯ ತ್ರಿವಿಷಯಗಳು ಪ್ರತಿಯೊಬ್ಬ ಭಾರತೀಯನ ಆಕಾಂಕ್ಷೆಗಳನ್ನು ಪೂರೈಸಲು ಸಹಾಯ ಮಾಡುತ್ತದೆ. ಭಾರತೀಯ ಆರ್ಥಿಕತೆಯು ಕಳೆದ 10 ವರ್ಷಗಳಲ್ಲಿ ಆಳವಾದ ಧನಾತ್ಮಕ ರೂಪಾಂತರವನ್ನು ಕಂಡಿದೆ, ಭಾರತದ ಜನರು ಇದನ್ನು ಇದಿರು ನೋಡುತ್ತಿದ್ದಾರೆ. ಭವಿಷ್ಯದಲ್ಲಿ ಭರವಸೆ ಮತ್ತು ಆಶಾವಾದದೊಂದಿಗೆ ಮುಂದೆ ನೋಡುತ್ತಿದ್ದಾರೆ ಎಂದು ತಮ್ಮ ಬಜೆಟ್ ಭಾಷಣದ ವೇಳೆ ಹೇಳಿದರು. 

ತನ್ನ ಸರ್ಕಾರದ ಅಭಿವೃದ್ಧಿಯ ದೃಷ್ಟಿಕೋನವು ಎಲ್ಲಾ ಜಾತಿಗಳು ಮತ್ತು ಎಲ್ಲಾ ಹಂತಗಳಲ್ಲಿ ಜನರನ್ನು ಒಳಗೊಳ್ಳುತ್ತದೆ ಎಂದ ಸೀತಾರಾಮನ್, 2047ರ ವೇಳೆಗೆ ಭಾರತವನ್ನು 'ವಿಕಸಿತ ಭಾರತ' (ಅಭಿವೃದ್ಧಿ ಹೊಂದಿದ ಭಾರತ) ಮಾಡುವ ಗುರಿಯಿದೆ ಎಂದು ಹೇಳಿದರು.

ನಮ್ಮ ಪ್ರಧಾನಿ ದೃಢವಾಗಿ ನಂಬಿರುವಂತೆ, ನಾವು ನಾಲ್ಕು ಪ್ರಮುಖ ಜಾತಿಗಳ ಮೇಲೆ ಕೇಂದ್ರೀಕರಿಸಬೇಕಾಗಿದೆ, ಅವರು ಗರೀಬ್ (ಬಡವರು), ಮಹಿಳಾ (ಮಹಿಳೆಯರು), ಯುವ (ಯುವಕರು) ಮತ್ತು ಅನ್ನದಾತ (ರೈತರು) ಅವರ ಅಗತ್ಯತೆಗಳು, ಅವರ ಆಕಾಂಕ್ಷೆಗಳು ಮತ್ತು ಅವರ ಕಲ್ಯಾಣವು ನಮ್ಮ ಅತ್ಯುನ್ನತ ವಿಷಯವಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT