ಜ್ಞಾನವಾಪಿ ಮಸೀದಿ 
ದೇಶ

ಜ್ಞಾನವಾಪಿ ಮಸೀದಿ: ವ್ಯಾಸ ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸಿದ ಹಿಂದೂಗಳು

ನ್ಯಾಯಾಲಯದ ಆದೇಶದ ಮೇರೆಗೆ ಬುಧವಾರ ರಾತ್ರಿ ಇಲ್ಲಿನ ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು ಎಂದು ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ನಾಗೇಂದ್ರ ಪಾಂಡೆ ಅವರು ಗುರುವಾರ ತಿಳಿಸಿದ್ದಾರೆ.

ವಾರಣಾಸಿ: ನ್ಯಾಯಾಲಯದ ಆದೇಶದ ಮೇರೆಗೆ ಬುಧವಾರ ರಾತ್ರಿ ಇಲ್ಲಿನ ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು ಎಂದು ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ನಾಗೇಂದ್ರ ಪಾಂಡೆ ಅವರು ಗುರುವಾರ ತಿಳಿಸಿದ್ದಾರೆ.

ಕಾಶಿ ವಿಶ್ವನಾಥ ದೇಗುಲದ ಪಕ್ಕದಲ್ಲಿರುವ ಮಸೀದಿಗೆ ಸಂಬಂಧಿಸಿದ ಕಾನೂನು ಹೋರಾಟದಲ್ಲಿ ಹಿಂದೂಗಳಿಗೆ ದೊಡ್ಡ ಜಯ ಸಿಕ್ಕಿದ್ದು, ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿರುವ ವಿಗ್ರಹಗಳಿಗೆ ಅರ್ಚಕರು ಪೂಜೆ ಸಲ್ಲಿಸಬಹುದು ಎಂದು ಜಿಲ್ಲಾ ನ್ಯಾಯಾಲಯ ಬುಧವಾರ ತೀರ್ಪು ನೀಡಿತ್ತು.

ನಿನ್ನೆ ರಾತ್ರಿ 10.30 ರ ಸುಮಾರಿಗೆ "31 ವರ್ಷಗಳ ನಂತರ ಪ್ರಾರ್ಥನೆಗಾಗಿ ವ್ಯಾಸ ನೆಲಮಾಳಿಗೆಯನ್ನು ತೆರೆಯಲಾಯಿತು" ಎಂದು ಪಾಂಡೆ ಅವರು ಪಿಟಿಐಗೆ ತಿಳಿಸಿದ್ದಾರೆ.

ನೆಲಮಾಳಿಗೆಯಲ್ಲಿ ಪ್ರಾರ್ಥನೆ ನಡೆಸಲಾಗಿದೆಯೇ ಎಂದು ಕೇಳಿದಾಗ, ಅವರು "ಹೌದು" ಎಂದು ಹೇಳಿದರು. "ನ್ಯಾಯಾಲಯದ ಆದೇಶವನ್ನು ಅನುಸರಿಸುವುದು ಅಗತ್ಯವಾಗಿತ್ತು. ಆದ್ದರಿಂದ ಜಿಲ್ಲಾಡಳಿತವು ಎಲ್ಲಾ ವ್ಯವಸ್ಥೆಗಳನ್ನು ಅತ್ಯಂತ ತ್ವರಿತವಾಗಿ ಮಾಡಿದೆ" ಎಂದು ಪಾಂಡೆ ಹೇಳಿದ್ದಾರೆ.

ಇನ್ನೂ ನ್ಯಾಯಾಲಯದ ಆದೇಶವನ್ನು ಪಾಲಿಸಿದ್ದೇನೆ ಎಂದು ಜಿಲ್ಲಾಧಿಕಾರಿ ಎಸ್.ರಾಜಲಿಂಗಂ ಅವರು ತಿಳಿಸಿದ್ದಾರೆ.

ನೆಲಮಾಳಿಗೆಯನ್ನು ಸ್ವಚ್ಛಗೊಳಿಸಿದ ನಂತರ, ಲಕ್ಷ್ಮಿ ದೇವಿ ಮತ್ತು ಗಣೇಶನ ಆರತಿಯನ್ನು ಮಾಡಲಾಯಿತು ಎಂದು ಕೆಲವು ಸ್ಥಳೀಯರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT