ಜ್ಞಾನವಾಪಿ ಮಸೀದಿ 
ದೇಶ

ಜ್ಞಾನವಾಪಿ ಮಸೀದಿ: ವ್ಯಾಸ ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸಿದ ಹಿಂದೂಗಳು

ನ್ಯಾಯಾಲಯದ ಆದೇಶದ ಮೇರೆಗೆ ಬುಧವಾರ ರಾತ್ರಿ ಇಲ್ಲಿನ ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು ಎಂದು ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ನಾಗೇಂದ್ರ ಪಾಂಡೆ ಅವರು ಗುರುವಾರ ತಿಳಿಸಿದ್ದಾರೆ.

ವಾರಣಾಸಿ: ನ್ಯಾಯಾಲಯದ ಆದೇಶದ ಮೇರೆಗೆ ಬುಧವಾರ ರಾತ್ರಿ ಇಲ್ಲಿನ ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು ಎಂದು ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ನಾಗೇಂದ್ರ ಪಾಂಡೆ ಅವರು ಗುರುವಾರ ತಿಳಿಸಿದ್ದಾರೆ.

ಕಾಶಿ ವಿಶ್ವನಾಥ ದೇಗುಲದ ಪಕ್ಕದಲ್ಲಿರುವ ಮಸೀದಿಗೆ ಸಂಬಂಧಿಸಿದ ಕಾನೂನು ಹೋರಾಟದಲ್ಲಿ ಹಿಂದೂಗಳಿಗೆ ದೊಡ್ಡ ಜಯ ಸಿಕ್ಕಿದ್ದು, ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿರುವ ವಿಗ್ರಹಗಳಿಗೆ ಅರ್ಚಕರು ಪೂಜೆ ಸಲ್ಲಿಸಬಹುದು ಎಂದು ಜಿಲ್ಲಾ ನ್ಯಾಯಾಲಯ ಬುಧವಾರ ತೀರ್ಪು ನೀಡಿತ್ತು.

ನಿನ್ನೆ ರಾತ್ರಿ 10.30 ರ ಸುಮಾರಿಗೆ "31 ವರ್ಷಗಳ ನಂತರ ಪ್ರಾರ್ಥನೆಗಾಗಿ ವ್ಯಾಸ ನೆಲಮಾಳಿಗೆಯನ್ನು ತೆರೆಯಲಾಯಿತು" ಎಂದು ಪಾಂಡೆ ಅವರು ಪಿಟಿಐಗೆ ತಿಳಿಸಿದ್ದಾರೆ.

ನೆಲಮಾಳಿಗೆಯಲ್ಲಿ ಪ್ರಾರ್ಥನೆ ನಡೆಸಲಾಗಿದೆಯೇ ಎಂದು ಕೇಳಿದಾಗ, ಅವರು "ಹೌದು" ಎಂದು ಹೇಳಿದರು. "ನ್ಯಾಯಾಲಯದ ಆದೇಶವನ್ನು ಅನುಸರಿಸುವುದು ಅಗತ್ಯವಾಗಿತ್ತು. ಆದ್ದರಿಂದ ಜಿಲ್ಲಾಡಳಿತವು ಎಲ್ಲಾ ವ್ಯವಸ್ಥೆಗಳನ್ನು ಅತ್ಯಂತ ತ್ವರಿತವಾಗಿ ಮಾಡಿದೆ" ಎಂದು ಪಾಂಡೆ ಹೇಳಿದ್ದಾರೆ.

ಇನ್ನೂ ನ್ಯಾಯಾಲಯದ ಆದೇಶವನ್ನು ಪಾಲಿಸಿದ್ದೇನೆ ಎಂದು ಜಿಲ್ಲಾಧಿಕಾರಿ ಎಸ್.ರಾಜಲಿಂಗಂ ಅವರು ತಿಳಿಸಿದ್ದಾರೆ.

ನೆಲಮಾಳಿಗೆಯನ್ನು ಸ್ವಚ್ಛಗೊಳಿಸಿದ ನಂತರ, ಲಕ್ಷ್ಮಿ ದೇವಿ ಮತ್ತು ಗಣೇಶನ ಆರತಿಯನ್ನು ಮಾಡಲಾಯಿತು ಎಂದು ಕೆಲವು ಸ್ಥಳೀಯರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೀದಿ ಬುಡಕ್ಕೇ ಬಂದ SIR: ಬಂಗಾಳ ಸರ್ಕಾರದ ಸಚಿವೆಗೆ ಚುನಾವಣಾ ಆಯೋಗ ನೋಟಿಸ್!

'ನೈತಿಕ ಪೊಲೀಸ್‌ಗಿರಿ'ಯ ಭಯ: Hindu ಕಾರ್ಯಕರ್ತರಿಗೆ ಹೆದರಿ Pizza ಔಟ್ಲೆಟ್ 2ನೇ ಮಹಡಿಯಿಂದ ಜಿಗಿದ ಜೋಡಿ, ಕಾಲು ಮುರಿತ!

'ನೀನ್ ನಂಗೇ ಬೇಕು..': ಪ್ರಿಯಕರನ ಪತ್ನಿಗೆ HIV virus ಎಂಜೆಕ್ಷನ್ ಚುಚ್ಚಿದ ಮಾಜಿ ಪ್ರಿಯತಮೆ!

ಬಾಂಗ್ಲಾದೇಶದಲ್ಲಿ 23 ವರ್ಷದ ಹಿಂದೂ ವ್ಯಕ್ತಿಯ ಸಜೀವ ದಹನ: 'ಯೋಜಿತ ಕೊಲೆ' ಎಂದ ಕುಟುಂಬ

ತಮಿಳುನಾಡಿನ ಕೆಲವೆಡೆ ಭಾರೀ ಮಳೆ ಸಾಧ್ಯತೆ; ಕರ್ನಾಟಕದಲ್ಲಿ ಒಣಹವೆ: IMD

SCROLL FOR NEXT