ನಿರ್ಮಲಾ ಸೀತಾರಾಮನ್ 
ದೇಶ

ಕೇಂದ್ರ ಬಜೆಟ್ 2024: ನಿರ್ಮಲಾ ಸೀತಾರಾಮನ್ 6ನೇ ಬಜೆಟ್ 56 ನಿಮಿಷಗಳಲ್ಲೇ ಮಂಡನೆ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ತಮ್ಮ ಸತತ ಆರನೇ ಬಜೆಟ್ ಅನ್ನು 56 ನಿಮಿಷಗಳಲ್ಲೇ  ಮಂಡಿಸಿದರು. ಇದು ಅವರ ಅತ್ಯಂತ ಕಡಿಮೆ ಅವಧಿಯ ಭಾಷಣವಾಗಿದೆ.

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ತಮ್ಮ ಸತತ ಆರನೇ ಬಜೆಟ್ ಅನ್ನು 56 ನಿಮಿಷಗಳಲ್ಲೇ  ಮಂಡಿಸಿದರು. ಇದು ಅವರ ಅತ್ಯಂತ ಕಡಿಮೆ ಅವಧಿಯ ಭಾಷಣವಾಗಿದೆ. 

ಲೋಕಸಭೆ ಚುನಾವಣೆಯ ನಂತರ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಮರಳುತ್ತದೆ ಎಂದು ಸಚಿವರು ಉಲ್ಲೇಖಿಸುತ್ತಿದ್ದಂತೆ ಕೆಲ ಸಂಸದರು ಕೂಗುವ ಮೂಲಕ ಅಸಮ್ಮತಿ ವ್ಯಕ್ತಪಡಿಸಿದರೆ, ವಿರೋಧ ಪಕ್ಷದ ಸದಸ್ಯರು ಸೀತಾರಾಮನ್ ಅವರ ಬಜೆಟ್ ಭಾಷಣವನ್ನು ಗಂಭೀರವಾಗಿ ಆಲಿಸಿದರು.

ಇದಕ್ಕೂ ಮುನ್ನ ಬಿಜೆಪಿ ಸದಸ್ಯರು ಭಾರತ್ ಮಾತಾ ಕಿ ಜೈ, ಜೈ ಶ್ರೀ ರಾಮ್, ಜೈ ಸಿಯಾರಾಮ್ ಘೋಷಣೆಗಳನ್ನು ಕೂಗಿದರು. ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ಸಭಾಂಗಣಕ್ಕೆ 11 ಗಂಟೆಗೂ ಮುನ್ನ ಆಗಮಿಸಿ ತಮ್ಮ ಸ್ಥಾನದಲ್ಲಿ ಕುಳಿತುಕೊಂಡರು. 56 ನಿಮಿಷಗಳಲ್ಲಿ ಸೀತಾರಾಮನ್ ಅವರ ಬಜೆಟ್ ಭಾಷಣ ಮುಗಿಯಿತು. ಇದು ಅವರ ಅತೀ ಕಡಿಮೆಯ ಬಜೆಟ್ ಮಂಡನೆಯಾಗಿದೆ. ಅವರು 2020ರಲ್ಲಿ ಎರಡು ಗಂಟೆ ನಲವತ್ತು ನಿಮಿಷಗಳ ದೀರ್ಘಾವಧಿಯ ಬಜೆಟ್ ಭಾಷಣವನ್ನು ಮಾಡಿದ್ದರು. 2019ರಲ್ಲಿ ಸೀತಾರಾಮನ್ ಅವರ ಬಜೆಟ್ ಭಾಷಣವು ಎರಡು ಗಂಟೆ 17 ನಿಮಿಷಗಳ ಕಾಲ ನಡೆಯಿತು.

2021ರಲ್ಲಿ ಸೀತಾರಾಮನ್ ಅವರು ಒಂದು ಗಂಟೆ ಮತ್ತು 50 ನಿಮಿಷಗಳ ಕಾಲ ಬಜೆಟ್ ಮಂಡಿಸಿದರೆ ನಂತರ 2022ರಲ್ಲಿ 92 ನಿಮಿಷಗಳು ಮತ್ತು 2023ರಲ್ಲಿ 87 ನಿಮಿಷಗಳ ಕಾಲ ನಡೆಯಿತು. ಸೀತಾರಾಮನ್ ಅವರ ಬಜೆಟ್ ಭಾಷಣದಲ್ಲಿ ಹಿಂದಿನ ಸಂದರ್ಭಗಳಿಗಿಂತ ಭಿನ್ನವಾಗಿ ತಮಿಳು ಕವಿಗಳು ಮತ್ತು ಚಿಂತಕರ ಬಗ್ಗೆ ಯಾವುದೇ ಉಲ್ಲೇಖ ಕಂಡುಬಂದಿಲ್ಲ, ಆದರೆ ಅವರು ಕನಿಷ್ಠ ಎಂಟು ಬಾರಿ ಪ್ರಧಾನಿ ಮೋದಿ ಅವರನ್ನು ಉಲ್ಲೇಖಿಸಿದರು.

ಬಜೆಟ್ ಮಂಡನೆಗೂ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೀತಾರಾಮನ್ ಅವರಿಗೆ ಸಕ್ಕರೆ ಜೊತೆ ಒಂದು ಚಮಚ ಮೊಸರು ಕುಡಿಸಿ ಕೇಂದ್ರ ಬಜೆಟ್ ಮಂಡನೆಗೆ ಶುಭಾಶಯಗಳನ್ನು ತಿಳಿಸಿದರು. ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಎಫ್‌ಡಿಐ ಫಸ್ಟ್, ಡೆವಲಪ್ ಇಂಡಿಯಾ ಮತ್ತು ಜಿಡಿಪಿ ಆಡಳಿತ, ಅಭಿವೃದ್ಧಿ ಮತ್ತು ಕಾರ್ಯಕ್ಷಮತೆಗಾಗಿ ಹೊಸ ವಿಸ್ತರಣೆಯನ್ನು ರೂಪಿಸಿದರು. ಒಟ್ಟು ದೇಶೀಯ ಉತ್ಪನ್ನದ ವಿಷಯದಲ್ಲಿ ಹೆಚ್ಚಿನ ಬೆಳವಣಿಗೆಯನ್ನು ತಲುಪಿಸುವುದರ ಜೊತೆಗೆ, ಸರ್ಕಾರವು ಹೆಚ್ಚು ಸಮಗ್ರವಾದ 'ಜಿಡಿಪಿ', ಅಂದರೆ 'ಆಡಳಿತ, ಅಭಿವೃದ್ಧಿ ಮತ್ತು ಕಾರ್ಯಕ್ಷಮತೆ' ಮೇಲೆ ಸಮಾನವಾಗಿ ಗಮನಹರಿಸಿದೆ ಎಂದು ಸೀತಾರಾಮನ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT