ನಿರ್ಮಲಾ ಸೀತಾರಾಮನ್ 
ದೇಶ

ಮೋದಿ ಎಫೆಕ್ಟ್: ಲಕ್ಷದ್ವೀಪಕ್ಕೆ ಹೆಚ್ಚುವರಿ ಮೂಲಸೌಕರ್ಯ; ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಉ್ಲಲೇಖ!

ಲಕ್ಷದ್ವೀಪ ಸೇರಿ ನಮ್ಮ ದ್ವೀಪಗಳಗಳಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯ ಯೋಜನೆಗಳನ್ನು ಕೈಗೊಳ್ಳಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 

ನವದೆಹಲಿ: ಲಕ್ಷದ್ವೀಪ ಸೇರಿ ನಮ್ಮ ದ್ವೀಪಗಳಗಳಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯ ಯೋಜನೆಗಳನ್ನು ಕೈಗೊಳ್ಳಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 

ಲಕ್ಷದ್ವೀಪ ದೇಶದ ಜನಪ್ರಿಯ ಪ್ರವಾಸಿ ತಾಣವಾಗಿ ಪರಿಣಮಿಸಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ನಮ್ಮ ಆರ್ಥಿಕ ಬಲ ದೇಶವನ್ನು ಉದ್ಯಮ ಹಾಗೂ ಕಾನ್ಫರೆನ್ಸ್ ಪ್ರವಾಸೋದ್ಯಮಕ್ಕೆ ಆಕರ್ಷಣೀಯವನ್ನಾಗಿ ಮಾಡಿದೆ ಎಂದು ಬಜೆಟ್ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ. 

ಜ.04 ರಂದು ಪ್ರಧಾನಿ ಮೋದಿ ಲಕ್ಷದ್ವೀಪಕ್ಕೆ ತೆರಳಿದ್ದರು ಈ ಬೆನ್ನಲ್ಲೇ ಅಲ್ಲಿ ಮೂಲಸೌಕರ್ಯ ಯೋಜನೆಗಳಿಗೆ ಬಜೆಟ್ ನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ. 

ಲಕ್ಷದ್ವೀಪ ಬೀಚ್ ಗೆ ತೆರಳಿದ್ದ ಫೋಟೊಗಳನ್ನು ಪ್ರಧಾನಿ ಮೋದಿ ಸಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಬೆನ್ನಲ್ಲೇ ಮಾಲ್ಡೀವ್ಸ್ ನ ಸಚಿವರು ಹಾಗೂ ಇನ್ನಿತರ ನಾಯಕರು ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. 

ಪರಿಣಾಮ ಮಾಲ್ಡೀವ್ಸ್ ಗೆ ಪ್ರವಾಸಕ್ಕೆಂದು ಯೋಜನೆ ರೂಪಿಸಿದ್ದ ಭಾರತೀಯರು ಅದನ್ನು ವಾಪಸ್ ಪಡೆದು, ಲಕ್ಷದ್ವೀಪಕ್ಕೆ ಪ್ರವಾಸಕ್ಕೆ ಹೆಚ್ಚು ತೆರಳಲು ಪ್ರಾರಂಭಿಸಿದ್ದಾರೆ. 

ಆಧ್ಯಾತ್ಮಿಕ ಪ್ರವಾಸೋದ್ಯಮ ಸೇರಿದಂತೆ ಪ್ರವಾಸೋದ್ಯಮವು ಸ್ಥಳೀಯ ಉದ್ಯಮಶೀಲತೆಗೆ ಅಪಾರ ಅವಕಾಶಗಳನ್ನು ಹೊಂದಿದೆ ಎಂದು ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

"ಪ್ರವಾಸಿ ಕೇಂದ್ರಗಳ ಸಮಗ್ರ ಅಭಿವೃದ್ಧಿಯನ್ನು ಕೈಗೊಳ್ಳಲು ರಾಜ್ಯಗಳನ್ನು ಉತ್ತೇಜಿಸಲಾಗುವುದು, ಅವುಗಳನ್ನು ಜಾಗತಿಕ ಮಟ್ಟದಲ್ಲಿ ಬ್ರ್ಯಾಂಡಿಂಗ್ ಮತ್ತು ಮಾರುಕಟ್ಟೆಗೆ ತರಲಾಗುತ್ತದೆ. ಸೌಲಭ್ಯಗಳು ಮತ್ತು ಸೇವೆಗಳ ಗುಣಮಟ್ಟದ ಆಧಾರದ ಮೇಲೆ ಕೇಂದ್ರಗಳ ರೇಟಿಂಗ್‌ಗೆ ವ್ಯವಸ್ಥೆಯನ್ನು ಸ್ಥಾಪಿಸಲಾಗುವುದು" ಎಂದು ಹಣಕಾಸು ಸಚಿವರು ಹೇಳಿದ್ದಾರೆ. ಹೊಂದಾಣಿಕೆಯ ಆಧಾರದ ಮೇಲೆ ಅಂತಹ ಅಭಿವೃದ್ಧಿಗೆ ಹಣಕಾಸು ಒದಗಿಸಲು ದೀರ್ಘಾವಧಿಯ ಬಡ್ಡಿ ರಹಿತ ಸಾಲಗಳನ್ನು ರಾಜ್ಯಗಳಿಗೆ ಒದಗಿಸಲಾಗುವುದು, ”ಎಂದು ಸಚಿವರು ಹೇಳಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

SCROLL FOR NEXT