ನಿರ್ಮಲಾ ಸೀತಾರಾಮನ್. 
ದೇಶ

ಕೇಂದ್ರ ಬಜೆಟ್ 2024-25 ಪ್ರಸ್ತಾಪಗಳು 4 ಅಂಶಗಳ ಮೇಲೆ ನಿಂತಿವೆ: ವಿತ್ತ ಸಚಿವೆ ಸೀತಾರಾಮನ್

ದೇಶಕ್ಕೆ ಹೊಸ ದಿಕ್ಕು ಮತ್ತು ಭರವಸೆ ಸಿಕ್ಕಿದೆ, ಎಲ್ಲರಿಗೂ ಮನೆ, ಎಲ್ಲರಿಗೂ ನೀರು, ಪ್ರತಿ ಮನೆಗೆ ವಿದ್ಯುತ್‌ಗೆ ಒತ್ತು ಕೊಡಲಾಗುತ್ತಿದೆ. ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ.

ನವದೆಹಲಿ: ದೇಶಕ್ಕೆ ಹೊಸ ದಿಕ್ಕು ಮತ್ತು ಭರವಸೆ ಸಿಕ್ಕಿದೆ, ಎಲ್ಲರಿಗೂ ಮನೆ, ಎಲ್ಲರಿಗೂ ನೀರು, ಪ್ರತಿ ಮನೆಗೆ ವಿದ್ಯುತ್‌ಗೆ ಒತ್ತು ಕೊಡಲಾಗುತ್ತಿದೆ. ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ. ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪುತ್ತಿವೆ ಎಂದು ಹೇಳಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಇಂದು ಮಂಡನೆಯಾಗುತ್ತಿರುವ ಬಜೆಟ್'ನ 4 ಅಂಶಗಳನ್ನು ಹೆಸರಿಸಿದ್ದಾರೆ.

4 ಅಂಶಗಳು ಇಂತಿವೆ...

  • ಬಡವರು
  • ಮಹಿಳೆಯರು
  • ಯುವಕರು
  • ಅನ್ನದಾತರು

ಬಜೆಟ್​ನ ಮೊದಲ ಆಧಾರ ಸ್ತಂಭವಾಗಿರುವ ಬಡವರ ಅಭಿವೃದ್ಧಿಗೆ ಕೇಂದ್ರ ಹಣಕಾಸು ಸಚಿವರು ಹೆಚ್ಚಿನ ಒತ್ತು ನೀಡಿದ್ದು. ಬಹಳಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ.

ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವು ಆರ್ಥಿಕವಾಗಿ ಬಲಿಷ್ಠವಾಗುತ್ತಿದೆ. ಕೊರೋನಾದಂತಹ ಶತಮಾನದ ಬಿಕ್ಕಟ್ಟಿನ ಮಧ್ಯೆಯೂ ಭಾರತವು ಸಕಲ ಕ್ಷೇತ್ರಗಳಲ್ಲಿ ಏಳಿಗೆ ಹೊಂದುತ್ತಿದೆ. ಉಜ್ವಲ ಭವಿಷ್ಯದತ್ತ ಭಾರತ ಹೆಜ್ಜೆ ಹಾಕುತ್ತಿದೆ. ಸುಭದ್ರ ಸರ್ಕಾರಕ್ಕೆ ಜನ ಬಹುಮತ ನೀಡಿದ್ದರಿಂದ ಇದೆಲ್ಲ ಸಾಕಾರವಾಗುತ್ತಿದೆ. ಸಬ್‌ ಕಾ ಸಾಥ್‌, ಸಬ್ ಕಾ ವಿಕಾಸ್‌, ಸಬ್‌ ಕಾ ವಿಶ್ವಾಸ್‌ ಎಂಬ ಮಂತ್ರವು ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದು ಹೇಳಿದರು.

ಬಜೆಟ್ ಭಾಷಣದ ಆರಂಭದಲ್ಲಿ ಕೇಂದ್ರ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಪ್ರಗತಿಯನ್ನು ನಿರ್ಮಲಾ ಸೀತಾರಾನ್ ಅವರು ವಿವರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT