ನಿರ್ಮಲಾ ಸೀತಾರಾಮನ್ 
ದೇಶ

ನಾವು ಜನಪರ ಕೆಲಸ ಮಾಡಿದ್ದೇವೆ, ಮೂರನೇ ಬಾರಿ ಅಧಿಕಾರಕ್ಕೆ ಬರಲು ನಮ್ಮನ್ನು ಆಶೀರ್ವದಿಸಿ: ನಿರ್ಮಲಾ ಸೀತಾರಾಮನ್ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಮಧ್ಯಂತರ ಬಜೆಟ್ 2024 ನ್ನು ಮಂಡಿಸಿ ಕೇಂದ್ರ ಸರ್ಕಾರದ ಉತ್ತಮ ನೀತಿ-ನಿರೂಪಣೆ, ಯೋಜನೆಗಳು ಹಾಗೂ ಸರ್ಕಾರ ಮಾಡಿರುವ ಕೆಲಸಗಳು ಸತತ ಮೂರನೇ ಬಾರಿಗೆ ಬಿಜೆಪಿಯನ್ನು ಅಧಿಕಾರಕ್ಕೆ ಮರಳಲು ಸಹಾಯ ಮಾಡುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಮಧ್ಯಂತರ ಬಜೆಟ್ 2024 ನ್ನು ಮಂಡಿಸಿ ಕೇಂದ್ರ ಸರ್ಕಾರದ ಉತ್ತಮ ನೀತಿ-ನಿರೂಪಣೆ, ಯೋಜನೆಗಳು ಹಾಗೂ ಸರ್ಕಾರ ಮಾಡಿರುವ ಕೆಲಸಗಳು ಸತತ ಮೂರನೇ ಬಾರಿಗೆ ಬಿಜೆಪಿಯನ್ನು ಅಧಿಕಾರಕ್ಕೆ ಮರಳಲು ಸಹಾಯ ಮಾಡುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.

ಲೋಕಸಭೆಯಲ್ಲಿ ಮಧ್ಯಂತರ ಬಜೆಟ್ ಮಂಡಿಸಿ ಮಾತನಾಡಿದ ಅವರು, ನಮ್ಮ ಯುವಜನತೆಯನ್ನು ಒಳಗೊಂಡ ದೇಶವು ಹೆಚ್ಚಿನ ಆಕಾಂಕ್ಷೆಗಳನ್ನು ಹೊಂದಿದೆ, ಇಂದಿನ ವರ್ತಮಾನದ ಬಗ್ಗೆ ಹೆಮ್ಮೆ ಮತ್ತು ಉಜ್ವಲ ಭವಿಷ್ಯದ ಭರವಸೆ ಮತ್ತು ವಿಶ್ವಾಸವನ್ನು ಹೊಂದಿದೆ. ನಮ್ಮ ಸರ್ಕಾರದ ಉತ್ತಮ ಕೆಲಸ ಕಂಡು ವಿಶ್ವಾಸದಿಂದ ದೇಶದ ಜನರು ಮತ್ತೊಮ್ಮೆ ಆಶೀರ್ವದಿಸುವ ವಿಶ್ವಾಸದಲ್ಲಿ ನಾವಿದ್ದೇವೆ ಎಂದರು. 

ಕಳೆದ 10 ವರ್ಷಗಳಲ್ಲಿ 25 ಕೋಟಿ ಜನರಿಗೆ ಬಹು ಆಯಾಮದ ಬಡತನದಿಂದ ಹೊರಬರಲು ಸರ್ಕಾರ ಸಹಾಯ ಮಾಡಿದೆ. ಎರಡನೇ ಅವಧಿಯಲ್ಲಿ, ನಮ್ಮ ಸರ್ಕಾರವು ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮತ್ತು ಸಬ್ಕಾ ವಿಶ್ವಾಸ್ ಘೋಷವಾಕ್ಯದಂತೆ ನಡೆದಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT