ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 
ದೇಶ

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವಾಗಿ ಮಾಡುವುದು ಸರ್ಕಾರದ ಗುರಿ: ನಿರ್ಮಲಾ ಸೀತಾರಾಮನ್

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಸರ್ಕಾರ ಶ್ರಮಿಸುತ್ತಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಹೇಳಿದ್ದಾರೆ.

ನವದೆಹಲಿ: 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಸರ್ಕಾರ ಶ್ರಮಿಸುತ್ತಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಹೇಳಿದ್ದಾರೆ.

2024-25 ರ ಮಧ್ಯಂತರ ಬಜೆಟ್ ನ್ನು ಇಂದು ಲೋಕಸಭೆಯಲ್ಲಿ ಮಂಡಿಸಿ ಮಾತನಾಡಿ ನಿರ್ಮಲಾ ಸೀತಾರಾಮನ್, 'ಅನ್ನದಾತ' (ರೈತರು)ರಿಗಾಗಿ ಕನಿಷ್ಠ ಬೆಂಬಲ ಬೆಲೆಗಳನ್ನು ನಿಯತಕಾಲಿಕವಾಗಿ ಮತ್ತು ಸೂಕ್ತವಾಗಿ ಹೆಚ್ಚಿಸಲಾಗಿದೆ ಎಂದು ಹೇಳಿದರು.

ಸರ್ಕಾರಕ್ಕೆ ಸಾಮಾಜಿಕ ನ್ಯಾಯವು ಪರಿಣಾಮಕಾರಿ ಮತ್ತು ಅಗತ್ಯ ಮಾದರಿಯಾಗಿದೆ ಎಂದು ಅವರು ಪ್ರತಿಪಾದಿಸಿದರು. ಸರ್ಕಾರವು ವ್ಯವಸ್ಥಿತ ಅಸಮಾನತೆಗಳನ್ನು ನಿವಾರಿಸಲು ಗಮನಹರಿಸುತ್ತಿದೆ, ಸಾಮಾಜಿಕ-ಆರ್ಥಿಕ ರೂಪಾಂತರವನ್ನು ಸಾಧಿಸಲು ಫಲಿತಾಂಶಗಳ ಮೇಲೆ ಒತ್ತು ನೀಡಲಾಗಿದೆ ಎಂದರು. 

ನಾವು ಫಲಿತಾಂಶಗಳ ಮೇಲೆ ಕೇಂದ್ರೀಕರಿಸುತ್ತೇವೆ ಹೊರತು ವೆಚ್ಚಗಳ ಮೇಲೆ ಅಲ್ಲ. ಸರ್ಕಾರಕ್ಕೆ ಬಡವರು, ಮಹಿಳೆಯರು, ಯುವಕರು ಮತ್ತು ರೈತರು ನಾಲ್ಕು ಜಾತಿಗಳು ಮುಖ್ಯವಾಗಿದೆ. ಇವರ ಅಭಿವೃದ್ಧಿಯಿಂದಲೇ ದೇಶ ಮುನ್ನಡೆಯುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT