ಪಿಯೂಶ್ ಗೋಯಲ್ 
ದೇಶ

ಬಜೆಟ್ ಅಧಿವೇಶನ: ಸಂಸತ್ತಿನಲ್ಲಿ ಸದ್ದು ಮಾಡಿದ ಡಿಕೆ ಸುರೇಶ್ ‌'ಪ್ರತ್ಯೇಕ ರಾಷ್ಟ್ರ' ಹೇಳಿಕೆ, ಕಾಂಗ್ರೆಸ್ ಕ್ಷಮೆಯಾಚನೆಗೆ ಆಗ್ರಹ

ಸಂಸತ್ತಿನಲ್ಲಿ ಬಜೆಟ್ ಅಧಿವೇಶನ ಶುಕ್ರವಾರ ಆರಂಭವಾಗಿದ್ದು, ಅಧಿವೇಶನದಲ್ಲಿ ಕಾಂಗ್ರೆಸ್‌ ಸಂಸದ ಡಿಕೆ ಸುರೇಶ್‌ ಅವರ ʼಪ್ರತ್ಯೇಕ ರಾಷ್ಟ್ರ ಹೇಳಿಕೆʼಯು ತೀವ್ರ ಗದ್ದಲವೆಬ್ಬಿಸಿದೆ. ನಾಯಕನ ಹೇಳಿಕೆ ಸಂಬಂಧ ಕಾಂಗ್ರೆಸ್‌ ಕ್ಷಮೆಯಾಚನೆ ಮಾಡಬೇಕೆಂದು ಆಡಳಿರೂಢ ಪಕ್ಷದ ನಾಯಕರು ಆಗ್ರಹಿಸುತ್ತಿದ್ದಾರೆ.

ನವದೆಹಲಿ: ಸಂಸತ್ತಿನಲ್ಲಿ ಬಜೆಟ್ ಅಧಿವೇಶನ ಶುಕ್ರವಾರ ಆರಂಭವಾಗಿದ್ದು, ಅಧಿವೇಶನದಲ್ಲಿ ಕಾಂಗ್ರೆಸ್‌ ಸಂಸದ ಡಿಕೆ ಸುರೇಶ್‌ ಅವರ ʼಪ್ರತ್ಯೇಕ ರಾಷ್ಟ್ರ ಹೇಳಿಕೆʼಯು ತೀವ್ರ ಗದ್ದಲವೆಬ್ಬಿಸಿದೆ. ನಾಯಕನ ಹೇಳಿಕೆ ಸಂಬಂಧ ಕಾಂಗ್ರೆಸ್‌ ಕ್ಷಮೆಯಾಚನೆ ಮಾಡಬೇಕೆಂದು ಆಡಳಿರೂಢ ಪಕ್ಷದ ನಾಯಕರು ಆಗ್ರಹಿಸುತ್ತಿದ್ದಾರೆ.

ಡಿಕೆ ಸುರೇಶ್ ಹೇಳಿಕೆ ಬಗ್ಗೆ ಸಭಾನಾಯಕ ಪಿಯೂಶ್ ಗೋಯಲ್ ಇಂದು ರಾಜ್ಯಸಭೆಯಲ್ಲಿ ಪ್ರಸ್ತಾಪ ಮಾಡಿದರು. ಜೊತೆಗೆ ಕಾಂಗ್ರೆಸ್ ಪಕ್ಷ ಈ ಬಗ್ಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ವಿರೋಧ ಪಕ್ಷದ ನಾಯಕರು, ಅದೇ ಪಕ್ಷದ ನಾಯಕರು ಸುರೇಶ್ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿಲ್ಲ. ಕರ್ನಾಟಕದ ಡಿಸಿಎಂ ಸಹೋದರ ಹಾಗೂ ಸಂಸದರಾಗಿರುವ ಸುರೇಶ್ ಅವರು ದೇಶ ಕ್ಷಮೆ ಕೇಳುವಂತೆ ಒತ್ತಾಯಿಸಿದರು.

ಲೋಕಸಭೆ ಸಂಸದರಾಗಿ ಈ ದೇಶವನ್ನು ಒಡೆಯುವ ಮಾತನಾಡಿದ್ದಾರೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ದೇಶದ ಏಕತೆ ಮತ್ತು ಸಾರ್ವಭೌಮತ್ವದ ಮುಂದೆ ಯಾವುದೂ ಇಲ್ಲ ಎಂದು ಹೇಳಬೇಕು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಆಕ್ಷೇಪ ವ್ಯಕ್ತಪಡಿಸಿದರು.

ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿ, ಯಾರಾದರೂ ದೇಶ ಒಡೆಯುವ ಬಗ್ಗೆ ಮಾತನಾಡಿದರೆ ನಾವು ಅದನ್ನು ಎಂದಿಗೂ ಸಹಿಸುವುದಿಲ್ಲ. ಅವರು ಯಾವುದೇ ಪಕ್ಷದವರಾಗಿರಲಿ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಾವು ಒಂದೇ. ಭಾರತ ಅಖಂಡವಾಗಿರಲಿದೆ ಎಂದರು.

ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಡಿಕೆ.ಸುರೇಶ್ ಅವರು, ದೆಹಲಿಯಲ್ಲಿ ಕೇಂದ್ರ ವಿತ್ತ ಸಚಿzವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದರು.

ಇಂದಿನ ಬಜೆಟ್‍ನಲ್ಲಿ ಹೊಸತೇನು ಇಲ್ಲ. ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ. ಇಂದು ನಮ್ಮ ಗ್ಯಾರಂಟಿಗಳನ್ನು ವಿರೋಧ ಮಾಡಿದಂತವರು ಗ್ಯಾರಂಟಿ ಹೆಸರಿನಲ್ಲಿ ಚುನಾವಣೆಗೆ ಹೊರಟಿದ್ದಾರೆ. ದಕ್ಷಿಣ ಭಾರತದ ಹಣವನ್ನ ಉತ್ತರ ಭಾರತಕ್ಕೆ ಬಿಡುತ್ತಿದ್ದಾರೆ. ಇದರಿಂದ ನಮಗೆ ಆರ್ಥಿಕ ತೊಂದರೆಯಾಗುತ್ತಿದೆ. ಹೀಗೆ ಮುಂದುವರಿದರೆ ಪ್ರತ್ಯೇಕ ದೇಶ ಕೇಳಬೇಕಾಗುತ್ತದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT