ವಿಪಕ್ಷ ನಾಯಕರು 
ದೇಶ

‘ಇಂಡಿಯಾ’ ಮೈತ್ರಿಕೂಟ ಲೋಕಸಭೆ ಚುನಾವಣೆಗೆ ಮಾತ್ರ, ಯಾವುದೇ ರಾಜ್ಯದ ವಿಧಾನಸಭೆ ಚುನಾವಣೆಗೆ ಅಲ್ಲ: ಕಾಂಗ್ರೆಸ್

‘ಇಂಡಿಯಾ’ ಮೈತ್ರಿಕೂಟ 2024ರ ಲೋಕಸಭೆ ಚುನಾವಣೆಗೆ ಹೊರತು ಯಾವುದೇ ರಾಜ್ಯದ ವಿಧಾನಸಭೆ ಚುನಾವಣೆಗೆ ಅಲ್ಲ ಎಂದು  ಕಾಂಗ್ರೆಸ್ ಶುಕ್ರವಾರ ಸ್ಪಷ್ಟಪಡಿಸಿದೆ. ಅಲ್ಲದೆ ಲೋಕಸಭೆ ಚುನಾವಣೆಗೆ 27 ವಿರೋಧ ಪಕ್ಷಗಳ ಮೈತ್ರಿಕೂಟ...

ರಾಮಪುರ: ‘ಇಂಡಿಯಾ’ ಮೈತ್ರಿಕೂಟ 2024ರ ಲೋಕಸಭೆ ಚುನಾವಣೆಗೆ ಹೊರತು ಯಾವುದೇ ರಾಜ್ಯದ ವಿಧಾನಸಭೆ ಚುನಾವಣೆಗೆ ಅಲ್ಲ ಎಂದು  ಕಾಂಗ್ರೆಸ್ ಶುಕ್ರವಾರ ಸ್ಪಷ್ಟಪಡಿಸಿದೆ. ಅಲ್ಲದೆ ಲೋಕಸಭೆ ಚುನಾವಣೆಗೆ 27 ವಿರೋಧ ಪಕ್ಷಗಳ ಮೈತ್ರಿಕೂಟ ಅಸ್ತಿತ್ವದಲ್ಲಿದೆ ಮತ್ತು ಒಟ್ಟಾಗಿ ಹೋರಾಡಲಿದೆ ಎಂದು ಪ್ರತಿಪಾದಿಸಿದೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಇತ್ತೀಚೆಗೆ ಬಿಜೆಪಿ ನೇತೃತ್ವದ ಎನ್‌ಡಿಎಗೆ ಸೇರ್ಪಡೆಯಾಗಿದ್ದು, ಇದರೊಂದಿಗೆ ಇಂಡಿಯಾ ಮೈತ್ರಿಕೂಟದ ವಿರೋಧ ಪಕ್ಷಗಳ ಸಂಖ್ಯೆ 27ಕ್ಕೆ ಇಳಿದಿದೆ.

ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ನ್ಯಾಯ್ ಯಾತ್ರೆ' 2024 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಇದು ರಾಜಕೀಯ ಕಾರ್ಯಕ್ರಮವಾಗಿದ್ದರೂ ಚುನಾವಣಾ ಪ್ರಚಾರವಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಹೇಳಿದ್ದಾರೆ.

"ಇಂಡಿಯಾ ಮೈತ್ರಿಯು ಸಾರ್ವತ್ರಿಕ ಚುನಾವಣೆಗಾಗಿಯೇ ಹೊರತು ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಅಥವಾ ಇತರ ಯಾವುದೇ ರಾಜ್ಯಗಳ ವಿಧಾನಸಭಾ ಚುನಾವಣೆಗಳಿಗಾಗಿ ಅಲ್ಲ" ಎಂದು ಅವರು ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಯನ್ನು ಕಾಂಗ್ರೆಸ್, ಎನ್‌ಸಿಪಿ ಮತ್ತು ಶಿವಸೇನೆ ಒಟ್ಟಾಗಿ ಎದುರಿಸಲಿದ್ದರೂ, ಇತರ ರಾಜ್ಯಗಳ ಚುನಾವಣೆಯಲ್ಲಿ ಇಂಡಿಯಾ ಪಾಲುದಾರರ ಮೈತ್ರಿ ಇರುವುದಿಲ್ಲ ಎಂದು ರಮೇಶ್ ಹೇಳಿದ್ದಾರೆ.

ದೇಶದಲ್ಲಿ ಬಿಜೆಪಿಯನ್ನು ನೇರವಾಗಿ ಅಥವಾ ಪರೋಕ್ಷವಾಗಿ ಬೆಂಬಲಿಸದ ಏಕೈಕ ಪಕ್ಷ ಕಾಂಗ್ರೆಸ್ ಎಂದು ರಮೇಶ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT