ಪ್ರಧಾನಿ ಮೋದಿ 
ದೇಶ

ಅಡ್ವಾಣಿ ದೇಶವನ್ನು ಒಂದು ಪಕ್ಷ, ಒಂದು ಕುಟುಂಬದ ಹಿಡಿತದಿಂದ ರಕ್ಷಿಸಿದ್ದಾರೆ: ಪ್ರಧಾನಿ ಮೋದಿ

ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಉಪ ಪ್ರಧಾನಿ ಲಾಲ್‌ ಕೃಷ್ಣ ಅಡ್ವಾಣಿ ಅವರು ದೇಶ ಸೇವೆಗೆ ನೀಡಿದ ಅಮೂಲ್ಯ ಕೊಡುಗೆಯನ್ನು ಗುರುತಿಸಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ನೀಡುವ ನಿರ್ಧಾರ...

ಸಂಬಲ್‌ಪುರ: ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಉಪ ಪ್ರಧಾನಿ ಲಾಲ್‌ ಕೃಷ್ಣ ಅಡ್ವಾಣಿ ಅವರು ದೇಶ ಸೇವೆಗೆ ನೀಡಿದ ಅಮೂಲ್ಯ ಕೊಡುಗೆಯನ್ನು ಗುರುತಿಸಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ನೀಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಇಂದು ಸಂಬಲ್‌ಪುರದಲ್ಲಿ ಸುಮಾರು 70,000 ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಿದ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 'ದೇಶ ಮೊದಲು' ಎಂಬ ಸಿದ್ಧಾಂತವನ್ನು ನಂಬುವ ಎಲ್ಲರಿಗೂ ಇಂತಹ ಗೌರವ ಸಲ್ಲಬೇಕು ಎಂದರು.

"ಇಬ್ಬರು ಸಂಸದರೊಂದಿಗೆ ತನ್ನ ಪಯಣವನ್ನು ಆರಂಭಿಸಿದ ಪಕ್ಷವನ್ನು ವಿಶ್ವದ ಅತಿದೊಡ್ಡ ಪಕ್ಷವಾಗಿ ಪರಿವರ್ತಿಸಲು ಸಹಾಯ ಮಾಡಿದ ಪಕ್ಷದ ಕಾರ್ಯಕರ್ತನಿಗೆ ಈ ಗೌರವ" ಎಂದು ಮೋದಿ ಹೇಳಿದ್ದಾರೆ.

ವಿರೋಧಿಗಳು ಬಿಜೆಪಿಯನ್ನು ಅಸ್ಪೃಶ್ಯ ಎಂದು ಘೋಷಿಸಿದ ಸಮಯವನ್ನು ನೆನಪಿಸಿಕೊಂಡ ಮೋದಿ, ಅಟಲ್ ಬಿಹಾರಿ ವಾಜಪೇಯಿ ಮತ್ತು ಅಡ್ವಾಣಿ ಈ ಸಿದ್ಧಾಂತವನ್ನು ಸೋಲಿಸಲು ಮತ್ತು ಪಕ್ಷವನ್ನು ದೇಶದಲ್ಲಿ ಪ್ರಮುಖ ರಾಜಕೀಯ ಶಕ್ತಿಯಾಗಿ ಬೆಳೆಯಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು ಎಂದರು.

ಒಂದು ಪಕ್ಷ ಮತ್ತು ಒಂದು ಕುಟುಂಬದ ಕಪಿಮುಷ್ಠಿಯಿಂದ ದೇಶವನ್ನು ರಕ್ಷಿಸುವಲ್ಲಿ ಅಡ್ವಾಣಿ ಅವರು ವಹಿಸಿದ ಪಾತ್ರವನ್ನು ಶ್ಲಾಘಿಸಿದ ಪ್ರಧಾನಿ ಮೋದಿ, 96 ವರ್ಷದ ಬಿಜೆಪಿ ನಾಯಕ, ರಾಷ್ಟ್ರೀಯತೆಯ ಸಿದ್ಧಾಂತದೊಂದಿಗೆ ಜನರನ್ನು ಸಂಪರ್ಕಿಸುವ ಮೂಲಕ ಭಾರತೀಯ ಪ್ರಜಾಪ್ರಭುತ್ವವನ್ನು ಇನ್ನಷ್ಟು ಬಲಪಡಿಸುವ ಸವಾಲು ತೆಗೆದುಕೊಂಡಿದ್ದರು ಎಂದು ಹೇಳಿದರು. .

"ನಾವು ಈಗ ಅವರ ತಪಸ್ಸಿನ ಫಲಿತಾಂಶವನ್ನು ನೋಡುತ್ತಿದ್ದೇವೆ. ರಾಷ್ಟ್ರಕ್ಕಾಗಿ ಅವರು ನೀಡಿದ ಕೊಡುಗೆಗಾಗಿ ನಾನು ಮತ್ತೊಮ್ಮೆ ಅಡ್ವಾಣಿ ಜಿ ಅವರನ್ನು ಅಭಿನಂದಿಸುತ್ತೇನೆ ಮತ್ತು ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ" ಎಂದು ಮೋದಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT