ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುತ್ತಿರುವುದು. 
ದೇಶ

ಬಿಜೆಪಿ ಶಾಸಕ-ಶಿವಸೇನಾ ಶಿಂಧೆ ಬಣದ ನಡುವೆ ಘರ್ಷಣೆ: ಪೊಲೀಸ್ ಠಾಣೆಯಲ್ಲೇ ಗುಂಡಿನ ದಾಳಿ, ಮಹೇಶ್ ಗಾಯಕ್ವಾಡ್ ಸ್ಥಿತಿ ಗಂಭೀರ

ಭಾರತೀಯ ಜನತಾ ಪಕ್ಷದ ಶಾಸಕ ಗಣಪತ್ ಗಾಯಕ್ವಾಡ್ ಬೆಂಬಲಿಗರು ಶಿವಸೇನಾ (ಏಕನಾಥ್ ಶಿಂಧೆ) ಬಣದ ನಾಯಕ ಮಹೇಶ್ ಗಾಯಕ್ವಾಡ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ಥಾಣೆಯ ಉಲ್ಲಾಸನಗರದ ಹಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಥಾಣೆ (ಮಹಾರಾಷ್ಟ್ರ): ಭಾರತೀಯ ಜನತಾ ಪಕ್ಷದ ಶಾಸಕ ಗಣಪತ್ ಗಾಯಕ್ವಾಡ್ ಬೆಂಬಲಿಗರು ಶಿವಸೇನಾ (ಏಕನಾಥ್ ಶಿಂಧೆ) ಬಣದ ನಾಯಕ ಮಹೇಶ್ ಗಾಯಕ್ವಾಡ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ಥಾಣೆಯ ಉಲ್ಲಾಸನಗರದ ಹಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಮಹೇಶ್ ಗಾಯಕ್ವಾಡ್ ಮತ್ತು ಅವರ ಬೆಂಬಲಿಗನೊಬ್ಬನಿಗೆ ಐದು ಗುಂಡುಗಳು ತಗುಲಿವೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಜಮೀನು ವಿವಾದಕ್ಕೆ ಸಂಬಂಧಿಸಿ ನಡೆದ ಗಲಾಟೆ ಪೊಲೀಸ್ ಠಾಣೆ ಮೆಟ್ಟಿಲೇರುವ ತನಕ ಹೋಗಿತ್ತು. ಅದರಂತೆ ಇಬ್ಬರು ರಾಜಕಾರಣಿಗಳು ಪರಸ್ಪರ ದೂರು ನೀಡಲು ಹಿಲ್ ಲೈನ್ ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ಇಬ್ಬರು ರಾಜಕಾರಣಿಗಳ ಬೆಂಬಲಿಗರೂ ಕೂಡ ಅಲ್ಲಿ ಸೇರಿದ್ದರು.

ಈ ನಡುವೆ ಎರಡು ಕಡೆಯವರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಗಣೇಶ್ ಗಾಯಕ್ವಾಡ್ ಅವರು ಮಹೇಶ್ ಗಾಯಕ್ವಾಡ್ ಮೇಲೆ ನಾಲ್ಕು ಸುತ್ತಿನ ಗುಂಡುಗಳನ್ನು ಹಾರಿಸಿದ್ದಾರೆಂದು ತಿಳಿದುಬಂದಿದೆ.

ಗಾಯಗೊಂಡ ಇಬ್ಬರನ್ನು ಥಾಣೆಯ ಜುಪಿಟರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಗುಂಡು ಹಾರಿಸಿದ ಗಣಪತ್ ಗಾಯಕ್ವಾಡ್ ಅವರನ್ನು ಪೊಲೀಸರು ಬಂಧಿಸಿ ವಶಕ್ಕೆ ಪಡೆದಿದ್ದಾರೆ. ಜೊತೆಗೆ ಅವರು ಬಳಸಿದ ಗನ್ ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

ಗಾಯಗೊಂಡ ಮಹೇಶ್ ಗಾಯಕ್ವಾಡ್ ಅವರನ್ನು ಮೊದಲು ಉಲ್ಲಾಸನಗರದ ಮೀರಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ರಾತ್ರಿ 11 ಗಂಟೆಗೆ ಥಾಣೆಯ ಜುಪಿಟರ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸದ್ಯ ಜುಪಿಟರ್ ಆಸ್ಪತ್ರೆಯಲ್ಲಿ ಶಿವಸೇನೆ ನಾಯಕನ ಬೆಂಬಲಿಗರು ಜಮಾಯಿಸಿದ್ದು, ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯ ಆಸ್ಪತ್ರೆ ಸುತ್ತ ಹೆಚ್ಚಿನ ಪೊಲೀಸ್ ಸಿಬಂದಿಗಳನ್ನು ನಿಯೋಜನೆಗೊಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ