ಗಣಪತ್ ಗಾಯಕ್ವಾಡ್ 
ದೇಶ

ಶಿವಸೇನಾ ನಾಯಕನ ಮೇಲೆ ಗುಂಡಿನ ದಾಳಿ: ಬಿಜೆಪಿ ಶಾಸಕನ ಬಂಧನ, ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಕೇಸ್ ದಾಖಲು

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಪೊಲೀಸ್ ಠಾಣೆಯೊಳಗೆ ಶಿವಸೇನೆ ಮುಖಂಡನ ಮೇಲೆ ಗುಂಡು ಹಾರಿಸಿದ ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್ ವಿರುದ್ಧ ಎಸ್‌ಸಿ/ಎಸ್‌ಟಿ(ದೌರ್ಜನ್ಯ ತಡೆ) ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು..

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಪೊಲೀಸ್ ಠಾಣೆಯೊಳಗೆ ಶಿವಸೇನೆ ಮುಖಂಡನ ಮೇಲೆ ಗುಂಡು ಹಾರಿಸಿದ ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್ ವಿರುದ್ಧ ಎಸ್‌ಸಿ/ಎಸ್‌ಟಿ(ದೌರ್ಜನ್ಯ ತಡೆ) ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಗಾಯಕ್ವಾಡ್ ಹಾಗೂ ಇತರ ಜನ ಜನವರಿ 31 ರಂದು ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ನೀಡಿದ ದೂರಿನ ಮೇರೆಗೆ ಶಾಸಕರ ವಿರುದ್ಧ ಎಸ್‌ಸಿ/ಎಸ್‌ಟಿ(ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಶಾಸಕ ಗಣಪತ್ ಗಾಯಕ್ವಾಡ್ ಅವರು ಭೂ ವಿವಾದಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಮಾತುಕತೆ ನಡೆಯುವಾಗ ತಮ್ಮದೇ ಮಿತ್ರ ಪಕ್ಷದ ಮಹೇಶ್ ಗಾಯಕ್‌ವಾಡ್ ಅವರ ಮೇಲೆ ಗುಂಡು ಹಾರಿಸಿದ್ದರು. ಸ್ಥಳದಲ್ಲಿಯೇ ಅವರನ್ನು ಬಂಧಿಸಲಾಗಿದ್ದು, ಈ ದಾಳಿಯ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕಲ್ಯಾಣದ ಪೂರ್ವ ಕಲ್ಯಾಣ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿರುವ ಗಾಯಕ್ವಾಡ್ ವಿರುದ್ಧ ಕೊಲೆ ಯತ್ನ ಮತ್ತು ಎಸ್‌ಸಿ/ಎಸ್‌ಟಿ(ದೌರ್ಜನ್ಯ ತಡೆ) ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ.

ಗುಂಡಿನ ದಾಳಿಯಲ್ಲಿ ಇಬ್ಬರು ವ್ಯಕ್ತಿಗಳಿಗೆ ಗಾಯಗಳಾಗಿವೆ ಎಂದು ಉಪ ಪೊಲೀಸ್ ಆಯುಕ್ತ (ಡಿಸಿಪಿ) ಸುಧಾಕರ್ ಪಥಾರೆ ಅವರು ತಿಳಿಸಿದ್ದಾರೆ.

ಶನಿವಾರ ದ್ವಾರಲಿ ಗ್ರಾಮದ ನಿವಾಸಿಯೊಬ್ಬರು ನೀಡಿದ ದೂರಿನ ಮೇರೆಗೆ ಗಣಪತ್ ಗಾಯಕ್ವಾಡ್ ಮತ್ತು ಇತರ ಏಳು ಮಂದಿ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿಲ್ ಲೈನ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಇಬ್ಬರೂ ಕಡೆಯವರು ಉಲ್ಲಾಸ ನಗರದಲ್ಲಿನ ಹಿಲ್ ಲೈನ್ ಪೊಲೀಸ್ ಠಾಣೆಗೆ ತೆರಳಿದ್ದರು. ಹಿರಿಯ ಇನ್‌ಸ್ಪೆಕ್ಟರ್ ಅವರ ಚೇಂಬರ್‌ನಲ್ಲಿ ಸಂಧಾನ ಮಾತುಕತೆ ನಡೆಯುತ್ತಿತ್ತು. ಈ ವೇಳೆ ಗಣಪತ್ ಮತ್ತು ಮಹೇಶ್ ನಡುವೆ ತೀವ್ರ ಮಾತಿನ ಚಕಮಕಿ ನಡೆದಿತ್ತು. ಆಗ ಕೋಪಗೊಂಡ ಗಣಪತ್, ತಮ್ಮ ಪಿಸ್ತೂಲು ತೆಗೆದು ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ಮಹೇಶ್ ಮತ್ತು ಅವರ ಒಬ್ಬ ಬೆಂಬಲಿಗನಿಗೆ ಗಾಯಗಳಾಗಿವೆ. ಅವರಿಬ್ಬರನ್ನೂ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!