ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ 
ದೇಶ

ಅಪರಾಧ ತಡೆಯುವ ಬದಲು ಡ್ರಾಮಾ ಮಾಡುತ್ತಿದ್ದಾರೆ: ದೆಹಲಿ ಕ್ರೈಂ ಬ್ರ್ಯಾಂಚ್‌ ಪೊಲೀಸರ ವಿರುದ್ಧ ಕೇಜ್ರಿವಾಲ್ ಕಿಡಿ

ಅಪರಾಧ ತಡೆಯುವ ಬದಲು ನಾಟಕ ಮಾಡುತ್ತಿದ್ದಾರೆಂದು ದೆಹಲಿ ಕ್ರೈಂ ಬ್ರ್ಯಾಂಚ್‌ ಪೊಲೀಸರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಕಿಡಿಕಾರಿದ್ದಾರೆ.

ನವದೆಹಲಿ: ಅಪರಾಧ ತಡೆಯುವ ಬದಲು ನಾಟಕ ಮಾಡುತ್ತಿದ್ದಾರೆಂದು ದೆಹಲಿ ಕ್ರೈಂ ಬ್ರ್ಯಾಂಚ್‌ ಪೊಲೀಸರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಕಿಡಿಕಾರಿದ್ದಾರೆ.

ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರನ್ನು ಖರೀದಿಸಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಯತ್ನಿಸುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಲು ಕಳೆದ ಎರಡು ದಿನಗಳಿಂದ ದೆಹಲಿ ಪೊಲೀಸ್ ಅಪರಾಧ ದಳದ ಅಧಿಕಾರಿಗಳು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸಕ್ಕೆ ಭೇಟಿ ನೀಡುತ್ತಿದ್ದಾರೆ,

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಕೇಜ್ರಿವಾಲ್ ಅವರು, ರಾಷ್ಟ್ರ ರಾಜಧಾನಿಯಲ್ಲಿ ಅಪರಾಧಗಳನ್ನು ನಿಲ್ಲಿಸುವ ಬದಲು  ರಾಜಕೀಯ ಮಾಸ್ಟರ್ ಗಳ ಸೂಚನೆ ಮೇರೆಗೆ ನಾಟಕ ಮಾಡುತ್ತಿದ್ದಾರೆಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು,     ಕ್ರೈಂ ಬ್ರ್ಯಾಂಚ್ ಪೊಲೀಸರನ್ನು ನೋಡಿದರೆ ಅಯ್ಯೋ (ಸಹಾನುಭೂತಿ) ಎನಿಸುತ್ತಿದೆ. ಅವರ ತಪ್ಪಾದರೂ ಏನಿದೆ? ದೆಹಲಿಯಲ್ಲಿ ಅಪರಾಧ ತಡೆಯುವುದು ಅವರ ಜವಾಬ್ದಾರಿ. ಆದರೆ, ಅಪರಾಧ ತಡೆಯುವ ಬದಲು ನಾಟಕ ಮಾಡುತ್ತಿದ್ದಾರೆ. ಹೀಗಾಗಿಯೇ ದೆಹಲಿಯಲ್ಲಿ ಅಪರಾಧ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಹೇಳಿದ್ದಾರೆ.

ಯಾವ ಯಾವ ಎಎಪಿ ಶಾಸಕರನ್ನು ಖರೀದಿ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ನನಗೆ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ, ನಮಗಿಂತಲೂ ಅವರಿಗೆ ಈ ಬಗ್ಗೆ ಹೆಚ್ಚು ತಿಳಿದಿದೆ. ಕೇವಲ ದೆಹಲಿಯಷ್ಟೇ ಅಲ್ಲ, ದೇಶಾದ್ಯಂತ ಕಳೆದ ಕೆಲವು ವರ್ಷಗಳಲ್ಲಿ ಇತರ ಪಕ್ಷಗಳ ಯಾವ ಶಾಸಕರು ಮತ್ತು ಯಾವ ಸರ್ಕಾರಗಳು ಉರುಳಿದವು ಎಂಬುದೂ ಪೊಲೀಸರಿಗೆ ತಿಳಿದಿದೆ. ಹಾಗಿದ್ದರೂ ಈ ನಾಟಕ ಏಕೆ? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT