ಜಾರ್ಖಂಡ್ ಶಾಸಕರು 
ದೇಶ

ನಾಳೆ ವಿಶ್ವಾಸ ಮತಯಾಚನೆ: ಜಾರ್ಖಂಡ್ ಶಾಸಕರು ಹೈದರಾಬಾದ್‌ನಿಂದ ರಾಂಚಿಗೆ ವಾಪಸ್

ಕಳೆದ ಮೂರು ದಿನಗಳಿಂದ ಹೈದರಾಬಾದ್‌ನ ರೆಸಾರ್ಟ್‌ನಲ್ಲಿ ತಂಗಿದ್ದ ಜಾರ್ಖಂಡ್‌ನ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ ನೇತೃತ್ವದ ಮೈತ್ರಿಕೂಟದ ಶಾಸಕರು ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆಗೂ ಒಂದು ದಿನ ಮುಂಚಿತವಾಗಿ...

ಹೈದರಾಬಾದ್‌: ಕಳೆದ ಮೂರು ದಿನಗಳಿಂದ ಹೈದರಾಬಾದ್‌ನ ರೆಸಾರ್ಟ್‌ನಲ್ಲಿ ತಂಗಿದ್ದ ಜಾರ್ಖಂಡ್‌ನ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ ನೇತೃತ್ವದ ಮೈತ್ರಿಕೂಟದ ಶಾಸಕರು ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆಗೂ ಒಂದು ದಿನ ಮುಂಚಿತವಾಗಿ ಭಾನುವಾರ ರಾಂಚಿಗೆ ತೆರಳಿದ್ದಾರೆ.

ಹೊಸದಾಗಿ ರಚನೆಯಾದ ಚಂಪೈ ಸೋರೆನ್ ಸರ್ಕಾರವು ಸೋಮವಾರ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚಿಸಲಿದೆ. ಪ್ರತಿಪಕ್ಷ ಬಿಜೆಪಿ ತಮ್ಮ ಶಾಸಕರನ್ನು ಖರೀದಿಸಬಹುದು ಎಂಬ ಆತಂಕದಿಂದ ಮೈತ್ರಿಕೂಟದ ಸುಮಾರು 40 ಶಾಸಕರು ಫೆಬ್ರವರಿ 2 ರಂದು ಎರಡು ವಿಮಾನಗಳಲ್ಲಿ ಹೈದರಾಬಾದ್‌ಗೆ ಆಗಮಿಸಿದ್ದರು. 

ಇಂದು ಸಂಜೆ  ಹೈದರಾಬಾದ್‌ನ ಶಂಶಾಬಾದ್‌ನಲ್ಲಿರುವ ಆರ್‌ಜಿಐ ವಿಮಾನ ನಿಲ್ದಾಣದಿಂದ ಎಲ್ಲಾ 40 ಶಾಸಕರು ರಾಂಚಿಗೆ ವಿಮಾನದ ಮೂಲಕ ತೆರಳಿದರು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಕಳೆದ ಮೂರು ದಿನಗಳ ಹಿಂದೆ ನಗರದ ಹೊರವಲಯದ ಶಾಮೀರ್‌ಪೇಟೆಯಲ್ಲಿರುವ ಐಷಾರಾಮಿ ರೆಸಾರ್ಟ್‌ನಲ್ಲಿ ಶಾಸಕರಿಗೆ ವಸತಿ ಕಲ್ಪಿಸಲಾಗಿತ್ತು.

81 ಸದಸ್ಯರ ಜಾರ್ಖಂಡ್ ವಿಧಾನಸಭೆಯಲ್ಲಿ ಜೆಎಂಎಂ ನೇತೃತ್ವದ ಮೈತ್ರಿಕೂಟ 43 ಶಾಸಕರ ಬೆಂಬಲವನ್ನು ಹೊಂದಿದೆ. 43 ಶಾಸಕರ ಬೆಂಬಲವಿರುವ ಮೈತ್ರಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್​ ನಾಯಕ ಪ್ರಣವ್ ಝಾ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT