ಹೇಮಂತ್ ಸೋರೆನ್ 
ದೇಶ

ಸೋರೆನ್ ರಿಂದ ಎಸ್‌ಸಿ/ಎಸ್‌ಟಿ ಕಾಯಿದೆಯಡಿ ಕೇಸ್ ದಾಖಲು: ಹೈಕೋರ್ಟ್ ಮೆಟ್ಟಿಲೇರಿದ ಇಡಿ

ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ಕೇಂದ್ರ ತನಿಖಾ ಸಂಸ್ಥೆ ತಮಗೆ ಮತ್ತು ತಮ್ಮ ಸಮುದಾಯಕ್ಕೆ "ಕಿರುಕುಳ" ನೀಡಿದೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ(ಇಡಿ)ದ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯಿದೆಯಡಿ ಕೇಸ್ ದಾಖಲಿಸಿದ್ದಾರೆ.

ರಾಂಚಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ಕೇಂದ್ರ ತನಿಖಾ ಸಂಸ್ಥೆ ತಮಗೆ ಮತ್ತು ತಮ್ಮ ಸಮುದಾಯಕ್ಕೆ "ಕಿರುಕುಳ" ನೀಡಿದೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ(ಇಡಿ)ದ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯಿದೆಯಡಿ ಕೇಸ್ ದಾಖಲಿಸಿದ್ದಾರೆ. ಈಗ ಇಡಿ ಅಧಿಕಾರಿಗಳು ತಮ್ಮ ವಿರುದ್ಧ ದಾಖಲಿಸಲಾದ ಎಫ್ಐಆರ್ ಪ್ರಶ್ನಿಸಿ ಜಾರ್ಖಂಡ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಕಳೆದ ಬುಧವಾರ, ಹೇಮಂತ್ ಸೋರೆನ್ ಅವರು ತನಿಖಾ ಸಂಸ್ಥೆಯ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಅಧಿಕಾರಿಗಳು ತಮಗೆ ಮತ್ತು ತಮ್ಮ ಇಡೀ ಸಮುದಾಯಕ್ಕೆ 'ಕಿರುಕುಳ' ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಹೇಮಂತ್ ಸೋರೆನ್ ಅವರನ್ನು ಬುಧವಾರ ಸಂಜೆ 7 ಗಂಟೆಯ ನಂತರ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಬಂಧಿಸಿದೆ. ಅವರ ಬಂಧನದ ನಂತರ, ಜೆಎಂಎಂ ಹಿರಿಯ ನಾಯಕ ಚಂಪೈ ಸೊರೆನ್ ಅವರು ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

"ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಮಾಜಿ ಸಿಎಂ ಹೇಮಂತ್ ಸೋರೆನ್ ತನ್ನ ಅಧಿಕಾರಿಗಳ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಅನ್ನು ಪ್ರಶ್ನಿಸಿ ಇಡಿ ಜಾರ್ಖಂಡ್ ಹೈಕೋರ್ಟ್‌ಗೆ ತೆ ಫೆಬ್ರವರಿ 3 ರಂದು ಅರ್ಜಿ ಸಲ್ಲಿಸಿದೆ" ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಂಚಿಯ ಎಸ್ಸಿ ಎಸ್ಟಿ ಪೊಲೀಸ್ ಠಾಣೆಯಲ್ಲಿ ಇಡಿ ವಿರುದ್ಧ ದೂರು ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT