ರಾಹುಲ್ ಗಾಂಧಿ 
ದೇಶ

INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಶೇ. 50 ಮೀಸಲಾತಿಯ ಮಿತಿಯನ್ನು ತೆಗೆಯುತ್ತೇವೆ: ರಾಹುಲ್ ಗಾಂಧಿ

ಲೋಕಸಭೆ ಚುನಾವಣೆಯ ನಂತರ ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಷ್ಟ್ರವ್ಯಾಪಿ ಜಾತಿ ಗಣತಿ ನಡೆಸುವುದಾಗಿ ಮತ್ತು ಮೀಸಲಾತಿ ಮೇಲಿನ ಶೇಕಡಾ 50ರಷ್ಟು ಮಿತಿಯನ್ನು ತೆಗೆದುಹಾಕುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ರಾಂಚಿ: ಲೋಕಸಭೆ ಚುನಾವಣೆಯ ನಂತರ ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಷ್ಟ್ರವ್ಯಾಪಿ ಜಾತಿ ಗಣತಿ ನಡೆಸುವುದಾಗಿ ಮತ್ತು ಮೀಸಲಾತಿ ಮೇಲಿನ ಶೇಕಡಾ 50ರಷ್ಟು ಮಿತಿಯನ್ನು ತೆಗೆದುಹಾಕುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ನಮ್ಮ ಮೊದಲ ಹೆಜ್ಜೆ ದೇಶದಲ್ಲಿ ಜಾತಿ ಗಣತಿ ನಡೆಸುವುದು ಎಂದು ಹೇಳಿದ ರಾಹುಲ್ ಗಾಂಧಿ, ದಲಿತರು, ಆದಿವಾಸಿಗಳು ಮತ್ತು ಒಬಿಸಿ ಸಮುದಾಯಗಳಿಗೆ ಸೇರಿದವರನ್ನು ಜೀತದಾಳುಗಳಂತೆ ನಡೆಸಿಕೊಳ್ಳಲಾಗುತ್ತಿದೆ. ಕಂಪನಿಗಳು, ಆಸ್ಪತ್ರೆಗಳು, ಶಾಲೆ–ಕಾಲೇಜುಗಳು ಮತ್ತು ನ್ಯಾಯಾಲಯಗಳಲ್ಲಿ ಈ ಸಮುದಾಯಗಳ ಭಾಗವಹಿಸುವಿಕೆ ಕಡಿಮೆ ಇದೆ ಎಂದರು.

ಸಿಎಂ ಬುಡಕಟ್ಟು ಜನಾಂಗಕ್ಕೆ ಸೇರಿದವರು ಎಂಬ ಕಾರಣಕ್ಕೆ ಜಾರ್ಖಂಡ್‌ನಲ್ಲಿ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸಿದೆ. ಬಿಜೆಪಿ-ಆರ್‌ಎಸ್‌ಎಸ್ ಪಿತೂರಿಯನ್ನು ಸದೆಬಡಿದು ಬಡವರಿಗಾಗಿ ಸರ್ಕಾರ ರಚಿಸಿರುವ ಮೈತ್ರಿಕೂಟದ ಚಂಪೈ ಸೊರೆನ್ ಅವರನ್ನು ನಾನು ಅಭಿನಂದಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದರು.

ಅಸ್ತಿತ್ವದಲ್ಲಿರುವ ನಿಬಂಧನೆಗಳ ಅಡಿಯಲ್ಲಿ 50 ಪ್ರತಿಶತಕ್ಕಿಂತ ಹೆಚ್ಚಿನ ಮೀಸಲಾತಿಯನ್ನು ನೀಡಲಾಗುವುದಿಲ್ಲ ಎಂದು ಗಮನಿಸಿದ ಗಾಂಧಿ, ಇಂಡಿಯಾ ಮೈತ್ರಿಕೂಟ ಸರ್ಕಾರವು ಮೀಸಲಾತಿಯ ಮೇಲಿನ 50 ಪ್ರತಿಶತದ ಮಿತಿಯನ್ನು ತೆಗೆದುಹಾಕುತ್ತದೆ ಎಂದು ಭರವಸೆ ನೀಡಿದರು. ದಲಿತರು ಮತ್ತು ಬುಡಕಟ್ಟುಗಳ ಮೀಸಲಾತಿಯಲ್ಲಿ ಯಾವುದೇ ಕಡಿತವಿಲ್ಲ. ಸಮಾಜದ ಹಿಂದುಳಿದ ವರ್ಗಗಳು ಅವರ ಹಕ್ಕುಗಳನ್ನು ಪಡೆಯುತ್ತಾರೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಇದು ದೊಡ್ಡ ಸಮಸ್ಯೆ, ಸಾಮಾಜಿಕ ಮತ್ತು ಆರ್ಥಿಕ ಅನ್ಯಾಯ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ತಾವು ಒಬಿಸಿ ಎಂದು ಹೇಳುತ್ತಿದ್ದರು. ಆದರೆ ಜಾತಿ ಗಣತಿಗೆ ಬೇಡಿಕೆ ಬಂದಾಗ ಇಲ್ಲಿ ಎರಡು ಜಾತಿಗಳಿವೆ. ಅದು ಬಡವರು ಮತ್ತು ಶ್ರೀಮಂತರು. ಒಬಿಸಿಗಳು, ದಲಿತರು, ಬುಡಕಟ್ಟು ಜನಾಂಗದವರಿಗೆ ಹಕ್ಕು ನೀಡುವ ಸಮಯ ಬಂದಾಗ ಮೋದಿಯವರು ಜಾತಿ ಇಲ್ಲ ಎಂದು ಹೇಳುತ್ತಾರೆ. ಮತ ಬೇಟೆ ವಿಷಯಕ್ಕೆ ಬಂದಾಗ ತಾವು ಒಬಿಸಿ ಎಂದು ಹೇಳುತ್ತಾರೆ ಎಂದು ಹೇಳಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT