ಹೇಮಂತ್ ಸೊರೇನ್-ಚಂಪೈ ಸೊರೇನ್ 
ದೇಶ

ಜಾರ್ಖಂಡ್‌ ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆದ್ದ ಸಿಎಂ ಚಂಪೈ ಸೋರೆನ್

ಜಾರ್ಖಂಡ್‌ನಲ್ಲಿ ಜೆಎಂಎಂ ನೇತೃತ್ವದ ಸಮ್ಮಿಶ್ರ ಸರ್ಕಾರ ಸೋಮವಾರ ವಿಶ್ವಾಸ ಮತ ಗೆದ್ದಿದ್ದು, ಮುಖ್ಯಮಂತ್ರಿ ಚಂಪೈ ಸೋರೆನ್ ಅವರು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದ್ದಾರೆ.

ರಾಂಚಿ: ಜಾರ್ಖಂಡ್‌ನಲ್ಲಿ ಜೆಎಂಎಂ ನೇತೃತ್ವದ ಸಮ್ಮಿಶ್ರ ಸರ್ಕಾರ ಸೋಮವಾರ ವಿಶ್ವಾಸ ಮತ ಗೆದ್ದಿದ್ದು, ಮುಖ್ಯಮಂತ್ರಿ ಚಂಪೈ ಸೋರೆನ್ ಅವರು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದ್ದಾರೆ.

ಇಂದು ವಿಶೇಷ ಅಧಿವೇಶನದಲ್ಲಿ ಸಿಎಂ ಚಂಪೈ ಸೋರೆನ್ ಅವರು ವಿಶ್ವಾಸ ಮತಯಾಚಿಸಿದರು. ಜೆಎಂಎಂ, ಕಾಂಗ್ರೆಸ್ ಮತ್ತು ಆರ್‌ಜೆಡಿ ಮೈತ್ರಿಕೂಟ 47 ಶಾಸಕರು ಕೈ ಎತ್ತುವ ಮೂಲಕ ಚಂಪೈ ಸರ್ಕಾರಕ್ಕೆ ಬಂಬಲ ನೀಡಿದರು. 29 ಶಾಸಕರು ವಿಶ್ವಾಸಮತದ ವಿರುದ್ಧವಾಗಿ ಕೈ ಎತ್ತಿದರು.
 
ಇದಕ್ಕು ಮುನ್ನ ವಿಧಾನಸಭೆಯಲ್ಲಿ ಮಾತನಾಡಿದ ಬಂಧನಕ್ಕೊಳಗಾಗಿರುವ ಮಾಜಿ ಸಿಎಂ ಹೇಮಂತ್ ಸೋರೆನ್ ತಮ್ಮ ಬಂಧನಕ್ಕೆ ಬಿಜೆಪಿ ಕಾರಣ ಎಂದು ದೂಷಿಸಿದರು. 

ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೇಮಂತ್ ಸೋರೆನ್ ಅವರನ್ನು ಜನವರಿ 31 ರಂದು ಜಾರಿ ನಿರ್ದೇಶನಾಲಯ ಬಂಧಿಸಿದ್ದು, ಈಗ ಇಡಿ ಕಸ್ಟಡಿಯಲ್ಲಿದ್ದಾರೆ. ವಿಶ್ವಾಸ ಮತಕ್ಕಾಗಿ ವಿಧಾನಸಭೆಯಲ್ಲಿ ಹಾಜರಾಗಲು ಇಡಿ ಮಾಜಿ ಸಿಎಂ ಅವಕಾಶ ನೀಡಿದೆ.

ಕಳೆದ ಸಂಜೆ, ಆಡಳಿತಾರೂಢ ಜೆಎಂಎಂ ನೇತೃತ್ವದ ಮೈತ್ರಿಕೂಟದ ಶಾಸಕರು ಹೈದರಾಬಾದ್ ನಿಂದ ಆಗಮಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT