ಚಂಡೀಗಢ ಮೇಯರ್‌ ಚುನಾವಣೆ 
ದೇಶ

'ಪ್ರಜಾಪ್ರಭುತ್ವದ ಕಗ್ಗೊಲೆಗೆ ಅವಕಾಶ ನೀಡುವುದಿಲ್ಲ': ಚಂಡೀಗಢ ಮೇಯರ್ ಚುನಾವಣೆ ಕುರಿತು 'ಸುಪ್ರೀಂ' ಆಕ್ರೋಶ

ಚಂಡೀಗಢ ಮೇಯರ್ ಚುನಾವಣೆ ಪ್ರಕ್ರಿಯೆ ಕುರಿತು ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, 'ಪ್ರಜಾಪ್ರಭುತ್ವದ ಕಗ್ಗೊಲೆಗೆ ಅವಕಾಶ ನೀಡುವುದಿಲ್ಲ ಎಂದು ಕಿಡಿಕಾರಿದೆ.

ನವದೆಹಲಿ: ಚಂಡೀಗಢ ಮೇಯರ್ ಚುನಾವಣೆ ಪ್ರಕ್ರಿಯೆ ಕುರಿತು ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, 'ಪ್ರಜಾಪ್ರಭುತ್ವದ ಕಗ್ಗೊಲೆಗೆ ಅವಕಾಶ ನೀಡುವುದಿಲ್ಲ ಎಂದು ಕಿಡಿಕಾರಿದೆ.

ಚಂಡೀಗಢ ಮೇಯರ್ ಚುನಾವಣೆಗೆ ಸಂಬಂಧಿಸಿದ ವೀಡಿಯೋಗ್ರಫಿ ಸೇರಿದಂತೆ ಎಲ್ಲಾ ಮತಪತ್ರಗಳು ಮತ್ತು ಇತರ ಮೂಲ ದಾಖಲೆಗಳನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ರಿಜಿಸ್ಟ್ರಾರ್‌ಗೆ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ.

ಮೇಯರ್ ಚುನಾವಣೆಯ ರಿಟರ್ನಿಂಗ್ ಆಫೀಸರ್ ಮತಪತ್ರಗಳನ್ನು ತಿದ್ದುವ ಅಥವಾ ವಿರೂಪಗೊಳಿಸುವ ಮೂಲಕ ಪ್ರಜಾಪ್ರಭುತ್ವವನ್ನು ಕೊಲೆ ಮಾಡುತ್ತಿದ್ದಾರೆಯೇ? ಪ್ರಜಾಪ್ರಭುತ್ವವನ್ನು ಈ ರೀತಿ ಕೊಲೆ ಮಾಡಲು ನಾವು ಅನುಮತಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಕಿಡಿಕಾರಿದೆ. ಚಂಡೀಘಡ ಮೇಯರ್ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಮನೋಜ್ ಸೋಂಕರ್ ವಿರುದ್ಧ ಸೋತಿದ್ದ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ಕುಲದೀಪ್ ಧಲೋರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ನೋಟಿಸ್ ಜಾರಿ ಮಾಡುವಾಗ ಈ ರೀತಿ ಹೇಳಿದೆ.

ಅಲ್ಲದೆ ಫೆಬ್ರವರಿ 7 ರಂದು ನಿಗದಿಯಾಗಿದ್ದ ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಸಭೆಯನ್ನು ಮುಂದೂಡಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಇಂದಿನ ವಿಚಾರಣೆ ವೇಳೆ ಚುನಾವಣಾಧಿಕಾರಿ ಅನಿಲ್‌ ಮಸಿಹ್‌ ವಿರುದ್ಧ ಸುಪ್ರೀಂ ಕೋರ್ಟ್‌ ಕಿಡಿಕಾರಿದೆಯಲ್ಲದೆ ಅವರು ಮತ ಪತ್ರಗಳಲ್ಲಿ ಗೀಚಿದ್ದಾರೆಂದು ತಿಳಿಯುತ್ತದೆ ಎಂದು ಹೇಳಿದೆ. “ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅವರೇಕೆ ಕ್ಯಾಮೆರಾ ನೋಡುತ್ತಿದ್ದರು? ಸಾಲಿಸಿಟರ್‌ ಅವರೇ ಇದು ಪ್ರಜಾಪ್ರಭುತ್ವದ ಅಪಹಾಸ್ಯ, ಕಗ್ಗೊಲೆ,” ಎಂದು ಸಿಜೆಐ ಹೇಳಿದರು. 

ಚಂಡೀಗಢ ಮೇಯರ್‌ ಚುನಾವಣೆಯಲ್ಲಿ ಎಂಟು ಮತಗಳನ್ನು ಚುನಾವಣಾಧಿಕಾರಿ ಅಮಾನ್ಯಗೊಳಿಸಿದ ನಂತರ ಬಿಜೆಪಿಗೆ 16 ಮತಗಳು ಹಾಗೂ ಆಪ್‌, ಕಾಂಗ್ರೆಸ್‌ ಮೈತ್ರಿಕೂಟಕ್ಕೆ 12 ಮತಗಳು ದೊರೆತು ಬಿಜೆಪಿಯ ಮನೋಜ್‌ ಸೋಂಕರ್‌ ಅವರನ್ನು ಮೇಯರ್‌ ಆಗಿ ಆಯ್ಕೆಗೊಳಿಸಿದ್ದು ಭಾರೀ ವಿವಾದಕ್ಕೀಡಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?