ಅಜಿತ್ ಪವಾರ್-ಶರದ್ ಪವಾರ್ 
ದೇಶ

ಅಜಿತ್ ಪವಾರ್ ಬಣಕ್ಕೆ ಎನ್‌ಸಿಪಿ ಹೆಸರು ಮತ್ತು ಚಿಹ್ನೆ: ಶರದ್ ಪವಾರ್ ಗೆ ತೀವ್ರ ಹಿನ್ನಡೆ!

ಮಹಾರಾಷ್ಟ್ರದ ರಾಜಕೀಯದಲ್ಲಿ ದೊಡ್ಡ ಸಂಚಲನ ಉಂಟಾಗಿದ್ದು, ಚುನಾವಣಾ ಆಯೋಗವು ಅಜಿತ್ ಅವರ ಬಣ ನಿಜವಾದ ಎನ್‌ಸಿಪಿ ಎಂದು ಘೋಷಿಸಿದೆ.

ನವದೆಹಲಿ: ಮಹಾರಾಷ್ಟ್ರದ ರಾಜಕೀಯದಲ್ಲಿ ದೊಡ್ಡ ಸಂಚಲನ ಉಂಟಾಗಿದ್ದು, ಚುನಾವಣಾ ಆಯೋಗವು ಅಜಿತ್ ಅವರ ಬಣ ನಿಜವಾದ ಎನ್‌ಸಿಪಿ ಎಂದು ಘೋಷಿಸಿದೆ. 

ಚುನಾವಣಾ ಆಯೋಗದೊಂದಿಗೆ ಈ ಹೋರಾಟ ಬಹಳ ದಿನಗಳಿಂದ ನಡೆಯುತ್ತಿದ್ದು, ಶರದ್ ಪವಾರ್ ಅವರ ಕಡೆಯವರು ಕೂಡ ವಾದ ಮಂಡಿಸಿದ್ದರು. ಆದರೆ ಇದೀಗ ಅಲ್ಲಿಂದ ಅಜಿತ್ ಬಣಕ್ಕೆ ಜಯ ಸಿಕ್ಕಿದ್ದು ನಿಜವಾದ ಎನ್‌ಸಿಪಿ ಎಂದರೆ ಅಜಿತ್ ಬಣ ಎಂದು ಒತ್ತಿ ಹೇಳಿದೆ.

ಕಳೆದ ವರ್ಷವೇ, ಅಜಿತ್ ಬಣ ಬಂಡಾಯವೆದ್ದು ಎನ್‌ಸಿಪಿಯನ್ನು ಎರಡು ತುಂಡು ಮಾಡಿತ್ತು. ಅನೇಕ ಶಾಸಕರ ಜೊತೆಗೂಡಿ ಶಿಂಧೆ ಸರ್ಕಾರವನ್ನು ಬೆಂಬಲಿಸಿದರು. ಈ ಕಾರಣಕ್ಕೆ ಅಜಿತ್ ಉಪ ಮುಖ್ಯಮಂತ್ರಿಯೂ ಆದರು. ಆಗ ಅಜಿತ್ ಅವರು ನಿಜವಾದ ಎನ್‌ಸಿಪಿ ಎಂದು ಹೇಳಿಕೊಂಡಿದ್ದರು. ಇದರ ಹಿಂದಿನ ತರ್ಕವೆಂದರೆ ತಮಗೆ ಸಾಕಷ್ಟು ಶಾಸಕರ ಬೆಂಬಲವಿದೆ ಎಂದು ವಾದಿಸಿದ್ದರು. ಅದೇ ಸಮಯದಲ್ಲಿ, ಶರದ್ ಪವಾರ್ ಕೂಡ ತಮ್ಮ ಹಕ್ಕು ಮಂಡಿಸಿದ್ದರು. ಶರದ್ ಅಜಿತ್ ಅನ್ನು ಹೊರಹಾಕುವ ಕೆಲಸವನ್ನು ಮಾಡಿದ್ದಾರೆ.

ಆದರೆ ಇದೀಗ ಚುನಾವಣಾ ಆಯೋಗವು ಅಖಾಡದಲ್ಲಿನ ಎಲ್ಲಾ ಸಮೀಕರಣಗಳನ್ನು ಬದಲಾಯಿಸಿದೆ. ಇಸಿ ಅಜಿತ್ ಬಣಕ್ಕೆ ದೊಡ್ಡ ರಿಲೀಫ್ ನೀಡಿದ್ದು, ಅವರನ್ನು ನಿಜವಾದ ಎನ್‌ಸಿಪಿ ಎಂದು ಘೋಷಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT