ಕೇಂದ್ರ ಸಚಿವೆ ಅತಿಶಿ 
ದೇಶ

ಇಡಿ ದಾಳಿ ಮೂಲಕ ಎಎಪಿ ನಾಯಕರನ್ನು ಹೆದರಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪ್ರಯತ್ನ- ಅತಿಶಿ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಇಡಿ ದಾಳಿ ನಡೆಸುವ ಮೂಲಕ ಎಎಪಿ ಪಕ್ಷವನ್ನು ಹೆದರಿಸಲು ಮತ್ತು ಮೌನಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆಮ್ ಆದ್ಮಿ ಸರ್ಕಾರದ ಸಚಿವೆ ಅತಿಶಿ ಮಂಗಳವಾರ ಹೇಳಿದ್ದಾರೆ.

ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಇಡಿ ದಾಳಿ ನಡೆಸುವ ಮೂಲಕ ಎಎಪಿ ಪಕ್ಷವನ್ನು ಹೆದರಿಸಲು ಮತ್ತು ಮೌನಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆಮ್ ಆದ್ಮಿ ಸರ್ಕಾರದ ಸಚಿವೆ ಅತಿಶಿ ಮಂಗಳವಾರ ಹೇಳಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದ ಭಾಗವಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಮತ್ತು ಎಎಪಿ ರಾಜ್ಯಸಭಾ ಸಂಸದ ಮತ್ತು ಪಕ್ಷದ ಖಜಾಂಚಿ ಎನ್‌ಡಿ ಗುಪ್ತಾ ಅವರ ನಿವಾಸದಲ್ಲಿ ಇಡಿ ಶೋಧ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಬೆಳಿಗ್ಗೆ 7 ಗಂಟೆಯಿಂದ ಕುಮಾರ್ ಮತ್ತು ಗುಪ್ತಾ ಅವರ ನಿವಾಸದಲ್ಲಿ ಇಡಿ ದಾಳಿ ನಡೆಸುತ್ತಿದೆ. ಇತರ ಎಎಪಿ ನಾಯಕರ ಮನೆಗಳ ಮೇಲೆ ದಿನವಿಡೀ ಹೆಚ್ಚಿನ ದಾಳಿ ನಡೆಯಲಿದೆ ಎಂದು ಅತಿಶಿ ಹೇಳಿದ್ದಾರೆ. ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳು ಮತ್ತು ಆರೋಪಿಗಳ ಹೇಳಿಕೆಗಳನ್ನು ತನಿಖಾ ಸಂಸ್ಥೆ ಬಲವಂತ ಮತ್ತು ಬೆದರಿಕೆಯ ಮೂಲಕ ಹೊರತೆಗೆಯಲಾಗಿದೆ ಎಂದು ಸಚಿವರು ಆರೋಪಿಸಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರವು ತನ್ನ ನಾಯಕರ ಮೇಲೆ ದಾಳಿ ನಡೆಸುವ ಮೂಲಕ ಎಎಪಿಯನ್ನು "ಹೆದರಿಸಲು ಮತ್ತು ಮೌನಗೊಳಿಸಲು ಇಡಿ ಬಳಸಲಾಗುತ್ತಿದೆ. ಎರಡು ವರ್ಷಗಳ ತನಿಖೆಯ ಹೊರತಾಗಿಯೂ ಅಬಕಾರಿ ನೀತಿ ಹಗರಣದ ತನಿಖೆಯಲ್ಲಿ ಏಜೆನ್ಸಿಗಳಿಗೆ ಏನೂ ದೊರೆತಿಲ್ಲ ಎಂದು ಅವರು ಹೇಳಿದರು.

ಇಡಿ ದಾಳಿಯ ಭಾಗವಾಗಿ ರಾಷ್ಟ್ರ ರಾಜಧಾನಿಯ ಸುಮಾರು 10 ಕಡೆಗಳಲ್ಲಿ ಇಡಿ ದಾಳಿ ನಡೆಸುತ್ತಿದೆ.ಇದು ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವೇ ಅಥವಾ ಹೊಸ ಪ್ರಕರಣಕ್ಕೆ ಸಂಬಂಧಿಸಿದ್ದಾಗಿದೆಯೇ ಎಂಬುದು ತಕ್ಷಣ ತಿಳಿದುಬಂದಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT