ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ 
ದೇಶ

ಫೆಬ್ರವರಿ 10ರವರೆಗೆ ಬಜೆಟ್ ಅಧಿವೇಶನ ವಿಸ್ತರಣೆ, ಭಾರತದ ಆರ್ಥಿಕ ಸ್ಥಿತಿ ಕುರಿತು ಶ್ವೇತಪತ್ರ: ಕೇಂದ್ರ ಸರ್ಕಾರ

ಹಾಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನವನ್ನು ಶನಿವಾರದವರೆಗೆ ವಿಸ್ತರಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ನವದೆಹಲಿ: ಹಾಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನವನ್ನು ಶನಿವಾರದವರೆಗೆ ವಿಸ್ತರಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಕುರಿತು ಲೋಕಸಭೆಯಲ್ಲಿ ಮಾಹಿತಿ ನೀಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಹಾಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನವನ್ನು  ಒಂದು ದಿನ ಹೆಚ್ಚುವರಿಯಾಗಿ ಅಂದರೆ ಶನಿವಾರದವರೆಗೂ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಜನವರಿ 31 ರಂದು ಆರಂಭವಾದ ಅಧಿವೇಶನವು ಫೆಬ್ರುವರಿ 9 ರಂದು ಕೊನೆಗೊಳ್ಳಬೇಕಿತ್ತು. ಆದರೆ ಇದೀಗ ಕೇಂದ್ರ ಸರ್ಕಾರ ಒಂದು ದಿನ ವಿಸ್ತರಣೆ ಮಾಡಿದೆ.

ಅಂತೆಯೇ 2014ರ ಮೊದಲು ಮತ್ತು ನಂತರದ ಭಾರತೀಯ ಆರ್ಥಿಕತೆಯ ಸ್ಥಿತಿಯನ್ನು ಹೋಲಿಸಿ 'ಶ್ವೇತಪತ್ರ'ವನ್ನು ಮಂಡಿಸಲು ಸರ್ಕಾರ ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.

ಮಧ್ಯಂತರ ಬಜೆಟ್ ಭಾಷಣದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2014 ರ ಮೊದಲು ಮತ್ತು ನಂತರದ ಭಾರತದ ಆರ್ಥಿಕ ಸ್ಥಿತಿಯನ್ನು ಹೋಲಿಸಿ ಕೇಂದ್ರ ಸರ್ಕಾರವು 'ಶ್ವೇತಪತ್ರ' ಬಿಡುಗಡೆ ಮಾಡಲಿದೆ ಎಂದು ಹೇಳಿದ್ದರು.

"ಆ ವರ್ಷಗಳ ಬಿಕ್ಕಟ್ಟನ್ನು ನಿವಾರಿಸಲಾಗಿದೆ, ಮತ್ತು ಆರ್ಥಿಕತೆಯು ಸರ್ವತೋಮುಖ ಅಭಿವೃದ್ಧಿಯೊಂದಿಗೆ ಹೆಚ್ಚಿನ ಸಮರ್ಥನೀಯ ಬೆಳವಣಿಗೆಯ ಹಾದಿಯಲ್ಲಿ ದೃಢವಾಗಿ ಇರಿಸಲ್ಪಟ್ಟಿದೆ. 2014ರ ವರೆಗೆ ನಾವು ಎಲ್ಲಿದ್ದೆವು ಮತ್ತು ಈಗ ಎಲ್ಲಿದ್ದೇವೆ ಎಂದು ನೋಡುವುದು ಈಗ ಸೂಕ್ತವಾಗಿದ್ದು, ಆ ವರ್ಷಗಳ ದುರಾಡಳಿತದಿಂದ ಪಾಠ ಕಲಿಯುವ ಉದ್ದೇಶದಿಂದ ಮಾತ್ರ ಸರ್ಕಾರವು ಸದನದ ಮೇಜಿನ ಮೇಲೆ ಶ್ವೇತಪತ್ರವನ್ನು ತರುತ್ತಿದೆ ಎಂದು ಕೇಂದ್ರ ವಿತ್ತ ಹಣಕಾಸು ಸಚಿವರು ಫೆಬ್ರವರಿ 1 ರಂದು ತಮ್ಮ ಭಾಷಣದಲ್ಲಿ ಹೇಳಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT