ಡಿಎಂಕೆ ನಾಯಕ ಟಿಆರ್ ಬಾಲು 
ದೇಶ

ಕೇಂದ್ರ ಸಚಿವ ಮುರುಗನ್ ವಿರುದ್ಧ ಡಿಎಂಕೆ ನಾಯಕನ ಹೇಳಿಕೆ: ಲೋಕಸಭೆಯಲ್ಲಿ ಗದ್ದಲ

ಡಿಎಂಕೆ ನಾಯಕ ಟಿಆರ್ ಬಾಲು ಕೇಂದ್ರ ಸಚಿವ ಎಲ್ ಮುರುಗನ್ ವಿರುದ್ಧ ನೀಡಿದ್ದ ಹೇಳಿಕೆ ಲೋಕಸಭೆಯಲ್ಲಿ ಇಂದು ಗದ್ದಲಕ್ಕೆ ಕಾರಣವಾಯಿತು. 

ನವದೆಹಲಿ: ಡಿಎಂಕೆ ನಾಯಕ ಟಿಆರ್ ಬಾಲು ಕೇಂದ್ರ ಸಚಿವ ಎಲ್ ಮುರುಗನ್ ವಿರುದ್ಧ ನೀಡಿದ್ದ ಹೇಳಿಕೆ ಲೋಕಸಭೆಯಲ್ಲಿ ಇಂದು ಗದ್ದಲಕ್ಕೆ ಕಾರಣವಾಯಿತು. ಆಡಳಿತ ಪಕ್ಷ ಬಿಜೆಪಿ ದಲಿತ ನಾಯಕನನ್ನು ಅವಮಾನಿಸಿದ್ದಕ್ಕೆ ಕ್ಷಮೆ ಕೋರುವಂತೆ ಡಿಎಂಕೆ ನಾಯಕನನ್ನು ಒತ್ತಾಯಿಸಿದೆ.
 
ಬೇಡಿಕೆಗೆ ಡಿಎಂಕೆ ನಾಯಕ ಬಾಲು ಒಪ್ಪದ ಪರಿಣಾಮ ಸ್ಪೀಕರ್ ಓಂ ಬಿರ್ಲಾ ಡಿಎಂಕೆ ನಾಯಕ ಪ್ರಯೋಗಿಸಿದ್ದ ಶಬ್ದವನ್ನು ದಾಖಲೆಗಳಿಂದ ತೆಗೆದುಹಾಕಿದರು. ಈ ಬೆನ್ನಲ್ಲೇ ಡಿಎಂಕೆ, ಕಾಂಗ್ರೆಸ್ ಮತ್ತು ಎಡ ಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡಿ ಹೊರನಡೆದರು. 

ಸದನದ ಪ್ರಶ್ನೋತ್ತರ ವೇಳೆಯಲ್ಲಿ ತಮಿಳುನಾಡಿಗೆ ಪ್ರವಾಹ ಪರಿಹಾರಕ್ಕೆ ಸಂಬಂಧಿಸಿದ ಪ್ರಶ್ನೆಯೊಂದರ ಕುರಿತು ಚರ್ಚೆ ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ.ಅವರ ಪಕ್ಷದ ಇಬ್ಬರು ಸಹೋದ್ಯೋಗಿಗಳು ಈ ವಿಷಯದ ಬಗ್ಗೆ ಪ್ರಶ್ನೆಗಳನ್ನು ಕೇಳಿದ ನಂತರ, ಬಾಲು ಅವರು ಪೂರಕ ಪ್ರಶ್ನೆ ಕೇಳಿದರು. ಆ ಸಮಯದಲ್ಲಿ, ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಖಾತೆ ರಾಜ್ಯ ಸಚಿವ ಮುರುಗನ್, ಡಿಎಂಕೆ ನಾಯಕ "ಅಪ್ರಸ್ತುತ" ಪ್ರಶ್ನೆಯನ್ನು ಕೇಳುತ್ತಿದ್ದಾರೆ ಎಂದು ಹೇಳಿದರು.

ಈ ವೇಳೆ ಬಾಲು ಮುರುಗನ್ ವಿರುದ್ಧ ವಾಗ್ದಾಳಿ ನಡೆಸಿದರು. ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಅವರ ಉಪ ಅರ್ಜುನ್ ರಾಮ್ ಮೇಘವಾಲ್, ಹಲವಾರು ಸಚಿವರು ಮತ್ತು ಬಿಜೆಪಿ ಸಂಸದರು ಬಾಲು ಅವರ ಹೇಳಿಕೆಯನ್ನು ವಿರೋಧಿಸಿ ಪ್ರತಿಭಟನೆಗೆ ಮುಂದಾದರು.

ಮುರುಗನ್ ಒಬ್ಬ ದಲಿತ ಮತ್ತು ಅವರ ವಿರುದ್ಧ ಈ ಹೇಳಿಕೆಯು ಇಡೀ ದಲಿತ ಸಮುದಾಯಕ್ಕೆ "ಅವಮಾನ" ಎಂದು ಹೇಳಿರುವ ಬಿಜೆಪಿ ಹಾಗೂ ಮಿತ್ರಪಕ್ಷಗಳು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಆದರೆ, ಬಾಲು ಮಾತನ್ನು ಪುನರುಚ್ಚರಿಸಿದರು. ಈ ವೇಳೆ ಆಡಳಿತ ಪಕ್ಷದ ಸದಸ್ಯರು ಮತ್ತೆ ಪ್ರತಿಭಟನೆ ನಡೆಸಿ ಕ್ಷಮೆ ಕೋರಲು ಒತ್ತಾಯಿಸಿದರು. ಶೀಘ್ರದಲ್ಲೇ, ಸ್ಪೀಕರ್ ಹೇಳಿಕೆಯನ್ನು ದಾಖಲೆಗಳಿಂದ ಹೊರಗಿಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಮಾನ ಭಾರತದ ಕಲ್ಪನೆ RSS ಕಂಗೆಡಿಸಿದೆ': ಲೋಕಸಭೆಯಲ್ಲಿ ರಾಹುಲ್ ಗಾಂಧಿ ಟೀಕೆ

'ವಂದೇ ಮಾತರಂ'ನ ಮೊದಲ ಎರಡು ಚರಣ ಬಳಸುವ ನಿರ್ಧಾರ ನೆಹರೂ ಒಬ್ಬರದ್ದೇ ಅಲ್ಲ: ಖರ್ಗೆ

'ಸುಪ್ರೀಂ' ನಿವೃತ್ತ ನ್ಯಾಯಮೂರ್ತಿ ಬಿಆರ್ ಗವಾಯಿ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್‌ಗೆ ಚಪ್ಪಲಿ ಏಟು, Video!

ಬ್ಲಾಕ್‌ ಸೋಲ್ಜರ್‌ ಫ್ಲೈ ಬಳಸಿ ಕಸದಿಂದ ಗೊಬ್ಬರ: ರೌಂಡ್‌ ರಾಬಿನ್‌ ಪದ್ದತಿ ರದ್ದು; ಹಳೇ ಮಾದರಿಯಲ್ಲಿ ಇ-ಖಾತೆ ಅರ್ಜಿ ವಿಲೇವಾರಿ- ಡಿಕೆ ಶಿವಕುಮಾರ್

ರಿಯಲ್ ಲೈಫ್ ಹೀರೋ: ಭಿಕ್ಷೆ ಬೇಡುತ್ತಿದ್ದ ಯುವತಿಯ ರಕ್ಷಿಸಿ ಮದುವೆಯಾದ Golu Yadav!

SCROLL FOR NEXT