ಸಾಂದರ್ಭಿಕ ಚಿತ್ರ 
ದೇಶ

ಗೋವಾ: ಗೋಬಿ ಮಂಚೂರಿ ಮಾರಾಟ ನಿಷೇಧ; ನಿಯಮ ಉಲ್ಲಂಘಿಸಿದರೆ ಲೈಸೆನ್ಸ್ ರದ್ದು!

ನಗರದ ಯಾವುದೇ ಹೋಟೆಲ್‌– ಅಂಗಡಿ, ತಳ್ಳುಗಾಡಿಗಳಲ್ಲಿ ಗೋಬಿ ಮಂಚೂರಿಯನ್ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಪಣಜಿ: ಗೋಬಿ ಮಂಚೂರಿ ಯಾರಿಗೆ ಇಷ್ಟ ಇಲ್ಲ ಹೇಳಿ. ಮಕ್ಕಳಿಂದ- ವಯೋವೃದ್ದರವರೆಗೆ ಮಂಚೂರಿ ಎಲ್ಲರಿಗೂ ಫೇವರಿಟ್, ಆದರೆ ಅದನ್ನು ಹೆಚ್ಚೆಚ್ಚು ತಿಂದರೆ ಅಪಾಯ ಕಟ್ಟಿಟ್ಟ ಬುತ್ತಿ, ಹೀಗಾಗಿ ಉತ್ತರ ಗೋವಾದ ಮಾಪುಸಾ ನಗರದಲ್ಲಿ ಫಾಸ್ಟ್‌ಫುಡ್‌ ಗೋಬಿ ಮಂಚೂರಿಯನ್ ಮಾರಾಟವನ್ನು ನಿಷೇಧಿಸಿ ಸ್ಥಳೀಯ ನಗರ ಪಾಲಿಕೆ ಆದೇಶ ಹೊರಡಿಸಿದೆ.

ನಗರದ ಯಾವುದೇ ಹೋಟೆಲ್‌– ಅಂಗಡಿ, ತಳ್ಳುಗಾಡಿಗಳಲ್ಲಿ ಗೋಬಿ ಮಂಚೂರಿಯನ್ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ನಗರದಲ್ಲಿ ಪ್ರಸಿದ್ಧ ಬೋಗಡೇಶ್ವರ್ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರ ಪಾಲಿಕೆಯ ಕೆಲ ಸದಸ್ಯರು ಗೋಬಿ ಮಂಚೂರಿಯನ್ ಮಾರಾಟ ಮಾಡುವುದನ್ನು ನಿಷೇಧಿಸಬೇಕು ಎಂದು ಮನವಿ ಸಲ್ಲಿಸಿದ್ದರು.

ಗೋಬಿ ಮಂಚೂರಿಯನ್ ಪದಾರ್ಥಕ್ಕೆ ವ್ಯಾಪಕ ರಾಸಾಯನಿಕ ಬೆರೆಸುವುದು, ಸ್ವಚ್ಛತೆ ಕಾಪಾಡದೇ ಕಂಡ ಕಂಡಲ್ಲಿ ಮಾರಾಟ ಮಾಡುತ್ತಿದ್ದಾರೆ. ಇದರಿಂದ ತಿನ್ನುವವರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು ಅದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಂಗ್ಲ ನಿಯತಕಾಲಿಕವೊಂದು ವರದಿ ಮಾಡಿದೆ.

ನಾಲಿಗೆಗೆ ರುಚಿಯನ್ನು ನೀಡುವ ಗೋಬಿ ಆರೋಗ್ಯಕ್ಕೆ ಎಷ್ಟು ಕೆಟ್ಟ ಪರಿಣಾಮವನ್ನು ಬೀರುತ್ತದೆ ಎಂಬದನ್ನು ತಿಳಿದು ಈ ನಿಷೇಧದ ತೀರ್ಮಾನಕ್ಕೆ ಸರ್ಕಾರ ಬಂದಿದೆ. ಗೋಬಿ ತಯಾರಿಕೆಯಲ್ಲಿ ಬಳಸುವ ರುಚಿಕಾರಕ, ಕೃತಕ ಬಣ್ಣ, ಕಡಿಮೆ ಬೆಲೆಯ ಸಾಸ್​​ ಆರೋಗ್ಯದ ಮೇಲೆ ಗಂಭೀರ ಪರಿಣಾಮವನ್ನು ಬೀರುವ ಪರಿಣಾಮ ಹಾಗೂ ಶುಚಿತ್ವ, ನೈರ್ಮಲ್ಯದ ಬಗ್ಗೆ ಹಲವು ದೂರುಗಳು ಆಧಾರದ ಮೇಲೆ ಗೋಬಿ ಮಂಚೂರಿಯನ್ ಮಾರಾಟ ನಿಷೇಧಿಸಲಾಗಿದೆ ಎಂದು ಆಹಾರ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT