ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ 
ದೇಶ

ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ

ಎಲ್ಲಾ ನಾಗರಿಕರಿಗೆ ಏಕರೂಪದ ಮದುವೆ, ವಿಚ್ಛೇದನ, ಭೂಮಿ, ಆಸ್ತಿ ಮತ್ತು ಉತ್ತರಾಧಿಕಾರ ಕಾನೂನುಗಳನ್ನು ಪ್ರಸ್ತಾಪಿಸುವ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಮಸೂದೆಯನ್ನು ಮಂಗಳವಾರ ಉತ್ತರಾಖಂಡ ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಡೆಹ್ರಾಡೂನ್: ಎಲ್ಲಾ ನಾಗರಿಕರಿಗೆ ಏಕರೂಪದ ಮದುವೆ, ವಿಚ್ಛೇದನ, ಭೂಮಿ, ಆಸ್ತಿ ಮತ್ತು ಉತ್ತರಾಧಿಕಾರ ಕಾನೂನುಗಳನ್ನು ಪ್ರಸ್ತಾಪಿಸುವ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಮಸೂದೆಯನ್ನು ಮಂಗಳವಾರ ಉತ್ತರಾಖಂಡ ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಇಂದು ಸಂವಿಧಾನದ ಮೂಲ ಪ್ರತಿಯೊಂದಿಗೆ ವಿಧಾನಸಭೆ ಪ್ರವೇಶಿಸಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಏಕರೂಪ ನಾಗರಿಕ ಸಂಹಿತೆ ವಿಧೇಯಕವನ್ನು ಮಂಡಿಸಿದರು.

ಮಸೂದೆ ಅಂಗೀಕಾರಕ್ಕೂ ಮುನ್ನ ವಿಧಾನಸಭೆಯಲ್ಲಿ ಚರ್ಚೆಯಾಗಲಿದೆ. ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನವನ್ನು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯ ಅಂಗೀಕಾರಕ್ಕಾಗಿಯೇ ಕರೆಯಲಾಗಿದೆ.

ವಿಧಾನಸಭೆಯಲ್ಲಿ ಈ ಮಸೂದೆ ಅಂಗೀಕಾರವಾದರೆ ಉತ್ತರಾಖಂಡ ಯುಸಿಸಿಯನ್ನು ಅಳವಡಿಸಿಕೊಳ್ಳುವ ದೇಶದ ಮೊದಲ ರಾಜ್ಯವಾಗಲಿದೆ ಮತ್ತು ಗುಜರಾತ್ ಹಾಗೂ ಅಸ್ಸಾಂ ಸೇರಿದಂತೆ ದೇಶದ ಹಲವು ಬಿಜೆಪಿ ಆಡಳಿತದ ರಾಜ್ಯಗಳು ಉತ್ತರಾಖಂಡ ಯುಸಿಸಿಯನ್ನು ಮಾದರಿಯಾಗಿ ಅನುಸರಿಸಲು ಮುಂದಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT