ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ 
ದೇಶ

ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ

ಎಲ್ಲಾ ನಾಗರಿಕರಿಗೆ ಏಕರೂಪದ ಮದುವೆ, ವಿಚ್ಛೇದನ, ಭೂಮಿ, ಆಸ್ತಿ ಮತ್ತು ಉತ್ತರಾಧಿಕಾರ ಕಾನೂನುಗಳನ್ನು ಪ್ರಸ್ತಾಪಿಸುವ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಮಸೂದೆಯನ್ನು ಮಂಗಳವಾರ ಉತ್ತರಾಖಂಡ ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಡೆಹ್ರಾಡೂನ್: ಎಲ್ಲಾ ನಾಗರಿಕರಿಗೆ ಏಕರೂಪದ ಮದುವೆ, ವಿಚ್ಛೇದನ, ಭೂಮಿ, ಆಸ್ತಿ ಮತ್ತು ಉತ್ತರಾಧಿಕಾರ ಕಾನೂನುಗಳನ್ನು ಪ್ರಸ್ತಾಪಿಸುವ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಮಸೂದೆಯನ್ನು ಮಂಗಳವಾರ ಉತ್ತರಾಖಂಡ ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಇಂದು ಸಂವಿಧಾನದ ಮೂಲ ಪ್ರತಿಯೊಂದಿಗೆ ವಿಧಾನಸಭೆ ಪ್ರವೇಶಿಸಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಏಕರೂಪ ನಾಗರಿಕ ಸಂಹಿತೆ ವಿಧೇಯಕವನ್ನು ಮಂಡಿಸಿದರು.

ಮಸೂದೆ ಅಂಗೀಕಾರಕ್ಕೂ ಮುನ್ನ ವಿಧಾನಸಭೆಯಲ್ಲಿ ಚರ್ಚೆಯಾಗಲಿದೆ. ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನವನ್ನು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯ ಅಂಗೀಕಾರಕ್ಕಾಗಿಯೇ ಕರೆಯಲಾಗಿದೆ.

ವಿಧಾನಸಭೆಯಲ್ಲಿ ಈ ಮಸೂದೆ ಅಂಗೀಕಾರವಾದರೆ ಉತ್ತರಾಖಂಡ ಯುಸಿಸಿಯನ್ನು ಅಳವಡಿಸಿಕೊಳ್ಳುವ ದೇಶದ ಮೊದಲ ರಾಜ್ಯವಾಗಲಿದೆ ಮತ್ತು ಗುಜರಾತ್ ಹಾಗೂ ಅಸ್ಸಾಂ ಸೇರಿದಂತೆ ದೇಶದ ಹಲವು ಬಿಜೆಪಿ ಆಡಳಿತದ ರಾಜ್ಯಗಳು ಉತ್ತರಾಖಂಡ ಯುಸಿಸಿಯನ್ನು ಮಾದರಿಯಾಗಿ ಅನುಸರಿಸಲು ಮುಂದಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT