ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ 
ದೇಶ

ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ

ಎಲ್ಲಾ ನಾಗರಿಕರಿಗೆ ಏಕರೂಪದ ಮದುವೆ, ವಿಚ್ಛೇದನ, ಭೂಮಿ, ಆಸ್ತಿ ಮತ್ತು ಉತ್ತರಾಧಿಕಾರ ಕಾನೂನುಗಳನ್ನು ಪ್ರಸ್ತಾಪಿಸುವ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಮಸೂದೆಯನ್ನು ಮಂಗಳವಾರ ಉತ್ತರಾಖಂಡ ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಡೆಹ್ರಾಡೂನ್: ಎಲ್ಲಾ ನಾಗರಿಕರಿಗೆ ಏಕರೂಪದ ಮದುವೆ, ವಿಚ್ಛೇದನ, ಭೂಮಿ, ಆಸ್ತಿ ಮತ್ತು ಉತ್ತರಾಧಿಕಾರ ಕಾನೂನುಗಳನ್ನು ಪ್ರಸ್ತಾಪಿಸುವ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಮಸೂದೆಯನ್ನು ಮಂಗಳವಾರ ಉತ್ತರಾಖಂಡ ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಇಂದು ಸಂವಿಧಾನದ ಮೂಲ ಪ್ರತಿಯೊಂದಿಗೆ ವಿಧಾನಸಭೆ ಪ್ರವೇಶಿಸಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಏಕರೂಪ ನಾಗರಿಕ ಸಂಹಿತೆ ವಿಧೇಯಕವನ್ನು ಮಂಡಿಸಿದರು.

ಮಸೂದೆ ಅಂಗೀಕಾರಕ್ಕೂ ಮುನ್ನ ವಿಧಾನಸಭೆಯಲ್ಲಿ ಚರ್ಚೆಯಾಗಲಿದೆ. ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನವನ್ನು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯ ಅಂಗೀಕಾರಕ್ಕಾಗಿಯೇ ಕರೆಯಲಾಗಿದೆ.

ವಿಧಾನಸಭೆಯಲ್ಲಿ ಈ ಮಸೂದೆ ಅಂಗೀಕಾರವಾದರೆ ಉತ್ತರಾಖಂಡ ಯುಸಿಸಿಯನ್ನು ಅಳವಡಿಸಿಕೊಳ್ಳುವ ದೇಶದ ಮೊದಲ ರಾಜ್ಯವಾಗಲಿದೆ ಮತ್ತು ಗುಜರಾತ್ ಹಾಗೂ ಅಸ್ಸಾಂ ಸೇರಿದಂತೆ ದೇಶದ ಹಲವು ಬಿಜೆಪಿ ಆಡಳಿತದ ರಾಜ್ಯಗಳು ಉತ್ತರಾಖಂಡ ಯುಸಿಸಿಯನ್ನು ಮಾದರಿಯಾಗಿ ಅನುಸರಿಸಲು ಮುಂದಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ