ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ 
ದೇಶ

ಅನುದಾನದ ವಿಷಯ ಮುಂದಿಟ್ಟು ಕಾಂಗ್ರೆಸ್ ನಿಂದ ದೇಶ ವಿಭಜಿಸುವ ಯತ್ನ: ರಾಜ್ಯಸಭೆಯಲ್ಲಿ ಮೋದಿ ವಾಗ್ದಾಳಿ

ಅನುದಾನದ ವಿಷಯವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ದೇಶವನ್ನು ಉತ್ತರ-ದಕ್ಷಿಣವಾಗಿ ವಿಭಜಿಸುವ ಯತ್ನ ಮಾಡುತ್ತಿದೆ ಎಂದು ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.

ನವದೆಹಲಿ: ಅನುದಾನದ ವಿಷಯವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ದೇಶವನ್ನು ಉತ್ತರ-ದಕ್ಷಿಣವಾಗಿ ವಿಭಜಿಸುವ ಯತ್ನ ಮಾಡುತ್ತಿದೆ ಎಂದು ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.

ಸಂಸತ್ ನ ಬಜೆಟ್ ಅಧಿವೇಶನದ ರಾಜ್ಯಸಭೆ ಕಲಾಪದಲ್ಲಿ ಪ್ರಧಾನಿ ಮೋದಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ ಮಾತನಾಡಿದ್ದು, ಕಾಂಗ್ರೆಸ್ ದೇಶದ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಕಾಂಗ್ರೆಸ್ ನಾಯಕರು ತೆರಿಗೆ ಹಂಚಿಕೆ ಹಾಗೂ ಅನುದಾನದ ವಿಷಯವಾಗಿ ನನ್ನ ತೆರಿಗೆ ನನ್ನ ಹಣ ಎನ್ನುತ್ತಿದ್ದಾರೆ ಇದು ಯಾವ ಭಾಷೆ? ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ದೇಶವನ್ನು ಇಬ್ಭಾಗ ಮಾಡುವ ವಾತಾವರಣ ಸೃಷ್ಟಿಸುತ್ತಿದೆ. ಇಂತಹ ಹೇಳಿಕೆಗಳು ದೇಶಕ್ಕೆ ಅಪಾಯಕಾರಿಯಾಗಿದೆ ಎಂದು ಮೋದಿ ಎಚ್ಚರಿಕೆ ನೀಡಿದ್ದಾರೆ. 

ಕಾಂಗ್ರೆಸ್ ಪಕ್ಷ ದೇಶದ ಶತ್ರುಗಳಿಗೆ ಭೂಮಿಯನ್ನು ಬಿಟ್ಟುಕೊಟ್ಟಿತ್ತು. ಈಗ ಆಂತರಿಕ ಭದ್ರತೆ ಬಗ್ಗೆ ನಮಗೆ ಉಪದೇಶ ಮಾಡುತ್ತಿದೆ. ದೇಶ ಎದುರಿಸುತ್ತಿದ್ದ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ ಗೆ ಅರಿವು ಇತ್ತು. ಆದರೆ ಅದನ್ನು ಬಗೆಹರಿಸುವುದಕ್ಕೆ ಏನನ್ನೂ ಮಾಡಲಿಲ್ಲ ಎಂದು ಮೋದಿ ಆರೋಪಿಸಿದ್ದಾರೆ.  

ನಾನು ರಾಜ್ಯಸಭೆ, ಲೋಕಸಭೆಯಲ್ಲಿ ಅವರ ಮಾತು ಕೇಳಿದಾಗಲೆಲ್ಲಾ, ಕಾಂಗ್ರೆಸ್ ಹಾಗೂ ಅವರ ಚಿಂತನೆಗಳು ಅಪ್ರಸ್ತುತವಾಗಿದೆ ಎಂಬ ನನ್ನ ನಂಬಿಕೆ ಬಲಿಷ್ಠವಾಗುವುದು ಮುಂದುವರೆದಿದೆ. ಚಿಂತನೆಗಳು ಅಪ್ರಸ್ತುತವಾದಂತೆ ಅವರು ತಮ್ಮ ಕೆಲಸವನ್ನು ಹೊರಗುತ್ತಿಗೆ ನೀಡಿದ್ದಾರೆ. ಇಷ್ಟು ದೊಡ್ಡ ಪಕ್ಷ, ದೇಶವನ್ನು ದಶಕಗಳ ಕಾಲ ಆಳಿದ್ದ ಕಾಂಗ್ರೆಸ್ ಪಕ್ಷ ಇಂದು ಕುಸಿದಿದೆ. ಇದರಿಂದ ನಮಗೆ ಸಂತೋಷವಾಗಿಲ್ಲ. ನಮಗೆ ಕಾಂಗ್ರೆಸ್ ಬಗ್ಗೆ ಸಹಾನುಭೂತಿ ಇದೆ, ರೋಗಿಯೇ ಸುಧಾರಣೆ ಬಯಸದೇ ಇದ್ದಾಗ ವೈದ್ಯರೇನು ಮಾಡಲು ಸಾಧ್ಯ? ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 40 ಸ್ಥಾನಗಳಾದರೂ ಬರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಕಾಂಗ್ರೆಸ್ ಬಗ್ಗೆ ವ್ಯಂಗ್ಯವಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

ಬಿಹಾರದಲ್ಲಿ ರಾಜಕೀಯ ಬಿರುಗಾಳಿ: ಮುಖ್ಯಮಂತ್ರಿ ಸ್ಥಾನಕ್ಕೆ ನಿತಿಶ್ ಕುಮಾರ್ ರಾಜೀನಾಮೆ?

'ದೇಹದ ಮೇಲೆ ಕ್ಯಾಮೆರಾ Zoom': ಪಾಪರಾಜಿಗಳ ವಿರುದ್ಧ ಸಪ್ತಮಿಗೌಡ ಕಿಡಿ; Rukmini Vasanth ಬೆಂಬಲ!

ಇರಾನ್ ಹಡಗಿನ ಮೇಲೆ ದಾಳಿ; 101 ಜನ ನಾಪತ್ತೆ; ಅಮೆರಿಕದೊಂದಿಗೆ 'ಸಂಧಾನ ಇಲ್ಲ', ಯುದ್ಧ ಮುಂದುವರಿಯಲಿದೆ! Video

T20 ವಿಶ್ವಕಪ್ 2026: 'ಚಿಂತೆ ಬೇಡ.. ಭಾರತೀಯ ಅಭಿಮಾನಿಗಳ ಸೈಲೆಂಟ್ ಮಾಡುತ್ತೇವೆ'; Sam Curran ಅತ್ಯುತ್ಸಾಹ!

SCROLL FOR NEXT