ಪ್ರಧಾನಿ ಮೋದಿ 
ದೇಶ

ಮನಮೋಹನ್ ಸಿಂಗ್ ಗಾಲಿಕುರ್ಚಿಯಲ್ಲಿ ಬಂದು ಮತ ಚಲಾಯಿಸಿದ್ದು ನೆನಪಿದೆ: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಬಣ್ಣನೆ

ದೇಶಕ್ಕೆ ಡಾ.ಮನಮೋಹನ್ ಸಿಂಗ್ ಅವರ ಕೊಡುಗೆ ಅಪಾರವಾಗಿದ್ದು, ಅವರು ಗಾಲಿಕುರ್ಚಿಯಲ್ಲಿ ಬಂದು ಮತ ಚಲಾಯಿಸಿದ್ದು ನನಗೆ ನೆನಪಿದೆ ಎಂದು ಪ್ರಧಾನಿ ಮೋದಿಯವರು ಕೊಂಡಾಡಿದ್ದಾರೆ.

ನವದೆಹಲಿ: ದೇಶಕ್ಕೆ ಡಾ.ಮನಮೋಹನ್ ಸಿಂಗ್ ಅವರ ಕೊಡುಗೆ ಅಪಾರವಾಗಿದ್ದು, ಅವರು ಗಾಲಿಕುರ್ಚಿಯಲ್ಲಿ ಬಂದು ಮತ ಚಲಾಯಿಸಿದ್ದು ನನಗೆ ನೆನಪಿದೆ ಎಂದು ಪ್ರಧಾನಿ ಮೋದಿಯವರು ಕೊಂಡಾಡಿದ್ದಾರೆ.

ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ವೇಳೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಕಾಂಗ್ರೆಸ್‌ ಹಾಗೂ ಆ ಪಕ್ಷದ ನಾಯಕರನ್ನು ಟೀಕಿಸಿದ್ದ ಪ್ರಧಾನಿ ಮೋದಿಅವರು ಇಂದು ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಅವರನ್ನು ಕೊಂಡಾಡಿದರು.

ದೇಶಕ್ಕೆ ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಅವರು ನೀಡಿದ ಕೊಡುಗೆ ಅಪಾರವಾಗಿದೆ. ಅವರ ಕೊಡುಗೆಯನ್ನು ನಾವಿಂದು ಸ್ಮರಿಸಬೇಕಾಗಿದೆ” ಎಂದು ಹೇಳಿದರು.

ಡಾ.ಮನಮೋಹನ್‌ ಸಿಂಗ್‌ ಸೇರಿ ರಾಜ್ಯಸಭೆಯ ಹಲವು ಸದಸ್ಯರು ನಿವೃತ್ತರಾಗುತ್ತಿರುವ ಕಾರಣ, ಅವರಿಗೆ ಮೋದಿ ಅವರು ಭಾಷಣದ ಮೂಲಕ ಬೀಳ್ಕೊಡುಗೆ ನೀಡಿದರು.

ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಅವರು ಸುದೀರ್ಘವಾಗಿ ದೇಶಕ್ಕೆ, ಸದನಕ್ಕೆ ನೀಡಿದ ಕೊಡುಗೆ ಅಪಾರವಾದುದು. ಅವರ ಉಪಯುಕ್ತ ಮಾರ್ಗದರ್ಶನವು ದೇಶ, ಸದನವನ್ನು ಮುನ್ನಡೆಸಿದೆ. ಅವರನ್ನು ನಾವು ಎಂದಿಗೂ ಸ್ಮರಿಸೋಣ” ಎಂದು ತಿಳಿಸಿದರು.

ಸದನದಲ್ಲಿ ಯಾವುದೇ ನಾಯಕರ ಕೊಡುಗೆ ಚರ್ಚೆಯಾಗಲಿ. ಆಗೆಲ್ಲಾ ನಾವು ಡಾ.ಮನಮೋಹನ್‌ ಸಿಂಗ್‌ ಅವರ ಕೊಡುಗೆಯನ್ನು ಕೂಡ ಸ್ಮರಿಸಬೇಕು. ರಾಜ್ಯಸಭೆಯಲ್ಲಿರುವ ಸದಸ್ಯರು, ಮುಂದೆ ಆಗಮಿಸುವ ಸದಸ್ಯರು ಮನಮೋಹನ್‌ ಸಿಂಗ್‌ ಅವರ ಆದರ್ಶ, ಮಾರ್ಗದರ್ಶನವನ್ನು ಪಾಲಿಸಬೇಕು. ಇವರೆಲ್ಲರಿಗೂ ಮನಮೋಹನ್‌ ಸಿಂಗ್‌ ಅವರು ಮಾರ್ಗಸೂಚಿಯಾಗಿದ್ದಾರೆ ಎಂದರು.

ಕಳೆದ ಬಾರಿ ಮನಮೋಹನ್‌ ಸಿಂಗ್‌ ಅವರು ವ್ಹೀಲ್‌ಚೇರ್‌ನಲ್ಲಿ ರಾಜ್ಯಸಭೆಗೆ ಬಂದು ಮತದಾನ ಮಾಡಿದರು. ರಾಜ್ಯಸಭೆ ಸದಸ್ಯರಾಗಿ ಅವರು ಎಂತಹ ಬದ್ಧತೆ ಹೊಂದಿದ್ದರು ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ಹಾಗಾಗಿ, ಮನಮೋಹನ್‌ ಸಿಂಗ್‌ ಅವರು ಮಾದರಿ ಎನಿಸುತ್ತಾರೆ. ಒಬ್ಬ ಸಂಸದ ತನ್ನ ಜವಾಬ್ದಾರಿಗಳನ್ನು ಹೇಗೆ ನಿರ್ವಹಿಸಬೇಕು ಎಂಬುದಕ್ಕೆ ಅವರು ನಿದರ್ಶನ” ಎಂದು ಬಣ್ಣಿಸಿದರು.

ರಾಜ್ಯಸಭೆಯಿಂದ ಸುಮಾರು 56 ಸದಸ್ಯರು ನಿವೃತ್ತರಾಗುತ್ತಿದ್ದಾರೆ. ಹಾಗಾಗಿ, ಗುರುವಾರ ಸಂಜೆ ರಾಜ್ಯಸಭೆ ಸಭಾಪತಿ ಜಗದೀಪ್‌ ಧನಕರ್‌ ಅವರ ನಿವಾಸದಲ್ಲಿ ರಾಜ್ಯಸಭೆ ಸದಸ್ಯರಿಗೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿದೆ.

ಡಾ.ಮನಮೋಹನ್‌ ಸಿಂಗ್‌ ಅವರ ಅವಧಿಯು ಏಪ್ರಿಲ್‌ನಲ್ಲಿ ಮುಗಿಯಲಿದೆ. ಈಗಾಗಲೇ ಚುನಾವಣೆ ಆಯೋಗವು ರಾಜ್ಯಸಭೆ ಚುನಾವಣೆ ದಿನಾಂಕ ಘೋಷಿಸಿದೆ. ಫೆಬ್ರವರಿ 27ರಂದು 56 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT