ಪ್ರಧಾನಿ ಮೋದಿ 
ದೇಶ

ಮನಮೋಹನ್ ಸಿಂಗ್ ಗಾಲಿಕುರ್ಚಿಯಲ್ಲಿ ಬಂದು ಮತ ಚಲಾಯಿಸಿದ್ದು ನೆನಪಿದೆ: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಬಣ್ಣನೆ

ದೇಶಕ್ಕೆ ಡಾ.ಮನಮೋಹನ್ ಸಿಂಗ್ ಅವರ ಕೊಡುಗೆ ಅಪಾರವಾಗಿದ್ದು, ಅವರು ಗಾಲಿಕುರ್ಚಿಯಲ್ಲಿ ಬಂದು ಮತ ಚಲಾಯಿಸಿದ್ದು ನನಗೆ ನೆನಪಿದೆ ಎಂದು ಪ್ರಧಾನಿ ಮೋದಿಯವರು ಕೊಂಡಾಡಿದ್ದಾರೆ.

ನವದೆಹಲಿ: ದೇಶಕ್ಕೆ ಡಾ.ಮನಮೋಹನ್ ಸಿಂಗ್ ಅವರ ಕೊಡುಗೆ ಅಪಾರವಾಗಿದ್ದು, ಅವರು ಗಾಲಿಕುರ್ಚಿಯಲ್ಲಿ ಬಂದು ಮತ ಚಲಾಯಿಸಿದ್ದು ನನಗೆ ನೆನಪಿದೆ ಎಂದು ಪ್ರಧಾನಿ ಮೋದಿಯವರು ಕೊಂಡಾಡಿದ್ದಾರೆ.

ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ವೇಳೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಕಾಂಗ್ರೆಸ್‌ ಹಾಗೂ ಆ ಪಕ್ಷದ ನಾಯಕರನ್ನು ಟೀಕಿಸಿದ್ದ ಪ್ರಧಾನಿ ಮೋದಿಅವರು ಇಂದು ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಅವರನ್ನು ಕೊಂಡಾಡಿದರು.

ದೇಶಕ್ಕೆ ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಅವರು ನೀಡಿದ ಕೊಡುಗೆ ಅಪಾರವಾಗಿದೆ. ಅವರ ಕೊಡುಗೆಯನ್ನು ನಾವಿಂದು ಸ್ಮರಿಸಬೇಕಾಗಿದೆ” ಎಂದು ಹೇಳಿದರು.

ಡಾ.ಮನಮೋಹನ್‌ ಸಿಂಗ್‌ ಸೇರಿ ರಾಜ್ಯಸಭೆಯ ಹಲವು ಸದಸ್ಯರು ನಿವೃತ್ತರಾಗುತ್ತಿರುವ ಕಾರಣ, ಅವರಿಗೆ ಮೋದಿ ಅವರು ಭಾಷಣದ ಮೂಲಕ ಬೀಳ್ಕೊಡುಗೆ ನೀಡಿದರು.

ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಅವರು ಸುದೀರ್ಘವಾಗಿ ದೇಶಕ್ಕೆ, ಸದನಕ್ಕೆ ನೀಡಿದ ಕೊಡುಗೆ ಅಪಾರವಾದುದು. ಅವರ ಉಪಯುಕ್ತ ಮಾರ್ಗದರ್ಶನವು ದೇಶ, ಸದನವನ್ನು ಮುನ್ನಡೆಸಿದೆ. ಅವರನ್ನು ನಾವು ಎಂದಿಗೂ ಸ್ಮರಿಸೋಣ” ಎಂದು ತಿಳಿಸಿದರು.

ಸದನದಲ್ಲಿ ಯಾವುದೇ ನಾಯಕರ ಕೊಡುಗೆ ಚರ್ಚೆಯಾಗಲಿ. ಆಗೆಲ್ಲಾ ನಾವು ಡಾ.ಮನಮೋಹನ್‌ ಸಿಂಗ್‌ ಅವರ ಕೊಡುಗೆಯನ್ನು ಕೂಡ ಸ್ಮರಿಸಬೇಕು. ರಾಜ್ಯಸಭೆಯಲ್ಲಿರುವ ಸದಸ್ಯರು, ಮುಂದೆ ಆಗಮಿಸುವ ಸದಸ್ಯರು ಮನಮೋಹನ್‌ ಸಿಂಗ್‌ ಅವರ ಆದರ್ಶ, ಮಾರ್ಗದರ್ಶನವನ್ನು ಪಾಲಿಸಬೇಕು. ಇವರೆಲ್ಲರಿಗೂ ಮನಮೋಹನ್‌ ಸಿಂಗ್‌ ಅವರು ಮಾರ್ಗಸೂಚಿಯಾಗಿದ್ದಾರೆ ಎಂದರು.

ಕಳೆದ ಬಾರಿ ಮನಮೋಹನ್‌ ಸಿಂಗ್‌ ಅವರು ವ್ಹೀಲ್‌ಚೇರ್‌ನಲ್ಲಿ ರಾಜ್ಯಸಭೆಗೆ ಬಂದು ಮತದಾನ ಮಾಡಿದರು. ರಾಜ್ಯಸಭೆ ಸದಸ್ಯರಾಗಿ ಅವರು ಎಂತಹ ಬದ್ಧತೆ ಹೊಂದಿದ್ದರು ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ಹಾಗಾಗಿ, ಮನಮೋಹನ್‌ ಸಿಂಗ್‌ ಅವರು ಮಾದರಿ ಎನಿಸುತ್ತಾರೆ. ಒಬ್ಬ ಸಂಸದ ತನ್ನ ಜವಾಬ್ದಾರಿಗಳನ್ನು ಹೇಗೆ ನಿರ್ವಹಿಸಬೇಕು ಎಂಬುದಕ್ಕೆ ಅವರು ನಿದರ್ಶನ” ಎಂದು ಬಣ್ಣಿಸಿದರು.

ರಾಜ್ಯಸಭೆಯಿಂದ ಸುಮಾರು 56 ಸದಸ್ಯರು ನಿವೃತ್ತರಾಗುತ್ತಿದ್ದಾರೆ. ಹಾಗಾಗಿ, ಗುರುವಾರ ಸಂಜೆ ರಾಜ್ಯಸಭೆ ಸಭಾಪತಿ ಜಗದೀಪ್‌ ಧನಕರ್‌ ಅವರ ನಿವಾಸದಲ್ಲಿ ರಾಜ್ಯಸಭೆ ಸದಸ್ಯರಿಗೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿದೆ.

ಡಾ.ಮನಮೋಹನ್‌ ಸಿಂಗ್‌ ಅವರ ಅವಧಿಯು ಏಪ್ರಿಲ್‌ನಲ್ಲಿ ಮುಗಿಯಲಿದೆ. ಈಗಾಗಲೇ ಚುನಾವಣೆ ಆಯೋಗವು ರಾಜ್ಯಸಭೆ ಚುನಾವಣೆ ದಿನಾಂಕ ಘೋಷಿಸಿದೆ. ಫೆಬ್ರವರಿ 27ರಂದು 56 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NCERT Row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ': ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

SCROLL FOR NEXT