ಹಲ್ದ್ವಾನಿ ಹಿಂಸಾಚಾರ 
ದೇಶ

ಉತ್ತರಾಖಂಡ: ಹಲ್ದ್ವಾನಿ ಹಿಂಸಾಚಾರ 'ಕೋಮು ಗಲಭೆ ಅಲ್ಲ'

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಅಕ್ರಮ ಮದರಸಾ ಮತ್ತು ಪಕ್ಕದ ಮಸೀದಿ ತೆರವುಗೊಳಿಸಿದ ನಂತರ ನಡೆದ ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 100 ಪೊಲೀಸರು ಸೇರಿದಂತೆ 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 

ಹಲ್ದ್ವಾನಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಅಕ್ರಮ ಮದರಸಾ ಮತ್ತು ಪಕ್ಕದ ಮಸೀದಿ ತೆರವುಗೊಳಿಸಿದ ನಂತರ ನಡೆದ ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 100 ಪೊಲೀಸರು ಸೇರಿದಂತೆ 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 

ಹಲ್ದ್ವಾನಿ ಹಿಂಸಾಚಾರದ ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ನೈನಿತಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ವಂದನಾ ಸಿಂಗ್ ಅವರು, ಆರೋಪಿಗಳನ್ನು ಗುರುತಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಇದು ಕೋಮು ಗಲಭೆಯಲ್ಲ ಎಂದು ಒತ್ತಿ ಹೇಳಿದ ಸಿಂಗ್, ಇದನ್ನು ಕೋಮುವಾದ ಅಥವಾ ಸೂಕ್ಷ್ಮ ವಿಷಯವನ್ನಾಗಿ ಮಾಡದಂತೆ ಜನತೆಗೆ ಮನವಿ ಮಾಡಿದರು. ಅಲ್ಲದೆ ಪ್ರತೀಕಾರದಲ್ಲಿ ಯಾವುದೇ ನಿರ್ದಿಷ್ಟ ಸಮುದಾಯ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

"ಜನಸಮೂಹದಿಂದ ಪೊಲೀಸ್ ಠಾಣೆಗೆ ಸಂಪೂರ್ಣ ಹಾನಿಯಾಗಿದೆ... ಇದೊಂದು ದುರದೃಷ್ಟಕರ ಘಟನೆ. ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇದು(ಘಟನೆ) ಕೋಮು ಗಲಭೆ ಅಲ್ಲ. ಇದನ್ನು ಕೋಮುವಾದ ಅಥವಾ ಸೂಕ್ಷ್ಮ ವಿಚಾರವಾಗಿಸಬೇಡಿ ಎಂದು ನಾನು ಪ್ರತಿಯೊಬ್ಬರಲ್ಲಿ ವಿನಂತಿಸುತ್ತೇನೆ. ಯಾವುದೇ ನಿರ್ದಿಷ್ಟ ಸಮುದಾಯವು ಪ್ರತೀಕಾರ ತೀರಿಸಿಕೊಂಡಿಲ್ಲ ... ಇದು ರಾಜ್ಯದ ಆಡಳಿತ, ರಾಜ್ಯ ಸರ್ಕಾರ ಮತ್ತು ಕಾನೂನು, ಸುವ್ಯವಸ್ಥೆಗೆ ಸವಾಲು ಹಾಕುವ ಪ್ರಯತ್ನವಾಗಿದೆ ... ಸಂಜೆ ಮತ್ತಷ್ಟು ಮಾಹಿತಿ ನೀಡಲಾಗುವುದು” ಎಂದು ಅವರು ಹೇಳಿದ್ದಾರೆ.

ನೈನಿತಾಲ್ ಡಿಎಂ ವಂದನಾ ಸಿಂಗ್ ಅವರು ಶುಕ್ರವಾರ ಮಾಧ್ಯಮಗಳನ್ನು ಉದ್ದೇಶಿಸಿ, ಅತಿಕ್ರಮಣ ವಿರೋಧಿ ಅಭಿಯಾನದ ನಂತರ ಹಲ್ದ್ವಾನಿಯಲ್ಲಿ ನಡೆದ ಹಿಂಸಾಚಾರದ ಬಗ್ಗೆ ವಿವರಗಳನ್ನು ನೀಡಿದರು.

ಅಧಿಕೃತ ಮಾಹಿತಿಯ ಪ್ರಕಾರ, ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಡಿಎಂ ಸಿಂಗ್ ಖಚಿತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಜೈಲಿನಲ್ಲೇ ನಿಧನ!

ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ಶಾ ಎದುರೇ ಗುಡುಗಿದ ಡಿಕೆಶಿ: 'ಜನಸಂಖ್ಯೆ ನಿಯಂತ್ರಿಸಿದ ದಕ್ಷಿಣ ರಾಜ್ಯಗಳಿಗೆ ಶಿಕ್ಷೆ ಬೇಡ'; ಲೋಕಸಭೆ ಸ್ಥಾನ 543ಕ್ಕೇ ಸೀಮಿತಗೊಳಿಸುವಂತೆ ಆಗ್ರಹ!

1 ಲಕ್ಷ ವೀಕ್ಷಣೆಯ ವೀಡಿಯೊಗೆ 1 ಲಕ್ಷ ರೂ: Social Media Influencers ಗಳಿಗೆ ಸರ್ಕಾರದ ಬಂಪರ್ ಯೋಜನೆ!

ಕಾಡಿಗೆ ಬೆಂಕಿ ಹಚ್ಚಿ, ಶಿಬಿರಗಳನ್ನೇ ಸ್ಫೋಟಿಸಿದ ಕಳ್ಳಬೇಟೆಗಾರರು: ಚಾಮರಾಜನಗರ ಎನ್‌ಕೌಂಟರ್ ಪ್ರತಿಕಾರಕ್ಕೆ 10 ಎಕರೆ ಅರಣ್ಯವೇ ಬಲಿ!

ದಾವಣಗೆರೆ: ಇಬ್ಬರು ಮಕ್ಕಳ ಸಹಿತ ದಂಪತಿ ಅನುಮಾನಾಸ್ಪದವಾಗಿ ನಾಪತ್ತೆ; ಮನೆಯಲ್ಲಿ ಪತ್ರ ಪತ್ತೆ!