ಪ್ರಧಾನಿ ಮೋದಿ 
ದೇಶ

ದಲಿತರು, ಒಬಿಸಿಗಳು, ಬುಡಕಟ್ಟು ಜನರು ನಮ್ಮ ಸರ್ಕಾರದ ಬಡವರ ಪರ ಯೋಜನೆಗಳ ದೊಡ್ಡ ಫಲಾನುಭವಿಗಳು: ಪ್ರಧಾನಿ ಮೋದಿ

ನಮ್ಮ ಸರ್ಕಾರದ ಬಡವರ ಪರ ಯೋಜನೆಗಳ ಹೆಚ್ಚಿನ ಫಲಾನುಭವಿಗಳು ದಲಿತರು, ಒಬಿಸಿಗಳು ಮತ್ತು ಬುಡಕಟ್ಟು ಸಮುದಾಯದವರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು ಕಳೆದ ಹತ್ತು ವರ್ಷಗಳಲ್ಲಿ 25 ಕೋಟಿ ಜನರನ್ನು ಬಡತನದಿಂದ ಹೊರತಂದಿರುವುದು...

ದೀಸಾ(ಗುಜರಾತ್): ನಮ್ಮ ಸರ್ಕಾರದ ಬಡವರ ಪರ ಯೋಜನೆಗಳ ಹೆಚ್ಚಿನ ಫಲಾನುಭವಿಗಳು ದಲಿತರು, ಒಬಿಸಿಗಳು ಮತ್ತು ಬುಡಕಟ್ಟು ಸಮುದಾಯದವರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು ಕಳೆದ ಹತ್ತು ವರ್ಷಗಳಲ್ಲಿ 25 ಕೋಟಿ ಜನರನ್ನು ಬಡತನದಿಂದ ಹೊರತಂದಿರುವುದು ತಮ್ಮ ಸರ್ಕಾರದ ದೊಡ್ಡ ಸಾಧನೆಯಾಗಿದೆ ಎಂದು ಪ್ರತಿಪಾದಿಸಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಅಡಿಯಲ್ಲಿ 1.3 ಲಕ್ಷ ಮನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಮೋದಿ, ಯಾವುದೇ ಬಡ ವ್ಯಕ್ತಿಗೆ ಸ್ವಂತ ಮನೆ ಇದ್ದರೆ ಉತ್ತಮ ಭವಿಷ್ಯದ ಭರವಸೆ ಎಂದು ಹೇಳಿದರು.

1.3 ಲಕ್ಷ ಮನೆಗಳ ಅಂಕಿಅಂಶವನ್ನು ನೋಡಿ. ನಾನು ಪಿಎಂಎವೈ ಅಡಿಯಲ್ಲಿ ಮನೆ ನೀಡುವ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗಲೂ, ನಾನು ಅಂತಹ ಬೃಹತ್ ಅಂಕಿಅಂಶವನ್ನು ನೋಡಿರಲಿಲ್ಲ. ನಾನು ಗುಜರಾತ್ ಸರ್ಕಾರವನ್ನು ಅಭಿನಂದಿಸುತ್ತೇನೆ. ಯಾವುದೇ ಬಡ ವ್ಯಕ್ತಿಗೆ ಸ್ವಂತ ಮನೆ ಇರುವುದು ಉತ್ತಮ ಭವಿಷ್ಯದ ಭರವಸೆ ಎಂದು ಮೋದಿ ಹೇಳಿದರು.

ತಮ್ಮ ಸರ್ಕಾರ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳನ್ನು ನಿರ್ಲಕ್ಷಿಸುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಮೋದಿ, ನಮ್ಮ ಜನಪರ ಯೋಜನೆಗಳು ಬಡವರಿಗೆ ತಲುಪುತ್ತಿದೆ ಎಂದು ಹೇಳಿದ್ದು ಬಡವರು, ಯುವಕರು, ರೈತರು ಮತ್ತು ಮಹಿಳೆಯರು ಅಭಿವೃದ್ಧಿ ಹೊಂದಿದ ಭಾರತದ ಆಧಾರ ಸ್ತಂಭಗಳು ಎಂದರು.

ಕಳೆದ ಹತ್ತು ವರ್ಷಗಳಲ್ಲಿ 25 ಕೋಟಿ ಜನರನ್ನು ಬಡತನದಿಂದ ಹೊರತರುವುದೇ ತಮ್ಮ ಸರ್ಕಾರದ ದೊಡ್ಡ ಸಾಧನೆಯಾಗಿದೆ ಎಂದು ಪ್ರಧಾನಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT