ರೈತರ ಪ್ರತಿಭಟನೆ 
ದೇಶ

ರೈತರ ದೆಹಲಿ ಚಲೋ ಪ್ರತಿಭಟನಾ ಮೆರವಣಿಗೆ: ಹರಿಯಾಣದ 7 ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್‌ನೆಟ್ ಸೇವೆ ಸ್ಥಗಿತ!

ಫೆಬ್ರವರಿ 13 ರಂದು ರೈತರ ಉದ್ದೇಶಿತ 'ದೆಹಲಿ ಚಲೋ' ಮೆರವಣಿಗೆಗೆ ಮುಂಚಿತವಾಗಿ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ ನೆಟ್ ಸೇವೆಗಳು ಮತ್ತು ಒಮ್ಮೆಲೇ ಹೆಚ್ಚು ಎಸ್ ಎಂಎಸ್ ಕಳುಹಿಸುವ ಸೇವೆಗಳನ್ನು  ಸ್ಥಗಿತಗೊಳಿಸುವಂತೆ ಹರಿಯಾಣ ಸರ್ಕಾರ ಶನಿವಾರ ಆದೇಶಿಸಿದೆ.

'ಚಂಡೀಗಡ: ಫೆಬ್ರವರಿ 13 ರಂದು ರೈತರ ಉದ್ದೇಶಿತ 'ದೆಹಲಿ ಚಲೋ' ಮೆರವಣಿಗೆಗೆ ಮುಂಚಿತವಾಗಿ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ ನೆಟ್ ಸೇವೆಗಳು ಮತ್ತು ಒಮ್ಮೆಲೇ ಹೆಚ್ಚು ಎಸ್ ಎಂಎಸ್ ಕಳುಹಿಸುವ ಸೇವೆಗಳನ್ನು  ಸ್ಥಗಿತಗೊಳಿಸುವಂತೆ ಹರಿಯಾಣ ಸರ್ಕಾರ ಶನಿವಾರ ಆದೇಶಿಸಿದೆ.

ಅಧಿಕೃತ ಆದೇಶದ ಪ್ರಕಾರ, ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳಲ್ಲಿ ಫೆಬ್ರವರಿ 11 ರಂದು ಬೆಳಿಗ್ಗೆ 6 ರಿಂದ ಫೆಬ್ರವರಿ 13 ರ ಮಧ್ಯಾಹ್ನ 12 ಗಂಟೆಯವರೆಗೂ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ ಸಂಘಟನೆ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸೇರಿದಂತೆ  200 ಕ್ಕೂ ಹೆಚ್ಚು ರೈತ ಸಂಘಗಳು ಫೆಬ್ರವರಿ 13 ರಂದು 'ದೆಹಲಿ ಚಲೋ' ಮೆರವಣಿಗೆಯನ್ನು ಆಯೋಜಿಸಿವೆ.  ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಅಂಗೀಕರಿಸಿ ಕಾನೂನು ಜಾರಿಗೆ ತರುವಂತೆ ಕೇಂದ್ರವನ್ನು ಒತ್ತಾಯಿಸಿ ದಿಲ್ಲಿ ಚಲೋ ನಡೆಯಲಿದೆ ಎನ್ನಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT