ಪ್ರಧಾನಿ ಮೋದಿ 
ದೇಶ

'ಸುಧಾರಣೆ, ಸಾಧನೆ ಮತ್ತು ಪರಿವರ್ತನೆ': ಕಳೆದ ಐದು ವರ್ಷಗಳಲ್ಲಿ ದೇಶ ದೊಡ್ಡ ಬದಲಾವಣೆ ಕಂಡಿದೆ- ಪ್ರಧಾನಿ ಮೋದಿ

17ನೇ ಲೋಕಸಭೆಯ ಐದು ವರ್ಷಗಳು 'ಸುಧಾರಣೆ, ಸಾಧನೆ ಮತ್ತು ಪರಿವರ್ತನೆ'ಯ ಅವಧಿಯಾಗಿದ್ದು, ದೇಶ "ದೊಡ್ಡ ಬದಲಾವಣೆಯ" ವೇಗದಲ್ಲಿ ಸಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ.

ನವದೆಹಲಿ: 17ನೇ ಲೋಕಸಭೆಯ ಐದು ವರ್ಷಗಳು 'ಸುಧಾರಣೆ, ಸಾಧನೆ ಮತ್ತು ಪರಿವರ್ತನೆ'ಯ ಅವಧಿಯಾಗಿದ್ದು, ದೇಶ "ದೊಡ್ಡ ಬದಲಾವಣೆಯ" ವೇಗದಲ್ಲಿ ಸಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ.

ಸಂಸತ್ ಬಜೆಟ್ ಅಧಿವೇಶಕ್ಕೆ ಇಂದು ತೆರೆ ಬಿದ್ದಿದ್ದು, 17ನೇ ಲೋಕಸಭೆ ಅಧಿವೇಶನದ ಕೊನೆಯ ಕಲಾಪವನ್ನುದ್ದೇಶಿ ಮಾತನಾಡಿದ ಪ್ರಧಾನಿ ಮೋದಿ, ಕಳೆದ ಐದು ವರ್ಷಗಳಲ್ಲಿ ದೇಶ ದೊಡ್ಡ ಬದಲಾವಣೆ ಕಂಡಿದೆ. ಈ ಲೋಕಸಭೆಯು ಕೋವಿಡ್‌ನ ಸವಾಲನ್ನು ಎದುರಿಸಿ ಹೊಸ ರೀತಿಯಲ್ಲಿ ಕೆಲಸ ಮಾಡಿದೆ ಎಂದು ಹೇಳಿದರು. 

"ದೇಶವು ತ್ವರಿತ ಗತಿಯಲ್ಲಿ ದೊಡ್ಡ ಬದಲಾವಣೆಗಳತ್ತ ಸಾಗಿದೆ ಮತ್ತು ಸದನದ ಎಲ್ಲಾ ಸದಸ್ಯರು ಮಹತ್ವದ ಕೊಡುಗೆ ನೀಡಿದ್ದಾರೆ. ಜನರು ಶತಮಾನಗಳಿಂದ ಕಾಯುತ್ತಿದ್ದ ಮಹತ್ವದ ಕೆಲಸಗಳು ಪೂರ್ಣಗೊಂಡಿವೆ" ಎಂದು ಲೋಕಸಭೆ ಚುನಾವಣೆಗೆ ಮುನ್ನ ನಡೆದ ಕೊನೆಯ ಅಧಿವೇಶನದಲ್ಲಿ ಪ್ರಧಾನಿ ಹೇಳಿದರು.

ಜನ ತಲೆಮಾರುಗಳಿಂದ ಒಂದೇ ಸಂವಿಧಾನದ ಕನಸು ಕಂಡಿದ್ದರು. ಆದರೆ ಈ ಸದನವು 370ನೇ ವಿಧಿಯನ್ನು ತೆಗೆದುಹಾಕುವ ಮೂಲಕ ಅದನ್ನು ಸಾಧ್ಯವಾಗಿಸಿದೆ. 17ನೇ ಲೋಕಸಭೆಯಲ್ಲಿ ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮೋದಿ ತಿಳಿಸಿದರು.

ಹಲವಾರು ಸವಾಲುಗಳನ್ನು ಎದುರಿಸಿ ದೇಶಕ್ಕೆ ಸೂಕ್ತ ನಿರ್ದೇಶನ ನೀಡಲಾಗಿದೆ. ಈ ಐದು ವರ್ಷಗಳು ಸುಧಾರಣೆ, ಸಾಧನೆ ಮತ್ತು ಪರಿವರ್ತನೆಯಾಗಿದೆ. ನಾವು ಸುಧಾರಣೆ, ಸಾಧನೆ ಮತ್ತು ಪರಿವರ್ತನೆಯನ್ನು ನೋಡುವುದು ಅಪರೂಪ. ದೇಶವು 17ನೇ ಲೋಕಸಭೆಯನ್ನು ಆಶೀರ್ವದಿಸುತ್ತಲೇ ಇರುತ್ತದೆ" ಎಂದು ಪ್ರಧಾನಿ ಹೇಳಿದರು.

17ನೇ ಲೋಕಸಭೆಯ ಕೊನೆಯ ಅಧಿವೇಶನದಲ್ಲಿ ಎಲ್ಲರಿಗೂ, ವಿಶೇಷವಾಗಿ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಧನ್ಯವಾದ ಹೇಳಿದ ಪ್ರಧಾನಿ ಮೋದಿ, "ಏನೇ ಸಂಭವಿಸಿದರೂ ನಿಮ್ಮ ಮುಖದಲ್ಲಿ ಯಾವಾಗಲೂ ನಗು ಇರುತ್ತಿತ್ತು. ನೀವು ನಿಷ್ಪಕ್ಷಪಾತವಾಗಿ ಈ ಸದನವನ್ನು ಮುನ್ನಡೆಸಿದ್ದೀರಿ ಮತ್ತು ಅದಕ್ಕಾಗಿ ನಾನು ನಿಮ್ಮನ್ನು ಶ್ಲಾಘಿಸುತ್ತೇನೆ. ಕೋಪ ಮತ್ತು ಆರೋಪಗಳ ಸಂದರ್ಭಗಳು ಇದ್ದವು. ಆದರೆ ನೀವು ಈ ಸಂದರ್ಭಗಳನ್ನು ತಾಳ್ಮೆಯಿಂದ ನಿಭಾಯಿಸಿದ್ದೀರಿ ಮತ್ತು ಬುದ್ಧಿವಂತಿಕೆಯಿಂದ ಕಲಾಪವನ್ನು ನಡೆಸಿದ್ದೀರಿ" ಎಂದು ಬಿರ್ಲಾ ಅವರನ್ನು ಅಭಿನಂದಿಸಿದರು.

ತಮ್ಮ ಸರ್ಕಾರದ ಸಾಧನೆಗಳನ್ನು ವಿವರಿಸಿದ ಮೋದಿ, 370ನೇ ವಿಧಿಯನ್ನು ರದ್ದುಗೊಳಿಸಿರುವುದು, ತ್ರಿವಳಿ ತಲಾಖ್ ಮಸೂದೆಯ ಅಂಗೀಕಾರವನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದರು. ಮಹಿಳಾ ಮೀಸಲಾತಿ ಮಸೂದೆಯೊಂದಿಗೆ ಹೊಸ ಸಂಸತ್ ಕಟ್ಟಡ ತನ್ನ ಪ್ರಯಾಣವನ್ನು ಪ್ರಾರಂಭಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು. 

ಮುಂಬರುವ 25 ವರ್ಷಗಳು ದೇಶಕ್ಕೆ ಬಹಳ ನಿರ್ಣಾಯಕವಾಗಿದೆ, ಒಂದು ಕಡೆ, ರಾಜಕೀಯ ಆಕಾಂಕ್ಷೆಗಳಿವೆ, ಮತ್ತೊಂದೆಡೆ ದೇಶಕ್ಕಾಗಿ ಕನಸುಗಳಿವೆ. ಮುಂದಿನ 25 ವರ್ಷಗಳಲ್ಲಿ ಭಾರತವು ‘ವಿಕಸಿತ್ ಭಾರತ’ ಆಗಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT