ಸಂಗ್ರಹ ಚಿತ್ರ 
ದೇಶ

2024ರ ಲೋಕಸಭೆ ಚುನಾವಣೆ: ಪಂಜಾಬ್‌ನಲ್ಲಿ ಅಕಾಲಿದಳ ಮತ್ತು ಬಿಜೆಪಿ ನಡುವಿನ ಮೈತ್ರಿ ಮಾತುಕತೆ ವಿಫಲ!

ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಎನ್‌ಡಿಎ ತನ್ನ ಕೂಟವನ್ನು ವಿಸ್ತರಿಸಲು ನಿರಂತರವಾಗಿ ಪ್ರಯತ್ನಗಳನ್ನು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಪಂಜಾಬ್‌ನಲ್ಲಿ ಮೈತ್ರಿಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಅಕಾಲಿದಳ ನಡುವೆ ಕೆಲಕಾಲ ಮಾತುಕತೆ ನಡೆದಿತ್ತು.

ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಎನ್‌ಡಿಎ ತನ್ನ ಕೂಟವನ್ನು ವಿಸ್ತರಿಸಲು ನಿರಂತರವಾಗಿ ಪ್ರಯತ್ನಗಳನ್ನು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಪಂಜಾಬ್‌ನಲ್ಲಿ ಮೈತ್ರಿಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಅಕಾಲಿದಳ ನಡುವೆ ಕೆಲಕಾಲ ಮಾತುಕತೆ ನಡೆದಿತ್ತು. ಇದೀಗ ಮೂಲಗಳನ್ನು ಉಲ್ಲೇಖಿಸಿ ದೊಡ್ಡ ಸುದ್ದಿ ಹೊರಬೀಳುತ್ತಿದ್ದು, ಅದರ ಪ್ರಕಾರ ಪಂಜಾಬ್‌ನಲ್ಲಿ ಅಕಾಲಿದಳ ಮತ್ತು ಬಿಜೆಪಿ ಮೈತ್ರಿಕೂಟದ ನಡುವಿನ ಮಾತುಕತೆ ವಿಫಲವಾಗಿದೆ ಎಂದು ಹೇಳಲಾಗುತ್ತಿದೆ.

ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಒಟ್ಟಾಗಿ ಚುನಾವಣೆ ಎದುರಿಸುವುದಿಲ್ಲ ಎಂದು ಘೋಷಿಸಿದ ನಂತರ ಬಿಜೆಪಿ ತನ್ನ ತಂತ್ರವನ್ನು ಬದಲಾಯಿಸಿದೆ. ಮೂಲಗಳ ಪ್ರಕಾರ, ರೈತರ ಚಳವಳಿ ಮತ್ತು ಸಿಖ್ ಕೈದಿಗಳ ಬಿಡುಗಡೆಯ ವಿಷಯಗಳ ಬಗ್ಗೆ ಅಕಾಲಿದಳ ಬಿಜೆಪಿ ಮೇಲೆ ಒತ್ತಡ ಹೇರುತ್ತಿದೆ. ಅಲ್ಲದೆ, ಪಂಜಾಬ್‌ನ ಬಿಜೆಪಿ ನಾಯಕತ್ವ ಕೂಡ ಮೈತ್ರಿಯ ಪರವಾಗಿ ಇಲ್ಲ. ಈ ಕಾರಣದಿಂದಲೇ ಬಿಜೆಪಿ-ಅಕಾಲಿದಳ ಹಾದಿ ದುರ್ಗಮವಾಗಿದೆ.

ಕೇಂದ್ರ ಸರ್ಕಾರವು ರೈತರಿಗಾಗಿ ಹೊಸ ಕೃಷಿ ಕಾನೂನುಗಳನ್ನು ತಂದಾಗ, ಅಕಾಲಿದಳವು ಅದನ್ನು ವಿರೋಧಿಸಿ ಎನ್‌ಡಿಎ ಜೊತೆಗಿನ ತನ್ನ ಮೈತ್ರಿಯನ್ನು ಮುರಿದುಕೊಂಡಿತ್ತು. ಅದರ ನಂತರ, ಅಕಾಲಿದಳವು ಬಹುಜನ ಸಮಾಜ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿತು.

ಪಂಜಾಬ್‌ನ 13 ಲೋಕಸಭಾ ಕ್ಷೇತ್ರಗಳ ಪೈಕಿ ಆರರಲ್ಲಿ ಸ್ಪರ್ಧಿಸುವುದಾಗಿ ಬಿಜೆಪಿ ಒತ್ತಾಯಿಸುತ್ತಿದೆ. ಆದರೆ ಅಕಾಲಿದಳ ಅಷ್ಟು ಸ್ಥಾನಗಳನ್ನು ನೀಡಲು ಸಿದ್ಧವಿಲ್ಲ ಎಂದು ಕೆಲವು ಸಮಯದ ಹಿಂದೆ ಅಕಾಲಿದಳ ಮೂಲಗಳು ತಿಳಿಸಿದ್ದವು. ಅಕಾಲಿದಳ ಎನ್‌ಡಿಎ ಭಾಗವಾಗಿದ್ದಾಗ 10 ಸ್ಥಾನಗಳಲ್ಲಿ ಮತ್ತು ಬಿಜೆಪಿ ಮೂರು ಸ್ಥಾನಗಳಲ್ಲಿ ಸ್ಪರ್ಧಿಸಿತ್ತು.

ವಾಸ್ತವವಾಗಿ, ಪ್ರಸ್ತುತ ಪಂಜಾಬ್‌ನಲ್ಲಿ ಅಕಾಲಿದಳ ಮತ್ತು ಬಹುಜನ ಸಮಾಜ ಪಕ್ಷದ ನಡುವೆ ಮೈತ್ರಿ ಇದೆ. ಪಂಜಾಬ್ ನಲ್ಲಿ ಬಿಎಸ್ ಪಿ ಉತ್ತಮ ಪ್ರಭಾವ ಹೊಂದಿರುವ ಕಾರಣ ಈ ಮೈತ್ರಿಯನ್ನು ಮುರಿಯಲು ಅವರು ಬಯಸುತ್ತಿಲ್ಲ. ಸುಖದೇವ್ ಸಿಂಗ್ ದಿಂಡಾ ಅವರ ಗುಂಪು ಕೂಡ ಅಕಾಲಿದಳ ಸೇರುವ ಬಗ್ಗೆ ಚರ್ಚೆ ನಡೆಯುತ್ತಿದೆ.

ಅದೇ ಸಮಯದಲ್ಲಿ, ಪಂಜಾಬ್‌ನಲ್ಲಿ ಅಕಾಲಿದಳವನ್ನು ದುರ್ಬಲಗೊಳಿಸಲು ಬಿಜೆಪಿ ಪ್ರಯತ್ನಿಸಿದೆ ಎಂದು ಅಕಾಲಿ ನಾಯಕರು ಆರೋಪಿಸಿದ್ದಾರೆ. ಅಕಾಲಿದಳದ ವೋಟ್ ಬ್ಯಾಂಕ್ ತನಗೆ ವರ್ಗಾವಣೆಯಾಗಲಿ ಎಂಬ ಕಾರಣಕ್ಕೆ ಬಿಜೆಪಿಯು ಅಕಾಲಿದಳದ ಸಿಟ್ಟಿಗೆದ್ದ ನಾಯಕರನ್ನು ತನ್ನ ಪಕ್ಷಕ್ಕೆ ಸೇರಿಸಿಕೊಂಡಿತು. ಜಲಂಧರ್ ಲೋಕಸಭಾ ಉಪಚುನಾವಣೆಯಲ್ಲಿಯೂ ಬಿಜೆಪಿ ಚರಂಜಿತ್ ಸಿಂಗ್ ಅತ್ವಾಲ್ ಅವರ ಪುತ್ರ ಇಂದರ್ ಸಿಂಗ್ ಅತ್ವಾಲ್ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಮಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT