ಸಂಗ್ರಹ ಚಿತ್ರ 
ದೇಶ

ರಾಜ್ಯಸಭೆ ಚುನಾವಣೆಗೆ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ: ಸೋಮಣ್ಣ ಬದಲಿಗೆ ನಾರಾಯಣ ಭಾಂಡಗೆ ಟಿಕೆಟ್!

ರಾಜ್ಯಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟ ಮಾಡಿದ್ದು ಮಾಜಿ ಸಚಿವ ವಿ. ಸೋಮಣ್ಣಗೆ ರಾಜ್ಯಸಭೆ ಟಿಕೆಟ್ ಕೈತಪ್ಪಿದ್ದು ಕರ್ನಾಟಕದಿಂದ ನಾರಾಯಣ ಭಾಂಡಗೆ ಸ್ಪರ್ಧಿಸುತ್ತಿದ್ದಾರೆ.

ನವದೆಹಲಿ: ರಾಜ್ಯಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟ ಮಾಡಿದ್ದು ಮಾಜಿ ಸಚಿವ ವಿ. ಸೋಮಣ್ಣಗೆ ರಾಜ್ಯಸಭೆ ಟಿಕೆಟ್ ಕೈತಪ್ಪಿದ್ದು ಕರ್ನಾಟಕದಿಂದ ನಾರಾಯಣ ಭಾಂಡಗೆ ಸ್ಪರ್ಧಿಸುತ್ತಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎರಡೆರಡು ಕಡೆ ಸ್ಪರ್ಧಿಸಿ ಸೋತಿದ್ದ ವಿ ಸೋಮಣ್ಣ ಅವರು ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದರು. ನಂತರ ರಾಜ್ಯಸಭೆ ಟಿಕೆಟ್ ಸಿಗುವ ಭರವಸೆಯನ್ನು ಸೋಮಣ್ಣ ವ್ಯಕ್ತಪಡಿಸಿದ್ದರು. ಆದರೆ ಸೋಮಣ್ಣ ಬದಲಿಗೆ ನಾರಾಯಣ ಭಾಂಡಗೆಗೆ ಟಿಕೆಟ್ ನೀಡಲಾಗಿದೆ. 

ಗದಗ ಮೂಲದ ಮಾಜಿ ಎಂಎಲ್‌ಸಿ ನಾರಾಯಣ ಭಾಂಡಗೆ ಅವರು ಬಿಜೆಪಿ ಉಪಾಧ್ಯಕ್ಷರಾಗಿ ಮತ್ತು ರಾಜ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.

ಇನ್ನುಳಿದಂತೆ ಬಿಹಾರದಲ್ಲಿ ಡಾ. ಧರ್ಮಶೀಲಾ ಗುಪ್ತಾ ಹಾಗೂ ಡಾ. ಭೀಮಸಿಂಗ್, ಛತ್ತೀಸ್​ಗಢದಲ್ಲಿ ರಾಜಾ ದೇವೇಂದ್ರ ಪ್ರತಾಪ್​ ಸಿಂಗ್​, ಹರಿಯಾಣದಲ್ಲಿ ಸುಭಾಷ್​ ಬಾರ್ಲಾ, ಉತ್ತರಾಖಂಡ್ ದಲ್ಲಿ ಮಹೇಂದ್ರ ಭಟ್, ಪಶ್ಚಿಮ ಬಂಗಾಳದಲ್ಲಿ ಸಮಿಕಾ ಭಟ್ಟಾಚಾರ್ಯಗೆ ಟಿಕೆಟ್ ನೀಡಲಾಗಿದೆ. 

ಇನ್ನು ಉತ್ತರ ಪ್ರದೇಶದಲ್ಲಿ ಆರ್​.ಪಿ.ಎನ್​ ಸಿಂಗ್, ಸುಭಾಂಶು ತ್ರಿವೇದಿ, ಚೌಧರಿ ತೇಜ್​ವೀರ್ ಸಿಂಗ್, ಸಾಧನಾ ಸಿಂಗ್, ಅಮರಪಾಲ್ ಮೌರ್ಯ, ಸಂಗೀತಾ ಬಲ್ವಂತ್, ನವೀನ್ ಜೈನ್ ಗೆ ಟಿಕೆಟ್ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT