ಸಂಗ್ರಹ ಚಿತ್ರ 
ದೇಶ

ರಾಜ್ಯಸಭೆ ಚುನಾವಣೆಗೆ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ: ಸೋಮಣ್ಣ ಬದಲಿಗೆ ನಾರಾಯಣ ಭಾಂಡಗೆ ಟಿಕೆಟ್!

ರಾಜ್ಯಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟ ಮಾಡಿದ್ದು ಮಾಜಿ ಸಚಿವ ವಿ. ಸೋಮಣ್ಣಗೆ ರಾಜ್ಯಸಭೆ ಟಿಕೆಟ್ ಕೈತಪ್ಪಿದ್ದು ಕರ್ನಾಟಕದಿಂದ ನಾರಾಯಣ ಭಾಂಡಗೆ ಸ್ಪರ್ಧಿಸುತ್ತಿದ್ದಾರೆ.

ನವದೆಹಲಿ: ರಾಜ್ಯಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟ ಮಾಡಿದ್ದು ಮಾಜಿ ಸಚಿವ ವಿ. ಸೋಮಣ್ಣಗೆ ರಾಜ್ಯಸಭೆ ಟಿಕೆಟ್ ಕೈತಪ್ಪಿದ್ದು ಕರ್ನಾಟಕದಿಂದ ನಾರಾಯಣ ಭಾಂಡಗೆ ಸ್ಪರ್ಧಿಸುತ್ತಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎರಡೆರಡು ಕಡೆ ಸ್ಪರ್ಧಿಸಿ ಸೋತಿದ್ದ ವಿ ಸೋಮಣ್ಣ ಅವರು ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದರು. ನಂತರ ರಾಜ್ಯಸಭೆ ಟಿಕೆಟ್ ಸಿಗುವ ಭರವಸೆಯನ್ನು ಸೋಮಣ್ಣ ವ್ಯಕ್ತಪಡಿಸಿದ್ದರು. ಆದರೆ ಸೋಮಣ್ಣ ಬದಲಿಗೆ ನಾರಾಯಣ ಭಾಂಡಗೆಗೆ ಟಿಕೆಟ್ ನೀಡಲಾಗಿದೆ. 

ಗದಗ ಮೂಲದ ಮಾಜಿ ಎಂಎಲ್‌ಸಿ ನಾರಾಯಣ ಭಾಂಡಗೆ ಅವರು ಬಿಜೆಪಿ ಉಪಾಧ್ಯಕ್ಷರಾಗಿ ಮತ್ತು ರಾಜ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.

ಇನ್ನುಳಿದಂತೆ ಬಿಹಾರದಲ್ಲಿ ಡಾ. ಧರ್ಮಶೀಲಾ ಗುಪ್ತಾ ಹಾಗೂ ಡಾ. ಭೀಮಸಿಂಗ್, ಛತ್ತೀಸ್​ಗಢದಲ್ಲಿ ರಾಜಾ ದೇವೇಂದ್ರ ಪ್ರತಾಪ್​ ಸಿಂಗ್​, ಹರಿಯಾಣದಲ್ಲಿ ಸುಭಾಷ್​ ಬಾರ್ಲಾ, ಉತ್ತರಾಖಂಡ್ ದಲ್ಲಿ ಮಹೇಂದ್ರ ಭಟ್, ಪಶ್ಚಿಮ ಬಂಗಾಳದಲ್ಲಿ ಸಮಿಕಾ ಭಟ್ಟಾಚಾರ್ಯಗೆ ಟಿಕೆಟ್ ನೀಡಲಾಗಿದೆ. 

ಇನ್ನು ಉತ್ತರ ಪ್ರದೇಶದಲ್ಲಿ ಆರ್​.ಪಿ.ಎನ್​ ಸಿಂಗ್, ಸುಭಾಂಶು ತ್ರಿವೇದಿ, ಚೌಧರಿ ತೇಜ್​ವೀರ್ ಸಿಂಗ್, ಸಾಧನಾ ಸಿಂಗ್, ಅಮರಪಾಲ್ ಮೌರ್ಯ, ಸಂಗೀತಾ ಬಲ್ವಂತ್, ನವೀನ್ ಜೈನ್ ಗೆ ಟಿಕೆಟ್ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

SCROLL FOR NEXT