ದೇಶ

ಅಯೋಧ್ಯೆಗೆ ಭೇಟಿ ನೀಡಲಿರುವ ಕೇಜ್ರಿವಾಲ್, ಭಗವಂತ್ ಮಾನ್

Srinivas Rao BV

ಅಯೋಧ್ಯೆ:  ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಪಂಜಾಬ್ ಸಿಎಂ ಭಗವಂತ್ ಮಾನ್ ಫೆ.12 ರಂದು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸೋಮವಾರ ಅಯೋಧ್ಯೆಗೆ ಭೇಟಿ ನೀಡಿ ರಾಮಮಂದಿರಕ್ಕೆ ಪೂಜೆ ಸಲ್ಲಿಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ.

ದೇವಸ್ಥಾನದಲ್ಲಿ ಜನವರಿ 22 ರಂದು ನಡೆದ ಪ್ರಾಣಪ್ರತಿಷ್ಠಾಪನೆ ಸಮಾರಂಭಕ್ಕೆ ಎಎಪಿ ಸಂಚಾಲಕರನ್ನು ಆಹ್ವಾನಿಸಲಾಗಿತ್ತು ಆದರೆ ನಂತರ ಅವರು ತಮ್ಮ ಪೋಷಕರು, ಪತ್ನಿ ಮತ್ತು ಮಕ್ಕಳೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಲು ಬಯಸುವುದಾಗಿ ಹೇಳಿದ್ದರು ಎಂದು ಆಮ್ ಆದ್ಮಿ ಪಕ್ಷ ಹೇಳಿದೆ

"ಕೇಜ್ರಿವಾಲ್ ಮತ್ತು ಮಾನ್ ನಾಳೆ ಅಯೋಧ್ಯೆಗೆ ಹೋಗಲಿದ್ದಾರೆ. ಅವರ ಕುಟುಂಬಗಳು ಸಹ ಅವರೊಂದಿಗೆ ಹೋಗುತ್ತಾರೆ" ಎಂದು ಆಪ್ ಮೂಲಗಳು ಭಾನುವಾರ ತಿಳಿಸಿದೆ.

SCROLL FOR NEXT