ಸಾಂದರ್ಭಿಕ ಚಿತ್ರ 
ದೇಶ

ಚೆನ್ನೈ: ಮಾಜಿ ಮೇಯರ್ ಪುತ್ರನ ಮೃತದೇಹ ಅಪಘಾತವಾದ 8 ದಿನಗಳ ನಂತರ ಹಿಮಾಚಲದಲ್ಲಿ ಪತ್ತೆ!

ಚೆನ್ನೈನ ಮಾಜಿ ಮೇಯರ್ ಪುತ್ರನ ಮೃತದೇಹ ಅಪಘಾತ ಸಂಭವಿಸಿದ 8 ದಿನಗಳ ನಂತರ ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸೋಮವಾರ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚೆನ್ನೈ: ಚೆನ್ನೈನ ಮಾಜಿ ಮೇಯರ್ ಪುತ್ರನ ಮೃತದೇಹ ಅಪಘಾತ ಸಂಭವಿಸಿದ 8 ದಿನಗಳ ನಂತರ ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸೋಮವಾರ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ತೆರಳುತ್ತಿದ್ದ ವಾಹನ ಸಟ್ಲೇಜ್ ನದಿಯ 200 ಮೀಟರ್ ಕೆಳಗೆ ಮುಳುಗಿದ ನಂತರ ನಾಪತ್ತೆಯಾಗಿದ್ದ ಅವರ ಮೃತದೇಹವನ್ನು ಎಂಟು ದಿನಗಳ ನಂತರ ವಶಕ್ಕೆ ಪಡೆಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 

ಫೆಬ್ರವರಿ 4 ರಂದು ಕಶಾಂಗ್ ನಲ್ಲಾ ಬಳಿ ಅಪಘಾತ ಸಂಭವಿಸಿದೆ. ಚೆನ್ನೈನ ಮಾಜಿ ಮೇಯರ್ ಸೈದೈ ದುರೈಸಾಮಿ ಅವರ ಪುತ್ರ ವೆಟ್ರಿ ದುರೈಸಾಮಿ (45) ಅವರ ಮೃತದೇಹವು ಅಪಘಾತವಾದ ಸ್ಥಳದಿಂದ ಸುಮಾರು 3 ಕಿಮೀ ದೂರದಲ್ಲಿರುವ ಸಟ್ಲುಜ್ ನದಿಯಿಂದ ವಶಕ್ಕೆ ಪಡೆಯಲಾಗಿದೆ. ಮಹುನ್ ನಾಗ್ ಅಸೋಸಿಯೇಷನ್, ಸುಂದರ್‌ನಗರ (ಮಂಡಿ) ಮುಳುಗು ತಜ್ಞರು ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮೃತದೇಹವನ್ನು ಹೊರತೆಗೆದಿದ್ದಾರೆ ಎಂದು ಕಿನ್ನೌರ್ ಉಪ ಆಯುಕ್ತ ಅಮಿತ್ ಕುಮಾರ್ ಶರ್ಮಾ ತಿಳಿಸಿದ್ದಾರೆ.

ಶಿಮ್ಲಾದ ಇಂದಿರಾಗಾಂಧಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು ಎಂದು ಹೇಳಿಕೆಯಲ್ಲಿ ಪೊಲೀಸರು ತಿಳಿಸಿದ್ದಾರೆ.

ಅಪಘಾತ ಸಂಭವಿಸಿದ ಎರಡು ದಿನಗಳ ನಂತರ ವೆಟ್ರಿ ಅವರ ತಂದೆ ಸೈದೈ ದುರೈಸಾಮಿ ಅವರು ತಮ್ಮ ಮಗನನ್ನು ಹುಡುಕಿಕೊಟ್ಟವರಿಗೆ 1 ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದರು. ತನ್ನ ಮಗನನ್ನು ಹುಡುಕಲು ಸಹಾಯ ಮಾಡುವಂತೆ ಸ್ಥಳೀಯ ಜನರಿಗೆ ಮನವಿಯನ್ನೂ ಮಾಡಿದ್ದರು. ವಾಹನವು ಕಾಜಾದಿಂದ ಶಿಮ್ಲಾಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್