ತೇಜಸ್ವಿ ಯಾದವ್ 
ದೇಶ

'ಕೇವಲ ಗುಜರಾತಿಗಳು ದರೋಡೆಕೋರರಾಗಲು ಸಾಧ್ಯ' ಹೇಳಿಕೆ: ಲಾಲೂ ಪುತ್ರ ತೇಜಸ್ವಿ ಯಾದವ್ ವಿರುದ್ಧದ ಕೇಸು ರದ್ದು

ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ‘ಗುಜರಾತಿಗಳು ಮಾತ್ರ ದರೋಡೆಕೋರರಾಗಲು ಸಾಧ್ಯ’ಎಂಬ ಹೇಳಿಕೆ ವಿರುದ್ಧ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ.

ನವದೆಹಲಿ: ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ‘ಗುಜರಾತಿಗಳು ಮಾತ್ರ ದರೋಡೆಕೋರರಾಗಲು ಸಾಧ್ಯ’ಎಂಬ ಹೇಳಿಕೆ ವಿರುದ್ಧ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ.

ಕಳೆದ ವರ್ಷ "ಗುಜರಾತಿ ಹೈ ಥಗ್ ಹೈ ಹೋ ಸಕ್ತಾ ಹೈ" (ಗುಜರಾತಿಗಳು ಮಾತ್ರ ದರೋಡೆ ಮಾಡಬಹುದು) ಎಂದು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳದ (RJD) ತೇಜಸ್ವಿ ಯಾದವ್ ಅವರು ಸ್ಪಷ್ಟನೆ ನೀಡಿ ವಿವರ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ತೇಜಸ್ವಿ ಯಾದವ್ ಅವರು ತಮ್ಮ ಹೇಳಿಕೆಯನ್ನು ವಾಪಾಸ್ ಪಡೆದ ಹಿನ್ನೆಲೆಯಲ್ಲಿ ಪ್ರಕರಣವನ್ನು ರದ್ದುಗೊಳಿಸಲಾಗಿದೆ.

ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಉಜ್ಜೈನ್ ಭುಯಾನ್ ಅವರನ್ನೊಳಗೊಂಡ ನ್ಯಾಯಪೀಠವು, ತೇಜಸ್ವಿ ಯಾದವ್ ಹೇಳಿಕೆ ಅಸ್ಪಷ್ಟವಾಗಿದ್ದರಿಂದ ಈ ಬಗ್ಗೆ ವಿವರಣೆ ಒಂದು ವಾರ ಕಾಲಾವಕಾಶವನ್ನು ನೀಡಿತ್ತು. 

ಅಖಿಲ ಭಾರತ ಭ್ರಷ್ಟಾಚಾರ ವಿರೋಧಿ ಮತ್ತು ಅಪರಾಧ ತಡೆ ಮಂಡಳಿಯ ಗುಜರಾತ್ ರಾಜ್ಯ ಉಪಾಧ್ಯಕ್ಷ ಹರೇಶ್ ಮೆಹ್ತಾ ಅವರು ಅಹಮದಾಬಾದ್‌ನಲ್ಲಿ ತೇಜಸ್ವಿ ಯಾದವ್ ವಿರುದ್ಧ ದೂರು ದಾಖಲಿಸಿದ್ದರು. ಈ ಸಂಘಟನೆಯು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 ಮತ್ತು 500 ಅಡಿಯಲ್ಲಿ ಪ್ರಕರಣ ದಾಖಲಿಸಿತ್ತು. 

ಮಾನನಷ್ಟ ಮೊಕದ್ದಮೆಯಲ್ಲಿ, ಇಡೀ ಗುಜರಾತಿ ಸಮುದಾಯವನ್ನು "ದರೋಡೆಕೋರರು" ಎಂದು ಅವಮಾನಿಸಿ ಸಾರ್ವಜನಿಕವಾಗಿ ನೀಡಿದ ಹೇಳಿಕೆಯು ಎಲ್ಲಾ ಗುಜರಾತಿಗಳಿಗೆ ಮಾನಹಾನಿ ಮತ್ತು ಅವಮಾನಕರವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. 

ನಿರ್ದಿಷ್ಟ ಸಮುದಾಯ ಅಥವಾ ಜನರು ಅಥವಾ ನಿರ್ದಿಷ್ಟ ರಾಜ್ಯದ ವಿರುದ್ಧ ಯಾದವ್ ಏನು ಹೇಳಿದ್ದರೂ ಅದನ್ನು ಹಿಂತೆಗೆದುಕೊಳ್ಳುವ ಅಗತ್ಯವಿದೆ ಎಂದು ನ್ಯಾಯಾಲಯ ಮನಗಂಡಿತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT