ವಿಭಾಕರ್‌ ಶಾಸ್ತ್ರಿ 
ದೇಶ

ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ಲಾಲ್‌ ಬಹದ್ದೂರ್‌ ಶಾಸ್ತ್ರಿ ಮೊಮ್ಮಗ!

ಮಾಜಿ ಪ್ರಧಾನಿ, ಅಪ್ಪಟ ಕಾಂಗ್ರೆಸ್ಸಿಗ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಮೊಮ್ಮಗ ವಿಭಾಕರ್‌ ಶಾಸ್ತ್ರಿ ಅವರು ಕಾಂಗ್ರೆಸ್‌ ತೊರೆದು ಬಿಜೆಪಿ  ಸೇರ್ಪಡೆಯಾಗಿದ್ದಾರೆ. ಇದರಿಂದ ಲೋಕಸಭೆ ಚುನಾವಣೆಗೂ ಮೊದಲು ಕಾಂಗ್ರೆಸ್‌ಗೆ ಭಾರಿ ಹಿನ್ನಡೆಯಾದಂತಾಗಿದೆ.

ಲಕ್ನೋ: ಲೋಕಸಭೆ ಚುನಾವಣೆಗೆ  ಕೆಲವೇ ತಿಂಗಳು ಬಾಕಿ ಉಳಿದಿವೆ. ಇದಕ್ಕಾಗಿ ಬಿಜೆಪಿ, ಕಾಂಗ್ರೆಸ್‌ ಸೇರಿ ಎಲ್ಲ ರಾಜಕೀಯ ಪಕ್ಷಗಳು ರಣತಂತ್ರ ರೂಪಿಸುತ್ತಿವೆ. ಇದರ ಮಧ್ಯೆಯೇ, ಮಾಜಿ ಪ್ರಧಾನಿ, ಅಪ್ಪಟ ಕಾಂಗ್ರೆಸ್ಸಿಗ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಮೊಮ್ಮಗ ವಿಭಾಕರ್‌ ಶಾಸ್ತ್ರಿ ಅವರು ಕಾಂಗ್ರೆಸ್‌ ತೊರೆದು ಬಿಜೆಪಿ  ಸೇರ್ಪಡೆಯಾಗಿದ್ದಾರೆ. ಇದರಿಂದ ಲೋಕಸಭೆ ಚುನಾವಣೆಗೂ ಮೊದಲು ಕಾಂಗ್ರೆಸ್‌ಗೆ ಭಾರಿ ಹಿನ್ನಡೆಯಾದಂತಾಗಿದೆ.

ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆಲವೇ ನಿಮಿಷದಲ್ಲಿ ವಿಭಾಕರ್‌ ಶಾಸ್ತ್ರಿ ಅವರು ಉತ್ತರ ಪ್ರದೇಶದ ಲಖನೌನಲ್ಲಿ ಬಿಜೆಪಿ ಸೇರ್ಪಡೆಯಾದರು. ಉಪ ಮುಖ್ಯಮಂತ್ರಿ ಬ್ರಜೇಶ್‌ ಪಾಠಕ್‌ ಅವರು ವಿಭಾಕರ್‌ ಶಾಸ್ತ್ರಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. ಇದಾದ ಬಳಿಕ ಮಾತನಾಡಿದ ಶಾಸ್ತ್ರಿ, “ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಜೈ ಜವಾನ್‌, ಜೈ ಕಿಸಾನ್‌ ಎಂಬ ಘೋಷಣೆಯು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಸಾಕಾರವಾಗಲಿದೆ ಎಂಬ ನಂಬಿಕೆ” ಎಂದು ಪ್ರಧಾನಿಯನ್ನು ಹೊಗಳಿದರು.

ಕಾಂಗ್ರೆಸ್‌ಗೆ ರಾಜೀನಾಮೆ ನೀಡುವ ಕುರಿತು ವಿಭಾಕರ್‌ ಶಾಸ್ತ್ರಿ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರೇ, ನಾನು ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದರು. ಇದಾದ ಕೆಲವೇ ನಿಮಿಷದಲ್ಲಿ ಅವರು ಬಿಜೆಪಿ ಸೇರ್ಪಡೆಯಾದರು. ಮಹಾರಾಷ್ಟ್ರದಲ್ಲಿ ಅಶೊಕ್‌ ಚೌಹಾಣ್‌ ಅವರು ಕಾಂಗ್ರೆಸ್‌ ತೊರೆದು, ಬಿಜೆಪಿ ಸೇರಿದ ಬಳಿಕ ಅವರಿಗೆ ರಾಜ್ಯಸಭೆ ಟಿಕೆಟ್‌ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ