ಜಯಪ್ರದಾ 
ದೇಶ

ನಟಿ ಜಯಪ್ರದಾರನ್ನು ಕೂಡಲೇ ಅರೆಸ್ಟ್ ಮಾಡಿ: ಜಾಮೀನು ರಹಿತ ಬಂಧನದ ವಾರಂಟ್ ಹೊರಡಿಸಿದ ರಾಂಪುರ ಕೋರ್ಟ್

ಮಾಜಿ ಸಂಸದೆ ಹಾಗೂ ನಟಿ ಜಯಪ್ರದಾ ಅವರನ್ನು ಬಂಧಿಸಿ  ಫೆಬ್ರವರಿ 27 ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ರಾಂಪುರ ನ್ಯಾಯಾಲಯ ಆದೇಶ ನೀಡಿದೆ.

ಮುಂಬೈ: ಮಾಜಿ ಸಂಸದೆ ಹಾಗೂ ನಟಿ ಜಯಪ್ರದಾ ಅವರನ್ನು ಬಂಧಿಸಿ  ಫೆಬ್ರವರಿ 27 ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ರಾಂಪುರ ನ್ಯಾಯಾಲಯ ಆದೇಶ ನೀಡಿದೆ.

ಈ ಹಿಂದಿನ ಕೋರ್ಟ್ ಆದೇಶದಂತೆ ನಟಿ ಜಯಪ್ರದಾ ಅವರನ್ನು ಜನವರಿ 10ರೊಳಗೆ ಬಂಧಿಸಿ ಕೋರ್ಟಿಗೆ ಹಾಜರು ಪಡಿಸಬೇಕಿತ್ತು. ಆದರೆ, ಪೊಲೀಸರ ಕೈಗೆ ಸಿಗದಂತೆ ಜಯಪ್ರದಾ ತಪ್ಪಿಸಿಕೊಳ್ಳುತ್ತಿದ್ದಾರಂತೆ. ಹಾಗಾಗಿ ಕೋರ್ಟ್ ಪೊಲೀಸರಿಗೆ ಎಚ್ಚರಿಕೆ ನೀಡಿದೆ. ಫೆಬ್ರವರಿ 27ರಂದು ಬಂಧಿಸಿ ಕೋರ್ಟಿಗೆ ಹಾಜರು ಪಡಿಸುವಂತೆ ಸೂಚಿಸಿದೆ.

ಜಯಪ್ರದಾ ಅವರನ್ನು ಬಂಧಿಸುವಂತೆ ರಾಂಪುರದ ನ್ಯಾಯಾಲಯವು ಪೊಲೀಸ್ ವರಿಷ್ಠಾಧಿಕಾರಿಗೆ ಆದೇಶ ನೀಡಿದೆ. ವಿಶೇಷ ತಂಡ ರಚಿಸಿ ಮಾಜಿ ಸಂಸರು, ನಟಿಯೂ ಆಗಿರುವ ಜಯಪ್ರದಾ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ಆದೇಶಿಸಲಾಗಿದೆ.

2019ರ ಎರಡು ಪ್ರಕರಣಗಳಲ್ಲಿ ಜಯಪ್ರದಾ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ. ಅವರು 2019ರ ಲೋಕಸಭೆ ಚುನಾವಣೆಯಲ್ಲಿ ರಾಂಪುರದಿಂದ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು. ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ನಟಿ ತಲೆಮರೆಸಿಕೊಂಡಿದ್ದಾರೆ.

ವರದಿಯ ಪ್ರಕಾರ, ಹಿರಿಯ ಪ್ರಾಸಿಕ್ಯೂಷನ್ ಅಧಿಕಾರಿ ಅಮರನಾಥ್ ತಿವಾರಿ ಅವರು ಏಳನೇ ಬಾರಿಗೆ ಜಾಮೀನು ರಹಿತ ವಾರೆಂಟ್ ಹೊರಡಿಸಿದ ನಂತರವೂ ಜಯಪ್ರದಾ ನ್ಯಾಯಾಲಯಕ್ಕೆ ವಿಚಾರಣೆಗೆ ಬಂದಿಲ್ಲ ಎಂದು ಹೇಳಿದರು.

ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ನಟಿ ಹಾಗೂ ರಾಜಕಾರಣಿ ಜಯಪ್ರದಾ ತಲೆಮರೆಸಿಕೊಂಡಿದ್ದಾರೆ. ಜಯಪ್ರದಾ ವಿವಾದಕ್ಕೆ ಸಿಲುಕುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ ಚೆನ್ನೈನ ನ್ಯಾಯಾಲಯವು ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯನ್ನು ತಪ್ಪಿತಸ್ಥರೆಂದು ಘೋಷಿಸಿತು.

ಆಕೆಗೆ ಆರು ತಿಂಗಳ ಜೈಲು ಶಿಕ್ಷೆ ಹಾಗೂ 5 ಸಾವಿರ ರೂ. ವರದಿಗಳ ಪ್ರಕಾರ, ಜಯಪ್ರದಾ ಅವರ ಥಿಯೇಟರ್‌ನ ಕಾರ್ಮಿಕರಿಗೆ ಇಎಸ್‌ಐ ಹಣವನ್ನು ಪಾವತಿಸಿಲ್ಲ ಎಂದು ಆರೋಪಿಸಲಾಗಿದೆ. ನಟಿ ಈ ಆರೋಪವನ್ನು ಒಪ್ಪಿಕೊಂಡರು ಮತ್ತು ಪ್ರಕರಣವನ್ನು ವಜಾಗೊಳಿಸುವಂತೆ ಕೋರಿ ದೀರ್ಘ ಬಾಕಿಯನ್ನು ತೆರವುಗೊಳಿಸುವುದಾಗಿ ಭರವಸೆ ನೀಡಿದರು. ಆದರೆ, ನ್ಯಾಯಾಲಯ ಆಕೆಯ ಮನವಿಯನ್ನು ತಿರಸ್ಕರಿಸಿ ದಂಡ ಮತ್ತು ಜೈಲು ಶಿಕ್ಷೆ ವಿಧಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ